ಕೋಲಾರ: ಸಾರಿಗೆ ಸಂಸ್ಥೆಯ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಒಳ್ಳೆಯ ಒಡನಾಟ ಇಟ್ಟುಕೊಂಡು ಅವರಿಂದ ಉತ್ತಮ ಕೆಲಸವನ್ನು ತೆಗೆದುಕೊಂಡಾಗ ಮಾತ್ರವೇ ಸಾರಿಗೆ ಸಂಸ್ಥೆಗೆ ಉತ್ತಮ ಗೌರವ ಮತ್ತು ಒಳ್ಳೆಯ ಹೆಸರು ಬರುತ್ತದೆ ಎಂದು ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಬಸವರಾಜ್ ತಿಳಿಸಿದರು.
ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿರುವ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ ಘಟಕ ವ್ಯವಸ್ಥಾಪಕ ಅಪ್ಪಿರೆಡ್ಡಿ ಹಾಗೂ ಸಂಚಾರಿ ನಿಯಂತ್ರಣಾಧಿಕಾರಿ ವೈ.ವಿ ರಮೇಶ್ ಕುಮಾರ್ ಅವರಿಗೆ ಅಭಿನಂದಿಸಿ ಮಾತನಾಡಿದ ಅವರು, ಸಾರಿಗೆ ಸಂಸ್ಥೆಯಲ್ಲಿ ಚಾಲಕರು ಮತ್ತು ನಿರ್ವಾಹಕರ ಸೇವೆ ಶ್ಲಾಘನೀಯ. ಅವರಿಂದಲೇ ಸಂಸ್ಥೆಯ ಉಳಿವು. ಯಾವುದೇ ಕೆಲಸವಾಗಲಿ ಸಂಸ್ಥೆಯಲ್ಲಿ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಇವತ್ತು ನೀವು ಸಂಸ್ಥೆಗೆ ಸೇವೆ ನೀಡಿ ನಿವೃತ್ತಿಯಾಗುತ್ತಿದ್ದು, ಪ್ರಯಾಣಿಕರೊಂದಿಗೆ ಗೌರವಯುತವಾಗಿ ನಡೆದುಕೊಂಡಾಗ ನಿವೃತ್ತಿ ಸಂದರ್ಭದಲ್ಲಿ ಕೂಡ ನಿಮಗೆ ನೆಮ್ಮದಿ ಸಿಗುತ್ತದೆ ಎಂದರು.
ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ವೈ.ವಿ ರಮೇಶ್ ಕುಮಾರ್, ಯಾವುದೇ ಕೆಲಸವಾಗಲಿ ಅಲ್ಲಿನ ಸಂಸ್ಥೆಯನ್ನು ದೇವರ ರೀತಿಯಲ್ಲಿ ನೋಡಿಕೊಳ್ಳಬೇಕು. ನಾವು ಸಂಸ್ಥೆಗೆ ಸೇವಕರು ಅಷ್ಟೇ ನಮ್ಮ ಸೇವೆಯ ಸರಿ ತಪ್ಪುಗಳನ್ನು ಜನ ನಿರ್ಧರಿಸುತ್ತಾರೆ. ಇವತ್ತು ಸನ್ಮಾನಿಸುತ್ತಿರುವ ಕೆಎಸ್ಆರ್ಟಿಸಿ ಅಧಿಕಾರಿಗಳ ಕಾರ್ಯವು ಕೂಡ ಶ್ಲಾಘನೀಯವಾಗಿದ್ದು, ಈ ಸನ್ಮಾನ ಇತರೆ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಮಾದರಿಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ವಿಭಾಗೀಯ ಡಿ.ಟಿ.ಒ ಜಯಶಾಂತಕುಮಾರ್, ಬಸ್ ನಿಲ್ದಾಣಾಧಿಕಾರಿ ಶಿವಕುಮಾರ್, ಅಧಿಕಾರಿಗಳಾದ ಶ್ರೀನಿವಾಸಮೂರ್ತಿ, ಹೆಚ್.ಎನ್ ಶ್ರೀನಿವಾಸಗೌಡ, ಮಾನಪ್ಪ, ಜಯಚಂದ್ರ, ಅಬ್ಬಣಿ ಸೊಣ್ಣಪ್ಪ, ವಕ್ಕಲೇರಿ ಮಂಜುನಾಥ್, ಶ್ಯಾಮೇಗೌಡ, ರಾಮಮೂರ್ತಿ, ಸುಬ್ರಮಣಿ, ಶ್ರೀನಿವಾಸ್, ವೇಣು, ನಾಗರಾಜ್, ಗೋವಿಂದಪ್ಪ, ವೆಂಕಟಾಚಲಪತಿಗೌಡ ಸೇರಿದಂತೆ ಕೆ.ಎಸ್.ಆರ್.ಟಿ.ಸಿ ಚಾಲಕರು, ನಿರ್ವಾಹಕರು ಇದ್ದರು.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…