ಮೇಕ್‌ಮೈಟ್ರಿಪ್‌ನಲ್ಲಿ ಹೆಚ್ಚು ಆಧ್ಯಾತ್ಮಿಕ ಸ್ಥಳಗಳನ್ನು ಕಾಯ್ದಿರಿಸಿದ ಪ್ರವಾಸಿಗರು

ಬೆಂಗಳೂರು: ಮೇಕ್‌ ಮೈ ಟ್ರಿಪ್‌ ತಮ್ಮ ಒಟ್ಟು ಬುಕ್ಕಿಂಗ್‌ನಲ್ಲಿ ಶೇ. 10ರಷ್ಟು ಬುಕ್ಕಿಂಗ್‌ ಆಧ್ಯಾತ್ಮಿಕ ಕೇಂದ್ರಗಳಲ್ಲೇ ಆಗುತ್ತಿದೆ ಎಂದು ಮೇಕ್‌ ಮೈ ಟ್ರಿಪ್‌ ತಮ್ಮ ಮೂರನೇ ತ್ರೈಮಾಸಿಕದಲ್ಲಿ ಮಾಹಿತಿ ನೀಡಿದೆ.

ಬುಕ್ಕಿಂಗ್‌ ಪ್ಲಾಟ್‌ಫಾರಂನಲ್ಲಿ ಅಧ್ಯಾತ್ಮಿಕ ಸ್ಥಳಗಳ ಹುಡುಕಾಟವು 2022 ಕ್ಕೆ ಹೋಲಿಸಿದರೆ 2024 ರಲ್ಲಿ ಶೇ,46ರಷ್ಟು ಹೆಚ್ಚಳವಾಗಿದೆ. ಇದು ಐಷಾರಾಮಿ ಪ್ರವಾಸಕ್ಕಿಂತ ಅರ್ಥವತ್ತಾದ ಮತ್ತು ಅಧ್ಯಾತ್ಮಿಕವಾಗಿ ಶ್ರೀಮಂತವಾದ ಪ್ರಯಾಣಕ್ಕೆ ಪ್ರವಾಸಿಗರು ಹೆಚ್ಚು ಆದ್ಯತೆ ನೀಡುತ್ತಿರುವುದನ್ನು ಸೂಚಿಸುತ್ತಿದೆ.

ನಂಬಿಕೆ ಮತ್ತು ಸಂಪ್ರದಾಯವನ್ನು ಆಧರಿಸಿರುವ ಈ ತೀರ್ಥಯಾತ್ರೆಗಳಲ್ಲಿ ಸಾಮಾನ್ಯವಾಗಿ ಕುಟುಂಬಗಳೂ ಜೊತೆಗಿರುತ್ತವೆ. ಹೀಗಾಗಿ, ವೃದ್ಧರೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿರುತ್ತಾರೆ. ಇದರಿಂದ ಇಡೀ ಕುಟುಂಬದ ಅಗತ್ಯಕ್ಕೆ ಅನುಗುಣವಾದ ವಾಸವನ್ನು ಹುಡುಕಿಕೊಳ್ಳುವ ಅನಿವಾರ್ಯ ಇರುತ್ತದೆ. 26 ಪ್ರಮುಖ ಅಧ್ಯಾತ್ಮಿಕ ಸ್ಥಳಗಳಲ್ಲಿ 450 ಕ್ಕೂ ಹೆಚ್ಚು ಹೋಟೆಲ್‌ಗಳು ಮತ್ತು ಹೋಮ್‌ಸ್ಟೇಗಳನ್ನು ಇದರ ಅಡಿಯಲ್ಲಿ ಗುರುತು ಮಾಡಲಾಗಿದೆ. ಇದರಡಿಯಲ್ಲಿ ಬುಕ್ಕಿಂಗ್‌ ಹೆಚ್ಚಾಗಿ ಆಗಿದೆ.

ಹೋಟೆಲ್, ಬೆಳವಣಿಗೆ ಮತ್ತು ಅಭಿವೃದ್ಧಿಗೊಳ್ಳುತ್ತಿರುವ ಉದ್ಯಮದ ಮುಖ್ಯ ಉತ್ಪನ್ನ ಅಧಿಕಾರಿ ಅಂಕಿತ್ ಖನ್ನಾ ಮಾತನಾಡಿ, “ಈಗ ಉತ್ತಮ ರಸ್ತೆಗಳು, ರೈಲು ಮತ್ತು ವಿಮಾನ ಸಂಪರ್ಕದಿಂದಾಗಿ ಭಾರತದ ಅಧ್ಯಾತ್ಮಿಕ ತಾಣಗಳಿಗೆ ತೆರಳುವುದು ಹಿಂದಿಗಿಂತ ಈಗ ಸುಲಭವಾಗಿದೆ. ಭಕ್ತರು ಇಷ್ಟಪಟ್ಟಿರುವುದು ಎಂಬ ಗುರುತಿನ ಮೂಲಕ ಭಕ್ತರಿಗೆ ತಮ್ಮ ಅಗತ್ಯಕ್ಕೆ ಅನುಗುಣವಾದ ವಾಸಸ್ಥಳ ಸಿಗುತ್ತದೆ ಎಂಬುದನ್ನು ಖಾತ್ರಪಡಿಸಿಕೊಳ್ಳಲಾಗುತ್ತದೆ. ಅಸಲಿ ಪ್ರವಾಸಿಗರ ಒಳನೋಟಗಳು ಮತ್ತು ತಂತ್ರಜ್ಞಾನವನ್ನು ಬಳಸಿಕೊಂಡು ಅಭಿವೃದ್ಧಿಪಡಿಸಿರುವ ಇದು ಪ್ರವಾಸಿಗರು ಅತ್ಯಂತ ಸೂಕ್ತವಾದ ವಾಸವನ್ನು ಹುಡುಕಿಕೊಳ್ಳಲು ಸಹಾಯ ಮಾಡುತ್ತದೆ. ಇದರ ಉದ್ದೇಶ ಅತ್ಯಂತ ಸರಳವಾಗಿದ್ದು, ಯೋಜನೆ ಮಾಡುವ ಒತ್ತಡವನ್ನು ಕಡಿಮೆ ಮಾಡುವುದಾಗಿದೆ. ಇದರಿಂದ, ಭಕ್ತರು ತಮ್ಮ ನಂಬಿಕೆ ಮತ್ತು ಅನುಭವಕ್ಕೆ ಮುಖ್ಯವಾದ ಅಂಶಗಳ ಮೇಲೆ ಹೆಚ್ಚು ಗಮನ ಹರಿಸಬಹುದಾಗಿದೆ ಎಂದರು.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

5 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

6 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

11 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

13 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

16 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago