ಮೇ ಕೊನೆ ದಿನದವರೆಗೂ ರಾಗಿ ಖರೀದಿಸಲು ಚಿಂತನೆ; ರೈತರು ಆತಂಕ ಪಡುವ ಅವಶ್ಯಕತೆ ಇಲ್ಲ; ಎಲ್ಲಾ ರೈತರಿಂದ ರಾಗಿ ಖರೀದಿ ಮಾಡಲಾಗುತ್ತದೆ- ತಹಶೀಲ್ದಾರ್ ಮೋಹನಕುಮಾರಿ

ಜಿಲ್ಲಾದ್ಯಂತ ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ರೈತರಿಂದ ರಾಗಿ ಖರೀದಿಯನ್ನ ಮಾಡಲಾಗುತ್ತಿದೆ. ಈಗಾಗಲೇ ನೋಂದಾಯಿತ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಗೋದಾಮುಗಳಿಗೆ ಬರುತ್ತಿದ್ದಾರೆ. ಇದರಿಂದ ಕಿಲೋ ಮೀಟರ್ ಗಟ್ಟಲೆ ರಾಗಿ ಮೂಟೆ ಹೊತ್ತ ಟ್ರ್ಯಾಕ್ಟರ್ ಗಳು ಸಾಲುಗಟ್ಟಿ ನಿಂತಿವೆ. ಈ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಮೋಹನಕುಮಾರಿ ರೈತರ ಸಮಸ್ಯೆಗಳನ್ನ ಆಲಿಸಿದರು.

ದೊಡ್ಡಬಳ್ಳಾಪುರ ತಾಲೂಕಿನ ಗುಂಡಮಗೆರೆ ಕ್ರಾಸ್ ಬಳಿಯ ಕರ್ನಾಟಕ ರಾಜ್ಯ ಉಗ್ರಣ ನಿಗಮದ ಗೋದಾಮುಗಳಲ್ಲಿ ರೈತರಿಂದ ಖರೀದಿ ಮಾಡಿದ ರಾಗಿಯನ್ನ ದಾಸ್ತಾನು ಮಾಡಲಾಗುತ್ತಿದೆ. ತಾಲೂಕಿನ ರೈತರು ಸೇರಿದಂತೆ ನೆಲಮಂಗದ ರೈತರು ಸಹ ರಾಗಿ ದಾಸ್ತಾನು ಮಾಡಲು ದೊಡ್ಡಬಳ್ಳಾಪುರಕ್ಕೆ ಬರುತ್ತಿದ್ದಾರೆ, ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬರುತ್ತಿರುವುದರಿಂದ ದಟ್ಟನೆ ಉಂಟಾಗಿದೆ.

ರಾಗಿ ದಾಸ್ತಾನು ಮಾಡಲು ರೈತರು ಎರಡರಿಂದ ಮೂರು ದಿನ ಕಾಯಬೇಕಾದ ಪರಿಸ್ಥಿತಿ ಇದೆ. ಇತ್ತೀಚೆಗೆ ಜಿಲ್ಲಾಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು, ರೈತರಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನ ಕಲ್ಪಿಸುವಂತೆ ಮತ್ತು ಕಾರ್ಮಿಕರ ಸಂಖ್ಯೆ ಹೆಚ್ಚಿಸುವಂತೆ ಸೂಚನೆ ಸಹ ನೀಡಿದ್ದರು.

ತಹಶೀಲ್ದಾರ್ ಮೋಹನಕುಮಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಸೂಚನೆಯಂತೆ ರಾಗಿ ದಾಸ್ತಾನು ಮಾಡಲು 50ಕ್ಕೂ ಹೆಚ್ಚು ಕಾರ್ಮಿಕರನ್ನ ತೆಗೆದುಕೊಳ್ಳಲಾಗಿದೆ, ಹೆಚ್ಚಿನ ರೈತರು ಬಂದಲ್ಲಿ ಇನ್ನೂ 30ಕ್ಕೂ ಹೆಚ್ಚು ಕಾರ್ಮಿಕರನ್ನ ತೆಗೆದು ಕೊಳ್ಳಲಾಗುವುದು ಎಂದರು.

ಸದ್ಯ 8 ಕೇಂದ್ರಗಳಲ್ಲಿ ರಾಗಿ ಖರೀದಿ ಪ್ರಕ್ರಿಯೆ ನಡೆಯುತ್ತಿದೆ, ದಿನಕ್ಕೆ 300 ರೈತರಿಂದ ರಾಗಿ ಖರೀದಿಯ ದಾಸ್ತಾನು ಮಾಡಲಾಗುತ್ತಿದೆ. ರೈತರಲ್ಲಿ ಮನವಿ ಮಾಡಿಕೊಂಡ ಅವರು ರೈತರು ನೋಂದಾಣಿ ಮಾಡಿಕೊಂಡ ದಿನದಂದ್ದು ರಾಗಿ ಖರೀದಿ ಕೇಂದ್ರಕ್ಕೆ ಬರುವ ದಿನಾಂಕವನ್ನು ನೀಡಲಾಗಿದೆ ಆ ದಿನಾಂಕದಂದೇ ರಾಗಿ ಖರೀದಿ ಕೇಂದ್ರಕ್ಕೆ ಬರಬೇಕು ಎಂದು ಮನವಿ ಮಾಡಿದರು.

ಎಲ್ಲಾ ರೈತರು ಒಮ್ಮಲೇ ಬರುತ್ತಿರುವುದರಿಂದ ದಟ್ಟನೆ ಉಂಟಾಗುತ್ತಿದೆ. ರಾಗಿ ಖರೀದಿಗೆ ಮಾರ್ಚ್ 31ರ ವರೆಗೂ ಸಮಯ ಇರುವುದರಿಂದ ರೈತರು ಸಾವದಾನದಿಂದ ವರ್ತಿಸಬೇಕೆಂದು ಮನವಿ ಮಾಡಿದರು. ಇನ್ನೂ ರಾಗಿ ಖರೀದಿ ಉಳಿಕೆ ಇದ್ದರೆ ಮೇ ಕೊನೆ ದಿನದವರೆಗೂ ರಾಗಿ ಖರೀದಿಸಲು ಸರ್ಕಾರ ಚಿಂತನೆ ನಡೆಸಲಿದೆ. ರೈತರು ಆತಂಕ ಪಡುವ ಅವಶ್ಯಕತೆ ಇಲ್ಲ, ಎಲ್ಲಾ ರೈತರಿಂದ ರಾಗಿ ಖರೀದಿ ಮಾಡಲಾಗುತ್ತದೆ ಎಂದರು.

ರೈತರಿಗೆ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ದೀಪ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ಮಾಡಲಾಗಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

1 hour ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

15 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

16 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

17 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

17 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

21 hours ago