ಜಿಲ್ಲಾದ್ಯಂತ ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ರೈತರಿಂದ ರಾಗಿ ಖರೀದಿಯನ್ನ ಮಾಡಲಾಗುತ್ತಿದೆ. ಈಗಾಗಲೇ ನೋಂದಾಯಿತ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಗೋದಾಮುಗಳಿಗೆ ಬರುತ್ತಿದ್ದಾರೆ. ಇದರಿಂದ ಕಿಲೋ ಮೀಟರ್ ಗಟ್ಟಲೆ ರಾಗಿ ಮೂಟೆ ಹೊತ್ತ ಟ್ರ್ಯಾಕ್ಟರ್ ಗಳು ಸಾಲುಗಟ್ಟಿ ನಿಂತಿವೆ. ಈ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಮೋಹನಕುಮಾರಿ ರೈತರ ಸಮಸ್ಯೆಗಳನ್ನ ಆಲಿಸಿದರು.
ದೊಡ್ಡಬಳ್ಳಾಪುರ ತಾಲೂಕಿನ ಗುಂಡಮಗೆರೆ ಕ್ರಾಸ್ ಬಳಿಯ ಕರ್ನಾಟಕ ರಾಜ್ಯ ಉಗ್ರಣ ನಿಗಮದ ಗೋದಾಮುಗಳಲ್ಲಿ ರೈತರಿಂದ ಖರೀದಿ ಮಾಡಿದ ರಾಗಿಯನ್ನ ದಾಸ್ತಾನು ಮಾಡಲಾಗುತ್ತಿದೆ. ತಾಲೂಕಿನ ರೈತರು ಸೇರಿದಂತೆ ನೆಲಮಂಗದ ರೈತರು ಸಹ ರಾಗಿ ದಾಸ್ತಾನು ಮಾಡಲು ದೊಡ್ಡಬಳ್ಳಾಪುರಕ್ಕೆ ಬರುತ್ತಿದ್ದಾರೆ, ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬರುತ್ತಿರುವುದರಿಂದ ದಟ್ಟನೆ ಉಂಟಾಗಿದೆ.
ತಹಶೀಲ್ದಾರ್ ಮೋಹನಕುಮಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಸೂಚನೆಯಂತೆ ರಾಗಿ ದಾಸ್ತಾನು ಮಾಡಲು 50ಕ್ಕೂ ಹೆಚ್ಚು ಕಾರ್ಮಿಕರನ್ನ ತೆಗೆದುಕೊಳ್ಳಲಾಗಿದೆ, ಹೆಚ್ಚಿನ ರೈತರು ಬಂದಲ್ಲಿ ಇನ್ನೂ 30ಕ್ಕೂ ಹೆಚ್ಚು ಕಾರ್ಮಿಕರನ್ನ ತೆಗೆದು ಕೊಳ್ಳಲಾಗುವುದು ಎಂದರು.
ಎಲ್ಲಾ ರೈತರು ಒಮ್ಮಲೇ ಬರುತ್ತಿರುವುದರಿಂದ ದಟ್ಟನೆ ಉಂಟಾಗುತ್ತಿದೆ. ರಾಗಿ ಖರೀದಿಗೆ ಮಾರ್ಚ್ 31ರ ವರೆಗೂ ಸಮಯ ಇರುವುದರಿಂದ ರೈತರು ಸಾವದಾನದಿಂದ ವರ್ತಿಸಬೇಕೆಂದು ಮನವಿ ಮಾಡಿದರು. ಇನ್ನೂ ರಾಗಿ ಖರೀದಿ ಉಳಿಕೆ ಇದ್ದರೆ ಮೇ ಕೊನೆ ದಿನದವರೆಗೂ ರಾಗಿ ಖರೀದಿಸಲು ಸರ್ಕಾರ ಚಿಂತನೆ ನಡೆಸಲಿದೆ. ರೈತರು ಆತಂಕ ಪಡುವ ಅವಶ್ಯಕತೆ ಇಲ್ಲ, ಎಲ್ಲಾ ರೈತರಿಂದ ರಾಗಿ ಖರೀದಿ ಮಾಡಲಾಗುತ್ತದೆ ಎಂದರು.
ರೈತರಿಗೆ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ದೀಪ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ಮಾಡಲಾಗಿದೆ ಎಂದು ತಿಳಿಸಿದರು.
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…