ಜಿಲ್ಲಾದ್ಯಂತ ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ರೈತರಿಂದ ರಾಗಿ ಖರೀದಿಯನ್ನ ಮಾಡಲಾಗುತ್ತಿದೆ. ಈಗಾಗಲೇ ನೋಂದಾಯಿತ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಗೋದಾಮುಗಳಿಗೆ ಬರುತ್ತಿದ್ದಾರೆ. ಇದರಿಂದ ಕಿಲೋ ಮೀಟರ್ ಗಟ್ಟಲೆ ರಾಗಿ ಮೂಟೆ ಹೊತ್ತ ಟ್ರ್ಯಾಕ್ಟರ್ ಗಳು ಸಾಲುಗಟ್ಟಿ ನಿಂತಿವೆ. ಈ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಮೋಹನಕುಮಾರಿ ರೈತರ ಸಮಸ್ಯೆಗಳನ್ನ ಆಲಿಸಿದರು.
ದೊಡ್ಡಬಳ್ಳಾಪುರ ತಾಲೂಕಿನ ಗುಂಡಮಗೆರೆ ಕ್ರಾಸ್ ಬಳಿಯ ಕರ್ನಾಟಕ ರಾಜ್ಯ ಉಗ್ರಣ ನಿಗಮದ ಗೋದಾಮುಗಳಲ್ಲಿ ರೈತರಿಂದ ಖರೀದಿ ಮಾಡಿದ ರಾಗಿಯನ್ನ ದಾಸ್ತಾನು ಮಾಡಲಾಗುತ್ತಿದೆ. ತಾಲೂಕಿನ ರೈತರು ಸೇರಿದಂತೆ ನೆಲಮಂಗದ ರೈತರು ಸಹ ರಾಗಿ ದಾಸ್ತಾನು ಮಾಡಲು ದೊಡ್ಡಬಳ್ಳಾಪುರಕ್ಕೆ ಬರುತ್ತಿದ್ದಾರೆ, ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬರುತ್ತಿರುವುದರಿಂದ ದಟ್ಟನೆ ಉಂಟಾಗಿದೆ.
ತಹಶೀಲ್ದಾರ್ ಮೋಹನಕುಮಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಸೂಚನೆಯಂತೆ ರಾಗಿ ದಾಸ್ತಾನು ಮಾಡಲು 50ಕ್ಕೂ ಹೆಚ್ಚು ಕಾರ್ಮಿಕರನ್ನ ತೆಗೆದುಕೊಳ್ಳಲಾಗಿದೆ, ಹೆಚ್ಚಿನ ರೈತರು ಬಂದಲ್ಲಿ ಇನ್ನೂ 30ಕ್ಕೂ ಹೆಚ್ಚು ಕಾರ್ಮಿಕರನ್ನ ತೆಗೆದು ಕೊಳ್ಳಲಾಗುವುದು ಎಂದರು.
ಎಲ್ಲಾ ರೈತರು ಒಮ್ಮಲೇ ಬರುತ್ತಿರುವುದರಿಂದ ದಟ್ಟನೆ ಉಂಟಾಗುತ್ತಿದೆ. ರಾಗಿ ಖರೀದಿಗೆ ಮಾರ್ಚ್ 31ರ ವರೆಗೂ ಸಮಯ ಇರುವುದರಿಂದ ರೈತರು ಸಾವದಾನದಿಂದ ವರ್ತಿಸಬೇಕೆಂದು ಮನವಿ ಮಾಡಿದರು. ಇನ್ನೂ ರಾಗಿ ಖರೀದಿ ಉಳಿಕೆ ಇದ್ದರೆ ಮೇ ಕೊನೆ ದಿನದವರೆಗೂ ರಾಗಿ ಖರೀದಿಸಲು ಸರ್ಕಾರ ಚಿಂತನೆ ನಡೆಸಲಿದೆ. ರೈತರು ಆತಂಕ ಪಡುವ ಅವಶ್ಯಕತೆ ಇಲ್ಲ, ಎಲ್ಲಾ ರೈತರಿಂದ ರಾಗಿ ಖರೀದಿ ಮಾಡಲಾಗುತ್ತದೆ ಎಂದರು.
ರೈತರಿಗೆ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ದೀಪ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ಮಾಡಲಾಗಿದೆ ಎಂದು ತಿಳಿಸಿದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…