ಬೆಂಗಳೂರು: ಮೇಕ್ ಮೈ ಟ್ರಿಪ್ ತಮ್ಮ ಒಟ್ಟು ಬುಕ್ಕಿಂಗ್ನಲ್ಲಿ ಶೇ. 10ರಷ್ಟು ಬುಕ್ಕಿಂಗ್ ಆಧ್ಯಾತ್ಮಿಕ ಕೇಂದ್ರಗಳಲ್ಲೇ ಆಗುತ್ತಿದೆ ಎಂದು ಮೇಕ್ ಮೈ ಟ್ರಿಪ್ ತಮ್ಮ ಮೂರನೇ ತ್ರೈಮಾಸಿಕದಲ್ಲಿ ಮಾಹಿತಿ ನೀಡಿದೆ.
ಬುಕ್ಕಿಂಗ್ ಪ್ಲಾಟ್ಫಾರಂನಲ್ಲಿ ಅಧ್ಯಾತ್ಮಿಕ ಸ್ಥಳಗಳ ಹುಡುಕಾಟವು 2022 ಕ್ಕೆ ಹೋಲಿಸಿದರೆ 2024 ರಲ್ಲಿ ಶೇ,46ರಷ್ಟು ಹೆಚ್ಚಳವಾಗಿದೆ. ಇದು ಐಷಾರಾಮಿ ಪ್ರವಾಸಕ್ಕಿಂತ ಅರ್ಥವತ್ತಾದ ಮತ್ತು ಅಧ್ಯಾತ್ಮಿಕವಾಗಿ ಶ್ರೀಮಂತವಾದ ಪ್ರಯಾಣಕ್ಕೆ ಪ್ರವಾಸಿಗರು ಹೆಚ್ಚು ಆದ್ಯತೆ ನೀಡುತ್ತಿರುವುದನ್ನು ಸೂಚಿಸುತ್ತಿದೆ.
ನಂಬಿಕೆ ಮತ್ತು ಸಂಪ್ರದಾಯವನ್ನು ಆಧರಿಸಿರುವ ಈ ತೀರ್ಥಯಾತ್ರೆಗಳಲ್ಲಿ ಸಾಮಾನ್ಯವಾಗಿ ಕುಟುಂಬಗಳೂ ಜೊತೆಗಿರುತ್ತವೆ. ಹೀಗಾಗಿ, ವೃದ್ಧರೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿರುತ್ತಾರೆ. ಇದರಿಂದ ಇಡೀ ಕುಟುಂಬದ ಅಗತ್ಯಕ್ಕೆ ಅನುಗುಣವಾದ ವಾಸವನ್ನು ಹುಡುಕಿಕೊಳ್ಳುವ ಅನಿವಾರ್ಯ ಇರುತ್ತದೆ. 26 ಪ್ರಮುಖ ಅಧ್ಯಾತ್ಮಿಕ ಸ್ಥಳಗಳಲ್ಲಿ 450 ಕ್ಕೂ ಹೆಚ್ಚು ಹೋಟೆಲ್ಗಳು ಮತ್ತು ಹೋಮ್ಸ್ಟೇಗಳನ್ನು ಇದರ ಅಡಿಯಲ್ಲಿ ಗುರುತು ಮಾಡಲಾಗಿದೆ. ಇದರಡಿಯಲ್ಲಿ ಬುಕ್ಕಿಂಗ್ ಹೆಚ್ಚಾಗಿ ಆಗಿದೆ.
ಹೋಟೆಲ್, ಬೆಳವಣಿಗೆ ಮತ್ತು ಅಭಿವೃದ್ಧಿಗೊಳ್ಳುತ್ತಿರುವ ಉದ್ಯಮದ ಮುಖ್ಯ ಉತ್ಪನ್ನ ಅಧಿಕಾರಿ ಅಂಕಿತ್ ಖನ್ನಾ ಮಾತನಾಡಿ, “ಈಗ ಉತ್ತಮ ರಸ್ತೆಗಳು, ರೈಲು ಮತ್ತು ವಿಮಾನ ಸಂಪರ್ಕದಿಂದಾಗಿ ಭಾರತದ ಅಧ್ಯಾತ್ಮಿಕ ತಾಣಗಳಿಗೆ ತೆರಳುವುದು ಹಿಂದಿಗಿಂತ ಈಗ ಸುಲಭವಾಗಿದೆ. ಭಕ್ತರು ಇಷ್ಟಪಟ್ಟಿರುವುದು ಎಂಬ ಗುರುತಿನ ಮೂಲಕ ಭಕ್ತರಿಗೆ ತಮ್ಮ ಅಗತ್ಯಕ್ಕೆ ಅನುಗುಣವಾದ ವಾಸಸ್ಥಳ ಸಿಗುತ್ತದೆ ಎಂಬುದನ್ನು ಖಾತ್ರಪಡಿಸಿಕೊಳ್ಳಲಾಗುತ್ತದೆ. ಅಸಲಿ ಪ್ರವಾಸಿಗರ ಒಳನೋಟಗಳು ಮತ್ತು ತಂತ್ರಜ್ಞಾನವನ್ನು ಬಳಸಿಕೊಂಡು ಅಭಿವೃದ್ಧಿಪಡಿಸಿರುವ ಇದು ಪ್ರವಾಸಿಗರು ಅತ್ಯಂತ ಸೂಕ್ತವಾದ ವಾಸವನ್ನು ಹುಡುಕಿಕೊಳ್ಳಲು ಸಹಾಯ ಮಾಡುತ್ತದೆ. ಇದರ ಉದ್ದೇಶ ಅತ್ಯಂತ ಸರಳವಾಗಿದ್ದು, ಯೋಜನೆ ಮಾಡುವ ಒತ್ತಡವನ್ನು ಕಡಿಮೆ ಮಾಡುವುದಾಗಿದೆ. ಇದರಿಂದ, ಭಕ್ತರು ತಮ್ಮ ನಂಬಿಕೆ ಮತ್ತು ಅನುಭವಕ್ಕೆ ಮುಖ್ಯವಾದ ಅಂಶಗಳ ಮೇಲೆ ಹೆಚ್ಚು ಗಮನ ಹರಿಸಬಹುದಾಗಿದೆ ಎಂದರು.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…