Categories: ಕೋಲಾರ

ಮೇಲಾಧಿಕಾರಿಗಳು ಸಿಬ್ಬಂದಿಯೊಂದಿಗೆ ಉತ್ತಮ ಒಡನಾಟ ಇದ್ದಾಗ ಸಂಸ್ಥೆಗೆ ಒಳ್ಳೆಯ ಹೆಸರು- ವಿ.ಬಸವರಾಜ್

ಕೋಲಾರ: ಸಾರಿಗೆ ಸಂಸ್ಥೆಯ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಒಳ್ಳೆಯ ಒಡನಾಟ ಇಟ್ಟುಕೊಂಡು ಅವರಿಂದ ಉತ್ತಮ ಕೆಲಸವನ್ನು ತೆಗೆದುಕೊಂಡಾಗ ಮಾತ್ರವೇ ಸಾರಿಗೆ ಸಂಸ್ಥೆಗೆ ಉತ್ತಮ ಗೌರವ ಮತ್ತು ಒಳ್ಳೆಯ ಹೆಸರು ಬರುತ್ತದೆ ಎಂದು ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಬಸವರಾಜ್ ತಿಳಿಸಿದರು.

ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿರುವ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ ಘಟಕ ವ್ಯವಸ್ಥಾಪಕ ಅಪ್ಪಿರೆಡ್ಡಿ ಹಾಗೂ ಸಂಚಾರಿ ನಿಯಂತ್ರಣಾಧಿಕಾರಿ ವೈ.ವಿ ರಮೇಶ್ ಕುಮಾರ್ ಅವರಿಗೆ ಅಭಿನಂದಿಸಿ ಮಾತನಾಡಿದ ಅವರು, ಸಾರಿಗೆ ಸಂಸ್ಥೆಯಲ್ಲಿ ಚಾಲಕರು ಮತ್ತು ನಿರ್ವಾಹಕರ ಸೇವೆ ಶ್ಲಾಘನೀಯ. ಅವರಿಂದಲೇ ಸಂಸ್ಥೆಯ ಉಳಿವು. ಯಾವುದೇ ಕೆಲಸವಾಗಲಿ ಸಂಸ್ಥೆಯಲ್ಲಿ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಇವತ್ತು ನೀವು ಸಂಸ್ಥೆಗೆ ಸೇವೆ ನೀಡಿ ನಿವೃತ್ತಿಯಾಗುತ್ತಿದ್ದು, ಪ್ರಯಾಣಿಕರೊಂದಿಗೆ ಗೌರವಯುತವಾಗಿ ನಡೆದುಕೊಂಡಾಗ ನಿವೃತ್ತಿ ಸಂದರ್ಭದಲ್ಲಿ ಕೂಡ ನಿಮಗೆ ನೆಮ್ಮದಿ ಸಿಗುತ್ತದೆ ಎಂದರು.

ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ವೈ.ವಿ ರಮೇಶ್ ಕುಮಾರ್, ಯಾವುದೇ ಕೆಲಸವಾಗಲಿ ಅಲ್ಲಿನ ಸಂಸ್ಥೆಯನ್ನು ದೇವರ ರೀತಿಯಲ್ಲಿ ನೋಡಿಕೊಳ್ಳಬೇಕು. ನಾವು ಸಂಸ್ಥೆಗೆ ಸೇವಕರು ಅಷ್ಟೇ ನಮ್ಮ ಸೇವೆಯ ಸರಿ ತಪ್ಪುಗಳನ್ನು ಜನ ನಿರ್ಧರಿಸುತ್ತಾರೆ. ಇವತ್ತು ಸನ್ಮಾನಿಸುತ್ತಿರುವ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಕಾರ್ಯವು ಕೂಡ ಶ್ಲಾಘನೀಯವಾಗಿದ್ದು, ಈ ಸನ್ಮಾನ ಇತರೆ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಮಾದರಿಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ವಿಭಾಗೀಯ ಡಿ.ಟಿ.ಒ ಜಯಶಾಂತಕುಮಾರ್, ಬಸ್ ನಿಲ್ದಾಣಾಧಿಕಾರಿ ಶಿವಕುಮಾರ್, ಅಧಿಕಾರಿಗಳಾದ ಶ್ರೀನಿವಾಸಮೂರ್ತಿ, ಹೆಚ್.ಎನ್ ಶ್ರೀನಿವಾಸಗೌಡ, ಮಾನಪ್ಪ, ಜಯಚಂದ್ರ, ಅಬ್ಬಣಿ ಸೊಣ್ಣಪ್ಪ, ವಕ್ಕಲೇರಿ ಮಂಜುನಾಥ್, ಶ್ಯಾಮೇಗೌಡ, ರಾಮಮೂರ್ತಿ, ಸುಬ್ರಮಣಿ, ಶ್ರೀನಿವಾಸ್, ವೇಣು, ನಾಗರಾಜ್, ಗೋವಿಂದಪ್ಪ, ವೆಂಕಟಾಚಲಪತಿಗೌಡ ಸೇರಿದಂತೆ ಕೆ.ಎಸ್.ಆರ್.ಟಿ.ಸಿ ಚಾಲಕರು, ನಿರ್ವಾಹಕರು ಇದ್ದರು.

Ramesh Babu

Journalist

Recent Posts

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

50 minutes ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

2 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

5 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

10 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

13 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

1 day ago