ಮೇ ಕೊನೆ ದಿನದವರೆಗೂ ರಾಗಿ ಖರೀದಿಸಲು ಚಿಂತನೆ; ರೈತರು ಆತಂಕ ಪಡುವ ಅವಶ್ಯಕತೆ ಇಲ್ಲ; ಎಲ್ಲಾ ರೈತರಿಂದ ರಾಗಿ ಖರೀದಿ ಮಾಡಲಾಗುತ್ತದೆ- ತಹಶೀಲ್ದಾರ್ ಮೋಹನಕುಮಾರಿ

ಜಿಲ್ಲಾದ್ಯಂತ ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ರೈತರಿಂದ ರಾಗಿ ಖರೀದಿಯನ್ನ ಮಾಡಲಾಗುತ್ತಿದೆ. ಈಗಾಗಲೇ ನೋಂದಾಯಿತ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಗೋದಾಮುಗಳಿಗೆ ಬರುತ್ತಿದ್ದಾರೆ. ಇದರಿಂದ ಕಿಲೋ ಮೀಟರ್ ಗಟ್ಟಲೆ ರಾಗಿ ಮೂಟೆ ಹೊತ್ತ ಟ್ರ್ಯಾಕ್ಟರ್ ಗಳು ಸಾಲುಗಟ್ಟಿ ನಿಂತಿವೆ. ಈ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಮೋಹನಕುಮಾರಿ ರೈತರ ಸಮಸ್ಯೆಗಳನ್ನ ಆಲಿಸಿದರು.

ದೊಡ್ಡಬಳ್ಳಾಪುರ ತಾಲೂಕಿನ ಗುಂಡಮಗೆರೆ ಕ್ರಾಸ್ ಬಳಿಯ ಕರ್ನಾಟಕ ರಾಜ್ಯ ಉಗ್ರಣ ನಿಗಮದ ಗೋದಾಮುಗಳಲ್ಲಿ ರೈತರಿಂದ ಖರೀದಿ ಮಾಡಿದ ರಾಗಿಯನ್ನ ದಾಸ್ತಾನು ಮಾಡಲಾಗುತ್ತಿದೆ. ತಾಲೂಕಿನ ರೈತರು ಸೇರಿದಂತೆ ನೆಲಮಂಗದ ರೈತರು ಸಹ ರಾಗಿ ದಾಸ್ತಾನು ಮಾಡಲು ದೊಡ್ಡಬಳ್ಳಾಪುರಕ್ಕೆ ಬರುತ್ತಿದ್ದಾರೆ, ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬರುತ್ತಿರುವುದರಿಂದ ದಟ್ಟನೆ ಉಂಟಾಗಿದೆ.

ರಾಗಿ ದಾಸ್ತಾನು ಮಾಡಲು ರೈತರು ಎರಡರಿಂದ ಮೂರು ದಿನ ಕಾಯಬೇಕಾದ ಪರಿಸ್ಥಿತಿ ಇದೆ. ಇತ್ತೀಚೆಗೆ ಜಿಲ್ಲಾಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು, ರೈತರಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನ ಕಲ್ಪಿಸುವಂತೆ ಮತ್ತು ಕಾರ್ಮಿಕರ ಸಂಖ್ಯೆ ಹೆಚ್ಚಿಸುವಂತೆ ಸೂಚನೆ ಸಹ ನೀಡಿದ್ದರು.

ತಹಶೀಲ್ದಾರ್ ಮೋಹನಕುಮಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಸೂಚನೆಯಂತೆ ರಾಗಿ ದಾಸ್ತಾನು ಮಾಡಲು 50ಕ್ಕೂ ಹೆಚ್ಚು ಕಾರ್ಮಿಕರನ್ನ ತೆಗೆದುಕೊಳ್ಳಲಾಗಿದೆ, ಹೆಚ್ಚಿನ ರೈತರು ಬಂದಲ್ಲಿ ಇನ್ನೂ 30ಕ್ಕೂ ಹೆಚ್ಚು ಕಾರ್ಮಿಕರನ್ನ ತೆಗೆದು ಕೊಳ್ಳಲಾಗುವುದು ಎಂದರು.

ಸದ್ಯ 8 ಕೇಂದ್ರಗಳಲ್ಲಿ ರಾಗಿ ಖರೀದಿ ಪ್ರಕ್ರಿಯೆ ನಡೆಯುತ್ತಿದೆ, ದಿನಕ್ಕೆ 300 ರೈತರಿಂದ ರಾಗಿ ಖರೀದಿಯ ದಾಸ್ತಾನು ಮಾಡಲಾಗುತ್ತಿದೆ. ರೈತರಲ್ಲಿ ಮನವಿ ಮಾಡಿಕೊಂಡ ಅವರು ರೈತರು ನೋಂದಾಣಿ ಮಾಡಿಕೊಂಡ ದಿನದಂದ್ದು ರಾಗಿ ಖರೀದಿ ಕೇಂದ್ರಕ್ಕೆ ಬರುವ ದಿನಾಂಕವನ್ನು ನೀಡಲಾಗಿದೆ ಆ ದಿನಾಂಕದಂದೇ ರಾಗಿ ಖರೀದಿ ಕೇಂದ್ರಕ್ಕೆ ಬರಬೇಕು ಎಂದು ಮನವಿ ಮಾಡಿದರು.

ಎಲ್ಲಾ ರೈತರು ಒಮ್ಮಲೇ ಬರುತ್ತಿರುವುದರಿಂದ ದಟ್ಟನೆ ಉಂಟಾಗುತ್ತಿದೆ. ರಾಗಿ ಖರೀದಿಗೆ ಮಾರ್ಚ್ 31ರ ವರೆಗೂ ಸಮಯ ಇರುವುದರಿಂದ ರೈತರು ಸಾವದಾನದಿಂದ ವರ್ತಿಸಬೇಕೆಂದು ಮನವಿ ಮಾಡಿದರು. ಇನ್ನೂ ರಾಗಿ ಖರೀದಿ ಉಳಿಕೆ ಇದ್ದರೆ ಮೇ ಕೊನೆ ದಿನದವರೆಗೂ ರಾಗಿ ಖರೀದಿಸಲು ಸರ್ಕಾರ ಚಿಂತನೆ ನಡೆಸಲಿದೆ. ರೈತರು ಆತಂಕ ಪಡುವ ಅವಶ್ಯಕತೆ ಇಲ್ಲ, ಎಲ್ಲಾ ರೈತರಿಂದ ರಾಗಿ ಖರೀದಿ ಮಾಡಲಾಗುತ್ತದೆ ಎಂದರು.

ರೈತರಿಗೆ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ದೀಪ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ಮಾಡಲಾಗಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

11 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

12 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

16 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

18 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

21 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

22 hours ago