ಮೇಕ್‌ಮೈಟ್ರಿಪ್‌ನಲ್ಲಿ ಹೆಚ್ಚು ಆಧ್ಯಾತ್ಮಿಕ ಸ್ಥಳಗಳನ್ನು ಕಾಯ್ದಿರಿಸಿದ ಪ್ರವಾಸಿಗರು

ಬೆಂಗಳೂರು: ಮೇಕ್‌ ಮೈ ಟ್ರಿಪ್‌ ತಮ್ಮ ಒಟ್ಟು ಬುಕ್ಕಿಂಗ್‌ನಲ್ಲಿ ಶೇ. 10ರಷ್ಟು ಬುಕ್ಕಿಂಗ್‌ ಆಧ್ಯಾತ್ಮಿಕ ಕೇಂದ್ರಗಳಲ್ಲೇ ಆಗುತ್ತಿದೆ ಎಂದು ಮೇಕ್‌ ಮೈ ಟ್ರಿಪ್‌ ತಮ್ಮ ಮೂರನೇ ತ್ರೈಮಾಸಿಕದಲ್ಲಿ ಮಾಹಿತಿ ನೀಡಿದೆ.

ಬುಕ್ಕಿಂಗ್‌ ಪ್ಲಾಟ್‌ಫಾರಂನಲ್ಲಿ ಅಧ್ಯಾತ್ಮಿಕ ಸ್ಥಳಗಳ ಹುಡುಕಾಟವು 2022 ಕ್ಕೆ ಹೋಲಿಸಿದರೆ 2024 ರಲ್ಲಿ ಶೇ,46ರಷ್ಟು ಹೆಚ್ಚಳವಾಗಿದೆ. ಇದು ಐಷಾರಾಮಿ ಪ್ರವಾಸಕ್ಕಿಂತ ಅರ್ಥವತ್ತಾದ ಮತ್ತು ಅಧ್ಯಾತ್ಮಿಕವಾಗಿ ಶ್ರೀಮಂತವಾದ ಪ್ರಯಾಣಕ್ಕೆ ಪ್ರವಾಸಿಗರು ಹೆಚ್ಚು ಆದ್ಯತೆ ನೀಡುತ್ತಿರುವುದನ್ನು ಸೂಚಿಸುತ್ತಿದೆ.

ನಂಬಿಕೆ ಮತ್ತು ಸಂಪ್ರದಾಯವನ್ನು ಆಧರಿಸಿರುವ ಈ ತೀರ್ಥಯಾತ್ರೆಗಳಲ್ಲಿ ಸಾಮಾನ್ಯವಾಗಿ ಕುಟುಂಬಗಳೂ ಜೊತೆಗಿರುತ್ತವೆ. ಹೀಗಾಗಿ, ವೃದ್ಧರೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿರುತ್ತಾರೆ. ಇದರಿಂದ ಇಡೀ ಕುಟುಂಬದ ಅಗತ್ಯಕ್ಕೆ ಅನುಗುಣವಾದ ವಾಸವನ್ನು ಹುಡುಕಿಕೊಳ್ಳುವ ಅನಿವಾರ್ಯ ಇರುತ್ತದೆ. 26 ಪ್ರಮುಖ ಅಧ್ಯಾತ್ಮಿಕ ಸ್ಥಳಗಳಲ್ಲಿ 450 ಕ್ಕೂ ಹೆಚ್ಚು ಹೋಟೆಲ್‌ಗಳು ಮತ್ತು ಹೋಮ್‌ಸ್ಟೇಗಳನ್ನು ಇದರ ಅಡಿಯಲ್ಲಿ ಗುರುತು ಮಾಡಲಾಗಿದೆ. ಇದರಡಿಯಲ್ಲಿ ಬುಕ್ಕಿಂಗ್‌ ಹೆಚ್ಚಾಗಿ ಆಗಿದೆ.

ಹೋಟೆಲ್, ಬೆಳವಣಿಗೆ ಮತ್ತು ಅಭಿವೃದ್ಧಿಗೊಳ್ಳುತ್ತಿರುವ ಉದ್ಯಮದ ಮುಖ್ಯ ಉತ್ಪನ್ನ ಅಧಿಕಾರಿ ಅಂಕಿತ್ ಖನ್ನಾ ಮಾತನಾಡಿ, “ಈಗ ಉತ್ತಮ ರಸ್ತೆಗಳು, ರೈಲು ಮತ್ತು ವಿಮಾನ ಸಂಪರ್ಕದಿಂದಾಗಿ ಭಾರತದ ಅಧ್ಯಾತ್ಮಿಕ ತಾಣಗಳಿಗೆ ತೆರಳುವುದು ಹಿಂದಿಗಿಂತ ಈಗ ಸುಲಭವಾಗಿದೆ. ಭಕ್ತರು ಇಷ್ಟಪಟ್ಟಿರುವುದು ಎಂಬ ಗುರುತಿನ ಮೂಲಕ ಭಕ್ತರಿಗೆ ತಮ್ಮ ಅಗತ್ಯಕ್ಕೆ ಅನುಗುಣವಾದ ವಾಸಸ್ಥಳ ಸಿಗುತ್ತದೆ ಎಂಬುದನ್ನು ಖಾತ್ರಪಡಿಸಿಕೊಳ್ಳಲಾಗುತ್ತದೆ. ಅಸಲಿ ಪ್ರವಾಸಿಗರ ಒಳನೋಟಗಳು ಮತ್ತು ತಂತ್ರಜ್ಞಾನವನ್ನು ಬಳಸಿಕೊಂಡು ಅಭಿವೃದ್ಧಿಪಡಿಸಿರುವ ಇದು ಪ್ರವಾಸಿಗರು ಅತ್ಯಂತ ಸೂಕ್ತವಾದ ವಾಸವನ್ನು ಹುಡುಕಿಕೊಳ್ಳಲು ಸಹಾಯ ಮಾಡುತ್ತದೆ. ಇದರ ಉದ್ದೇಶ ಅತ್ಯಂತ ಸರಳವಾಗಿದ್ದು, ಯೋಜನೆ ಮಾಡುವ ಒತ್ತಡವನ್ನು ಕಡಿಮೆ ಮಾಡುವುದಾಗಿದೆ. ಇದರಿಂದ, ಭಕ್ತರು ತಮ್ಮ ನಂಬಿಕೆ ಮತ್ತು ಅನುಭವಕ್ಕೆ ಮುಖ್ಯವಾದ ಅಂಶಗಳ ಮೇಲೆ ಹೆಚ್ಚು ಗಮನ ಹರಿಸಬಹುದಾಗಿದೆ ಎಂದರು.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

23 minutes ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

2 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

2 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

2 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

5 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

8 hours ago