ಮೇಕ್‌ಮೈಟ್ರಿಪ್‌ನಲ್ಲಿ ಹೆಚ್ಚು ಆಧ್ಯಾತ್ಮಿಕ ಸ್ಥಳಗಳನ್ನು ಕಾಯ್ದಿರಿಸಿದ ಪ್ರವಾಸಿಗರು

ಬೆಂಗಳೂರು: ಮೇಕ್‌ ಮೈ ಟ್ರಿಪ್‌ ತಮ್ಮ ಒಟ್ಟು ಬುಕ್ಕಿಂಗ್‌ನಲ್ಲಿ ಶೇ. 10ರಷ್ಟು ಬುಕ್ಕಿಂಗ್‌ ಆಧ್ಯಾತ್ಮಿಕ ಕೇಂದ್ರಗಳಲ್ಲೇ ಆಗುತ್ತಿದೆ ಎಂದು ಮೇಕ್‌ ಮೈ ಟ್ರಿಪ್‌ ತಮ್ಮ ಮೂರನೇ ತ್ರೈಮಾಸಿಕದಲ್ಲಿ ಮಾಹಿತಿ ನೀಡಿದೆ.

ಬುಕ್ಕಿಂಗ್‌ ಪ್ಲಾಟ್‌ಫಾರಂನಲ್ಲಿ ಅಧ್ಯಾತ್ಮಿಕ ಸ್ಥಳಗಳ ಹುಡುಕಾಟವು 2022 ಕ್ಕೆ ಹೋಲಿಸಿದರೆ 2024 ರಲ್ಲಿ ಶೇ,46ರಷ್ಟು ಹೆಚ್ಚಳವಾಗಿದೆ. ಇದು ಐಷಾರಾಮಿ ಪ್ರವಾಸಕ್ಕಿಂತ ಅರ್ಥವತ್ತಾದ ಮತ್ತು ಅಧ್ಯಾತ್ಮಿಕವಾಗಿ ಶ್ರೀಮಂತವಾದ ಪ್ರಯಾಣಕ್ಕೆ ಪ್ರವಾಸಿಗರು ಹೆಚ್ಚು ಆದ್ಯತೆ ನೀಡುತ್ತಿರುವುದನ್ನು ಸೂಚಿಸುತ್ತಿದೆ.

ನಂಬಿಕೆ ಮತ್ತು ಸಂಪ್ರದಾಯವನ್ನು ಆಧರಿಸಿರುವ ಈ ತೀರ್ಥಯಾತ್ರೆಗಳಲ್ಲಿ ಸಾಮಾನ್ಯವಾಗಿ ಕುಟುಂಬಗಳೂ ಜೊತೆಗಿರುತ್ತವೆ. ಹೀಗಾಗಿ, ವೃದ್ಧರೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿರುತ್ತಾರೆ. ಇದರಿಂದ ಇಡೀ ಕುಟುಂಬದ ಅಗತ್ಯಕ್ಕೆ ಅನುಗುಣವಾದ ವಾಸವನ್ನು ಹುಡುಕಿಕೊಳ್ಳುವ ಅನಿವಾರ್ಯ ಇರುತ್ತದೆ. 26 ಪ್ರಮುಖ ಅಧ್ಯಾತ್ಮಿಕ ಸ್ಥಳಗಳಲ್ಲಿ 450 ಕ್ಕೂ ಹೆಚ್ಚು ಹೋಟೆಲ್‌ಗಳು ಮತ್ತು ಹೋಮ್‌ಸ್ಟೇಗಳನ್ನು ಇದರ ಅಡಿಯಲ್ಲಿ ಗುರುತು ಮಾಡಲಾಗಿದೆ. ಇದರಡಿಯಲ್ಲಿ ಬುಕ್ಕಿಂಗ್‌ ಹೆಚ್ಚಾಗಿ ಆಗಿದೆ.

ಹೋಟೆಲ್, ಬೆಳವಣಿಗೆ ಮತ್ತು ಅಭಿವೃದ್ಧಿಗೊಳ್ಳುತ್ತಿರುವ ಉದ್ಯಮದ ಮುಖ್ಯ ಉತ್ಪನ್ನ ಅಧಿಕಾರಿ ಅಂಕಿತ್ ಖನ್ನಾ ಮಾತನಾಡಿ, “ಈಗ ಉತ್ತಮ ರಸ್ತೆಗಳು, ರೈಲು ಮತ್ತು ವಿಮಾನ ಸಂಪರ್ಕದಿಂದಾಗಿ ಭಾರತದ ಅಧ್ಯಾತ್ಮಿಕ ತಾಣಗಳಿಗೆ ತೆರಳುವುದು ಹಿಂದಿಗಿಂತ ಈಗ ಸುಲಭವಾಗಿದೆ. ಭಕ್ತರು ಇಷ್ಟಪಟ್ಟಿರುವುದು ಎಂಬ ಗುರುತಿನ ಮೂಲಕ ಭಕ್ತರಿಗೆ ತಮ್ಮ ಅಗತ್ಯಕ್ಕೆ ಅನುಗುಣವಾದ ವಾಸಸ್ಥಳ ಸಿಗುತ್ತದೆ ಎಂಬುದನ್ನು ಖಾತ್ರಪಡಿಸಿಕೊಳ್ಳಲಾಗುತ್ತದೆ. ಅಸಲಿ ಪ್ರವಾಸಿಗರ ಒಳನೋಟಗಳು ಮತ್ತು ತಂತ್ರಜ್ಞಾನವನ್ನು ಬಳಸಿಕೊಂಡು ಅಭಿವೃದ್ಧಿಪಡಿಸಿರುವ ಇದು ಪ್ರವಾಸಿಗರು ಅತ್ಯಂತ ಸೂಕ್ತವಾದ ವಾಸವನ್ನು ಹುಡುಕಿಕೊಳ್ಳಲು ಸಹಾಯ ಮಾಡುತ್ತದೆ. ಇದರ ಉದ್ದೇಶ ಅತ್ಯಂತ ಸರಳವಾಗಿದ್ದು, ಯೋಜನೆ ಮಾಡುವ ಒತ್ತಡವನ್ನು ಕಡಿಮೆ ಮಾಡುವುದಾಗಿದೆ. ಇದರಿಂದ, ಭಕ್ತರು ತಮ್ಮ ನಂಬಿಕೆ ಮತ್ತು ಅನುಭವಕ್ಕೆ ಮುಖ್ಯವಾದ ಅಂಶಗಳ ಮೇಲೆ ಹೆಚ್ಚು ಗಮನ ಹರಿಸಬಹುದಾಗಿದೆ ಎಂದರು.

Ramesh Babu

Journalist

Recent Posts

ತಿರುಮಗೊಂಡಹಳ್ಳಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಘಾಟಿ ಪ್ರಾಧಿಕಾರದ ಸದಸ್ಯರ ಮನವಿ

ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ‌‌ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…

8 hours ago

ಅಧಿಕಾರಿಗಳಲ್ಲಿ ಮಾಹಿತಿ ಕೊರತೆಯಿಂದ ಆರ್‌ಟಿಐ ಅರ್ಜಿಗಳ ವಿಲೇವಾರಿ ವಿಳಂಬ- ಮಾಹಿತಿ ಆಯುಕ್ತ ಹರೀಶ್ ಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…

10 hours ago

ಧರ್ಮಸ್ಥಳ ಕೇಸ್ ವಿಚಾರ: ತನಿಖೆ ಬೇಗ ಮುಗಿಸಿ ನ್ಯಾಯ ಕೊಡಿಸಿ ಭಾರತೀಯ ಪರಂಪರೆಯನ್ನ ಉಳಿಸಬೇಕು- ಸಚಿವ ವಿ.ಸೋಮಣ್ಣ

ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…

10 hours ago

ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ 20ನೇ ಕಂತಿನ ಹಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ…

11 hours ago

ಪ್ರಜ್ವಲ್ ರೇವಣ್ಣ ಕೇಸ್: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಜೀವನ‌ಪರ್ಯಂತ ಸೆರೆಮನೆ ವಾಸ

ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ದೋಷಿ ಎಂದು…

13 hours ago

ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ

ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…

22 hours ago