ಮೇಕ್‌ಮೈಟ್ರಿಪ್‌ನಲ್ಲಿ ಹೆಚ್ಚು ಆಧ್ಯಾತ್ಮಿಕ ಸ್ಥಳಗಳನ್ನು ಕಾಯ್ದಿರಿಸಿದ ಪ್ರವಾಸಿಗರು

ಬೆಂಗಳೂರು: ಮೇಕ್‌ ಮೈ ಟ್ರಿಪ್‌ ತಮ್ಮ ಒಟ್ಟು ಬುಕ್ಕಿಂಗ್‌ನಲ್ಲಿ ಶೇ. 10ರಷ್ಟು ಬುಕ್ಕಿಂಗ್‌ ಆಧ್ಯಾತ್ಮಿಕ ಕೇಂದ್ರಗಳಲ್ಲೇ ಆಗುತ್ತಿದೆ ಎಂದು ಮೇಕ್‌ ಮೈ ಟ್ರಿಪ್‌ ತಮ್ಮ ಮೂರನೇ ತ್ರೈಮಾಸಿಕದಲ್ಲಿ ಮಾಹಿತಿ ನೀಡಿದೆ.

ಬುಕ್ಕಿಂಗ್‌ ಪ್ಲಾಟ್‌ಫಾರಂನಲ್ಲಿ ಅಧ್ಯಾತ್ಮಿಕ ಸ್ಥಳಗಳ ಹುಡುಕಾಟವು 2022 ಕ್ಕೆ ಹೋಲಿಸಿದರೆ 2024 ರಲ್ಲಿ ಶೇ,46ರಷ್ಟು ಹೆಚ್ಚಳವಾಗಿದೆ. ಇದು ಐಷಾರಾಮಿ ಪ್ರವಾಸಕ್ಕಿಂತ ಅರ್ಥವತ್ತಾದ ಮತ್ತು ಅಧ್ಯಾತ್ಮಿಕವಾಗಿ ಶ್ರೀಮಂತವಾದ ಪ್ರಯಾಣಕ್ಕೆ ಪ್ರವಾಸಿಗರು ಹೆಚ್ಚು ಆದ್ಯತೆ ನೀಡುತ್ತಿರುವುದನ್ನು ಸೂಚಿಸುತ್ತಿದೆ.

ನಂಬಿಕೆ ಮತ್ತು ಸಂಪ್ರದಾಯವನ್ನು ಆಧರಿಸಿರುವ ಈ ತೀರ್ಥಯಾತ್ರೆಗಳಲ್ಲಿ ಸಾಮಾನ್ಯವಾಗಿ ಕುಟುಂಬಗಳೂ ಜೊತೆಗಿರುತ್ತವೆ. ಹೀಗಾಗಿ, ವೃದ್ಧರೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿರುತ್ತಾರೆ. ಇದರಿಂದ ಇಡೀ ಕುಟುಂಬದ ಅಗತ್ಯಕ್ಕೆ ಅನುಗುಣವಾದ ವಾಸವನ್ನು ಹುಡುಕಿಕೊಳ್ಳುವ ಅನಿವಾರ್ಯ ಇರುತ್ತದೆ. 26 ಪ್ರಮುಖ ಅಧ್ಯಾತ್ಮಿಕ ಸ್ಥಳಗಳಲ್ಲಿ 450 ಕ್ಕೂ ಹೆಚ್ಚು ಹೋಟೆಲ್‌ಗಳು ಮತ್ತು ಹೋಮ್‌ಸ್ಟೇಗಳನ್ನು ಇದರ ಅಡಿಯಲ್ಲಿ ಗುರುತು ಮಾಡಲಾಗಿದೆ. ಇದರಡಿಯಲ್ಲಿ ಬುಕ್ಕಿಂಗ್‌ ಹೆಚ್ಚಾಗಿ ಆಗಿದೆ.

ಹೋಟೆಲ್, ಬೆಳವಣಿಗೆ ಮತ್ತು ಅಭಿವೃದ್ಧಿಗೊಳ್ಳುತ್ತಿರುವ ಉದ್ಯಮದ ಮುಖ್ಯ ಉತ್ಪನ್ನ ಅಧಿಕಾರಿ ಅಂಕಿತ್ ಖನ್ನಾ ಮಾತನಾಡಿ, “ಈಗ ಉತ್ತಮ ರಸ್ತೆಗಳು, ರೈಲು ಮತ್ತು ವಿಮಾನ ಸಂಪರ್ಕದಿಂದಾಗಿ ಭಾರತದ ಅಧ್ಯಾತ್ಮಿಕ ತಾಣಗಳಿಗೆ ತೆರಳುವುದು ಹಿಂದಿಗಿಂತ ಈಗ ಸುಲಭವಾಗಿದೆ. ಭಕ್ತರು ಇಷ್ಟಪಟ್ಟಿರುವುದು ಎಂಬ ಗುರುತಿನ ಮೂಲಕ ಭಕ್ತರಿಗೆ ತಮ್ಮ ಅಗತ್ಯಕ್ಕೆ ಅನುಗುಣವಾದ ವಾಸಸ್ಥಳ ಸಿಗುತ್ತದೆ ಎಂಬುದನ್ನು ಖಾತ್ರಪಡಿಸಿಕೊಳ್ಳಲಾಗುತ್ತದೆ. ಅಸಲಿ ಪ್ರವಾಸಿಗರ ಒಳನೋಟಗಳು ಮತ್ತು ತಂತ್ರಜ್ಞಾನವನ್ನು ಬಳಸಿಕೊಂಡು ಅಭಿವೃದ್ಧಿಪಡಿಸಿರುವ ಇದು ಪ್ರವಾಸಿಗರು ಅತ್ಯಂತ ಸೂಕ್ತವಾದ ವಾಸವನ್ನು ಹುಡುಕಿಕೊಳ್ಳಲು ಸಹಾಯ ಮಾಡುತ್ತದೆ. ಇದರ ಉದ್ದೇಶ ಅತ್ಯಂತ ಸರಳವಾಗಿದ್ದು, ಯೋಜನೆ ಮಾಡುವ ಒತ್ತಡವನ್ನು ಕಡಿಮೆ ಮಾಡುವುದಾಗಿದೆ. ಇದರಿಂದ, ಭಕ್ತರು ತಮ್ಮ ನಂಬಿಕೆ ಮತ್ತು ಅನುಭವಕ್ಕೆ ಮುಖ್ಯವಾದ ಅಂಶಗಳ ಮೇಲೆ ಹೆಚ್ಚು ಗಮನ ಹರಿಸಬಹುದಾಗಿದೆ ಎಂದರು.

Ramesh Babu

Journalist

Recent Posts

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

3 hours ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

7 hours ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

1 day ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

1 day ago

ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಡ್ಯಾಂ ನಿರ್ಮಾಣ ಬೇಡ- ತಹಶೀಲ್ದಾರ್ ಮಲ್ಲಪ್ಪಗೆ ರೈತರ ಮನವಿ

ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…

1 day ago

ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರ ಪ್ರತಿಭಟನೆ

ಬೆಂಗಳೂರು ಗ್ರಾಮಾಂತರ: ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಕೆಐಎಡಿಬಿ ಹಾಗೂ…

1 day ago