ಕೋಲಾರ: ಸಾರಿಗೆ ಸಂಸ್ಥೆಯ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಒಳ್ಳೆಯ ಒಡನಾಟ ಇಟ್ಟುಕೊಂಡು ಅವರಿಂದ ಉತ್ತಮ ಕೆಲಸವನ್ನು ತೆಗೆದುಕೊಂಡಾಗ ಮಾತ್ರವೇ ಸಾರಿಗೆ ಸಂಸ್ಥೆಗೆ ಉತ್ತಮ ಗೌರವ ಮತ್ತು ಒಳ್ಳೆಯ ಹೆಸರು ಬರುತ್ತದೆ ಎಂದು ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಬಸವರಾಜ್ ತಿಳಿಸಿದರು.
ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿರುವ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ ಘಟಕ ವ್ಯವಸ್ಥಾಪಕ ಅಪ್ಪಿರೆಡ್ಡಿ ಹಾಗೂ ಸಂಚಾರಿ ನಿಯಂತ್ರಣಾಧಿಕಾರಿ ವೈ.ವಿ ರಮೇಶ್ ಕುಮಾರ್ ಅವರಿಗೆ ಅಭಿನಂದಿಸಿ ಮಾತನಾಡಿದ ಅವರು, ಸಾರಿಗೆ ಸಂಸ್ಥೆಯಲ್ಲಿ ಚಾಲಕರು ಮತ್ತು ನಿರ್ವಾಹಕರ ಸೇವೆ ಶ್ಲಾಘನೀಯ. ಅವರಿಂದಲೇ ಸಂಸ್ಥೆಯ ಉಳಿವು. ಯಾವುದೇ ಕೆಲಸವಾಗಲಿ ಸಂಸ್ಥೆಯಲ್ಲಿ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಇವತ್ತು ನೀವು ಸಂಸ್ಥೆಗೆ ಸೇವೆ ನೀಡಿ ನಿವೃತ್ತಿಯಾಗುತ್ತಿದ್ದು, ಪ್ರಯಾಣಿಕರೊಂದಿಗೆ ಗೌರವಯುತವಾಗಿ ನಡೆದುಕೊಂಡಾಗ ನಿವೃತ್ತಿ ಸಂದರ್ಭದಲ್ಲಿ ಕೂಡ ನಿಮಗೆ ನೆಮ್ಮದಿ ಸಿಗುತ್ತದೆ ಎಂದರು.
ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ವೈ.ವಿ ರಮೇಶ್ ಕುಮಾರ್, ಯಾವುದೇ ಕೆಲಸವಾಗಲಿ ಅಲ್ಲಿನ ಸಂಸ್ಥೆಯನ್ನು ದೇವರ ರೀತಿಯಲ್ಲಿ ನೋಡಿಕೊಳ್ಳಬೇಕು. ನಾವು ಸಂಸ್ಥೆಗೆ ಸೇವಕರು ಅಷ್ಟೇ ನಮ್ಮ ಸೇವೆಯ ಸರಿ ತಪ್ಪುಗಳನ್ನು ಜನ ನಿರ್ಧರಿಸುತ್ತಾರೆ. ಇವತ್ತು ಸನ್ಮಾನಿಸುತ್ತಿರುವ ಕೆಎಸ್ಆರ್ಟಿಸಿ ಅಧಿಕಾರಿಗಳ ಕಾರ್ಯವು ಕೂಡ ಶ್ಲಾಘನೀಯವಾಗಿದ್ದು, ಈ ಸನ್ಮಾನ ಇತರೆ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಮಾದರಿಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ವಿಭಾಗೀಯ ಡಿ.ಟಿ.ಒ ಜಯಶಾಂತಕುಮಾರ್, ಬಸ್ ನಿಲ್ದಾಣಾಧಿಕಾರಿ ಶಿವಕುಮಾರ್, ಅಧಿಕಾರಿಗಳಾದ ಶ್ರೀನಿವಾಸಮೂರ್ತಿ, ಹೆಚ್.ಎನ್ ಶ್ರೀನಿವಾಸಗೌಡ, ಮಾನಪ್ಪ, ಜಯಚಂದ್ರ, ಅಬ್ಬಣಿ ಸೊಣ್ಣಪ್ಪ, ವಕ್ಕಲೇರಿ ಮಂಜುನಾಥ್, ಶ್ಯಾಮೇಗೌಡ, ರಾಮಮೂರ್ತಿ, ಸುಬ್ರಮಣಿ, ಶ್ರೀನಿವಾಸ್, ವೇಣು, ನಾಗರಾಜ್, ಗೋವಿಂದಪ್ಪ, ವೆಂಕಟಾಚಲಪತಿಗೌಡ ಸೇರಿದಂತೆ ಕೆ.ಎಸ್.ಆರ್.ಟಿ.ಸಿ ಚಾಲಕರು, ನಿರ್ವಾಹಕರು ಇದ್ದರು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…