ಮೇಕ್‌ಮೈಟ್ರಿಪ್‌ನಲ್ಲಿ ಹೆಚ್ಚು ಆಧ್ಯಾತ್ಮಿಕ ಸ್ಥಳಗಳನ್ನು ಕಾಯ್ದಿರಿಸಿದ ಪ್ರವಾಸಿಗರು

ಬೆಂಗಳೂರು: ಮೇಕ್‌ ಮೈ ಟ್ರಿಪ್‌ ತಮ್ಮ ಒಟ್ಟು ಬುಕ್ಕಿಂಗ್‌ನಲ್ಲಿ ಶೇ. 10ರಷ್ಟು ಬುಕ್ಕಿಂಗ್‌ ಆಧ್ಯಾತ್ಮಿಕ ಕೇಂದ್ರಗಳಲ್ಲೇ ಆಗುತ್ತಿದೆ ಎಂದು ಮೇಕ್‌ ಮೈ ಟ್ರಿಪ್‌ ತಮ್ಮ ಮೂರನೇ ತ್ರೈಮಾಸಿಕದಲ್ಲಿ ಮಾಹಿತಿ ನೀಡಿದೆ.

ಬುಕ್ಕಿಂಗ್‌ ಪ್ಲಾಟ್‌ಫಾರಂನಲ್ಲಿ ಅಧ್ಯಾತ್ಮಿಕ ಸ್ಥಳಗಳ ಹುಡುಕಾಟವು 2022 ಕ್ಕೆ ಹೋಲಿಸಿದರೆ 2024 ರಲ್ಲಿ ಶೇ,46ರಷ್ಟು ಹೆಚ್ಚಳವಾಗಿದೆ. ಇದು ಐಷಾರಾಮಿ ಪ್ರವಾಸಕ್ಕಿಂತ ಅರ್ಥವತ್ತಾದ ಮತ್ತು ಅಧ್ಯಾತ್ಮಿಕವಾಗಿ ಶ್ರೀಮಂತವಾದ ಪ್ರಯಾಣಕ್ಕೆ ಪ್ರವಾಸಿಗರು ಹೆಚ್ಚು ಆದ್ಯತೆ ನೀಡುತ್ತಿರುವುದನ್ನು ಸೂಚಿಸುತ್ತಿದೆ.

ನಂಬಿಕೆ ಮತ್ತು ಸಂಪ್ರದಾಯವನ್ನು ಆಧರಿಸಿರುವ ಈ ತೀರ್ಥಯಾತ್ರೆಗಳಲ್ಲಿ ಸಾಮಾನ್ಯವಾಗಿ ಕುಟುಂಬಗಳೂ ಜೊತೆಗಿರುತ್ತವೆ. ಹೀಗಾಗಿ, ವೃದ್ಧರೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿರುತ್ತಾರೆ. ಇದರಿಂದ ಇಡೀ ಕುಟುಂಬದ ಅಗತ್ಯಕ್ಕೆ ಅನುಗುಣವಾದ ವಾಸವನ್ನು ಹುಡುಕಿಕೊಳ್ಳುವ ಅನಿವಾರ್ಯ ಇರುತ್ತದೆ. 26 ಪ್ರಮುಖ ಅಧ್ಯಾತ್ಮಿಕ ಸ್ಥಳಗಳಲ್ಲಿ 450 ಕ್ಕೂ ಹೆಚ್ಚು ಹೋಟೆಲ್‌ಗಳು ಮತ್ತು ಹೋಮ್‌ಸ್ಟೇಗಳನ್ನು ಇದರ ಅಡಿಯಲ್ಲಿ ಗುರುತು ಮಾಡಲಾಗಿದೆ. ಇದರಡಿಯಲ್ಲಿ ಬುಕ್ಕಿಂಗ್‌ ಹೆಚ್ಚಾಗಿ ಆಗಿದೆ.

ಹೋಟೆಲ್, ಬೆಳವಣಿಗೆ ಮತ್ತು ಅಭಿವೃದ್ಧಿಗೊಳ್ಳುತ್ತಿರುವ ಉದ್ಯಮದ ಮುಖ್ಯ ಉತ್ಪನ್ನ ಅಧಿಕಾರಿ ಅಂಕಿತ್ ಖನ್ನಾ ಮಾತನಾಡಿ, “ಈಗ ಉತ್ತಮ ರಸ್ತೆಗಳು, ರೈಲು ಮತ್ತು ವಿಮಾನ ಸಂಪರ್ಕದಿಂದಾಗಿ ಭಾರತದ ಅಧ್ಯಾತ್ಮಿಕ ತಾಣಗಳಿಗೆ ತೆರಳುವುದು ಹಿಂದಿಗಿಂತ ಈಗ ಸುಲಭವಾಗಿದೆ. ಭಕ್ತರು ಇಷ್ಟಪಟ್ಟಿರುವುದು ಎಂಬ ಗುರುತಿನ ಮೂಲಕ ಭಕ್ತರಿಗೆ ತಮ್ಮ ಅಗತ್ಯಕ್ಕೆ ಅನುಗುಣವಾದ ವಾಸಸ್ಥಳ ಸಿಗುತ್ತದೆ ಎಂಬುದನ್ನು ಖಾತ್ರಪಡಿಸಿಕೊಳ್ಳಲಾಗುತ್ತದೆ. ಅಸಲಿ ಪ್ರವಾಸಿಗರ ಒಳನೋಟಗಳು ಮತ್ತು ತಂತ್ರಜ್ಞಾನವನ್ನು ಬಳಸಿಕೊಂಡು ಅಭಿವೃದ್ಧಿಪಡಿಸಿರುವ ಇದು ಪ್ರವಾಸಿಗರು ಅತ್ಯಂತ ಸೂಕ್ತವಾದ ವಾಸವನ್ನು ಹುಡುಕಿಕೊಳ್ಳಲು ಸಹಾಯ ಮಾಡುತ್ತದೆ. ಇದರ ಉದ್ದೇಶ ಅತ್ಯಂತ ಸರಳವಾಗಿದ್ದು, ಯೋಜನೆ ಮಾಡುವ ಒತ್ತಡವನ್ನು ಕಡಿಮೆ ಮಾಡುವುದಾಗಿದೆ. ಇದರಿಂದ, ಭಕ್ತರು ತಮ್ಮ ನಂಬಿಕೆ ಮತ್ತು ಅನುಭವಕ್ಕೆ ಮುಖ್ಯವಾದ ಅಂಶಗಳ ಮೇಲೆ ಹೆಚ್ಚು ಗಮನ ಹರಿಸಬಹುದಾಗಿದೆ ಎಂದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

26 minutes ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

21 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago