ಮೇಕ್‌ಮೈಟ್ರಿಪ್‌ನಲ್ಲಿ ಹೆಚ್ಚು ಆಧ್ಯಾತ್ಮಿಕ ಸ್ಥಳಗಳನ್ನು ಕಾಯ್ದಿರಿಸಿದ ಪ್ರವಾಸಿಗರು

ಬೆಂಗಳೂರು: ಮೇಕ್‌ ಮೈ ಟ್ರಿಪ್‌ ತಮ್ಮ ಒಟ್ಟು ಬುಕ್ಕಿಂಗ್‌ನಲ್ಲಿ ಶೇ. 10ರಷ್ಟು ಬುಕ್ಕಿಂಗ್‌ ಆಧ್ಯಾತ್ಮಿಕ ಕೇಂದ್ರಗಳಲ್ಲೇ ಆಗುತ್ತಿದೆ ಎಂದು ಮೇಕ್‌ ಮೈ ಟ್ರಿಪ್‌ ತಮ್ಮ ಮೂರನೇ ತ್ರೈಮಾಸಿಕದಲ್ಲಿ ಮಾಹಿತಿ ನೀಡಿದೆ.

ಬುಕ್ಕಿಂಗ್‌ ಪ್ಲಾಟ್‌ಫಾರಂನಲ್ಲಿ ಅಧ್ಯಾತ್ಮಿಕ ಸ್ಥಳಗಳ ಹುಡುಕಾಟವು 2022 ಕ್ಕೆ ಹೋಲಿಸಿದರೆ 2024 ರಲ್ಲಿ ಶೇ,46ರಷ್ಟು ಹೆಚ್ಚಳವಾಗಿದೆ. ಇದು ಐಷಾರಾಮಿ ಪ್ರವಾಸಕ್ಕಿಂತ ಅರ್ಥವತ್ತಾದ ಮತ್ತು ಅಧ್ಯಾತ್ಮಿಕವಾಗಿ ಶ್ರೀಮಂತವಾದ ಪ್ರಯಾಣಕ್ಕೆ ಪ್ರವಾಸಿಗರು ಹೆಚ್ಚು ಆದ್ಯತೆ ನೀಡುತ್ತಿರುವುದನ್ನು ಸೂಚಿಸುತ್ತಿದೆ.

ನಂಬಿಕೆ ಮತ್ತು ಸಂಪ್ರದಾಯವನ್ನು ಆಧರಿಸಿರುವ ಈ ತೀರ್ಥಯಾತ್ರೆಗಳಲ್ಲಿ ಸಾಮಾನ್ಯವಾಗಿ ಕುಟುಂಬಗಳೂ ಜೊತೆಗಿರುತ್ತವೆ. ಹೀಗಾಗಿ, ವೃದ್ಧರೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿರುತ್ತಾರೆ. ಇದರಿಂದ ಇಡೀ ಕುಟುಂಬದ ಅಗತ್ಯಕ್ಕೆ ಅನುಗುಣವಾದ ವಾಸವನ್ನು ಹುಡುಕಿಕೊಳ್ಳುವ ಅನಿವಾರ್ಯ ಇರುತ್ತದೆ. 26 ಪ್ರಮುಖ ಅಧ್ಯಾತ್ಮಿಕ ಸ್ಥಳಗಳಲ್ಲಿ 450 ಕ್ಕೂ ಹೆಚ್ಚು ಹೋಟೆಲ್‌ಗಳು ಮತ್ತು ಹೋಮ್‌ಸ್ಟೇಗಳನ್ನು ಇದರ ಅಡಿಯಲ್ಲಿ ಗುರುತು ಮಾಡಲಾಗಿದೆ. ಇದರಡಿಯಲ್ಲಿ ಬುಕ್ಕಿಂಗ್‌ ಹೆಚ್ಚಾಗಿ ಆಗಿದೆ.

ಹೋಟೆಲ್, ಬೆಳವಣಿಗೆ ಮತ್ತು ಅಭಿವೃದ್ಧಿಗೊಳ್ಳುತ್ತಿರುವ ಉದ್ಯಮದ ಮುಖ್ಯ ಉತ್ಪನ್ನ ಅಧಿಕಾರಿ ಅಂಕಿತ್ ಖನ್ನಾ ಮಾತನಾಡಿ, “ಈಗ ಉತ್ತಮ ರಸ್ತೆಗಳು, ರೈಲು ಮತ್ತು ವಿಮಾನ ಸಂಪರ್ಕದಿಂದಾಗಿ ಭಾರತದ ಅಧ್ಯಾತ್ಮಿಕ ತಾಣಗಳಿಗೆ ತೆರಳುವುದು ಹಿಂದಿಗಿಂತ ಈಗ ಸುಲಭವಾಗಿದೆ. ಭಕ್ತರು ಇಷ್ಟಪಟ್ಟಿರುವುದು ಎಂಬ ಗುರುತಿನ ಮೂಲಕ ಭಕ್ತರಿಗೆ ತಮ್ಮ ಅಗತ್ಯಕ್ಕೆ ಅನುಗುಣವಾದ ವಾಸಸ್ಥಳ ಸಿಗುತ್ತದೆ ಎಂಬುದನ್ನು ಖಾತ್ರಪಡಿಸಿಕೊಳ್ಳಲಾಗುತ್ತದೆ. ಅಸಲಿ ಪ್ರವಾಸಿಗರ ಒಳನೋಟಗಳು ಮತ್ತು ತಂತ್ರಜ್ಞಾನವನ್ನು ಬಳಸಿಕೊಂಡು ಅಭಿವೃದ್ಧಿಪಡಿಸಿರುವ ಇದು ಪ್ರವಾಸಿಗರು ಅತ್ಯಂತ ಸೂಕ್ತವಾದ ವಾಸವನ್ನು ಹುಡುಕಿಕೊಳ್ಳಲು ಸಹಾಯ ಮಾಡುತ್ತದೆ. ಇದರ ಉದ್ದೇಶ ಅತ್ಯಂತ ಸರಳವಾಗಿದ್ದು, ಯೋಜನೆ ಮಾಡುವ ಒತ್ತಡವನ್ನು ಕಡಿಮೆ ಮಾಡುವುದಾಗಿದೆ. ಇದರಿಂದ, ಭಕ್ತರು ತಮ್ಮ ನಂಬಿಕೆ ಮತ್ತು ಅನುಭವಕ್ಕೆ ಮುಖ್ಯವಾದ ಅಂಶಗಳ ಮೇಲೆ ಹೆಚ್ಚು ಗಮನ ಹರಿಸಬಹುದಾಗಿದೆ ಎಂದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

3 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

14 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

15 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

16 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

18 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago