ಮೇ ಕೊನೆ ದಿನದವರೆಗೂ ರಾಗಿ ಖರೀದಿಸಲು ಚಿಂತನೆ; ರೈತರು ಆತಂಕ ಪಡುವ ಅವಶ್ಯಕತೆ ಇಲ್ಲ; ಎಲ್ಲಾ ರೈತರಿಂದ ರಾಗಿ ಖರೀದಿ ಮಾಡಲಾಗುತ್ತದೆ- ತಹಶೀಲ್ದಾರ್ ಮೋಹನಕುಮಾರಿ

ಜಿಲ್ಲಾದ್ಯಂತ ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ರೈತರಿಂದ ರಾಗಿ ಖರೀದಿಯನ್ನ ಮಾಡಲಾಗುತ್ತಿದೆ. ಈಗಾಗಲೇ ನೋಂದಾಯಿತ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಗೋದಾಮುಗಳಿಗೆ ಬರುತ್ತಿದ್ದಾರೆ. ಇದರಿಂದ ಕಿಲೋ ಮೀಟರ್ ಗಟ್ಟಲೆ ರಾಗಿ ಮೂಟೆ ಹೊತ್ತ ಟ್ರ್ಯಾಕ್ಟರ್ ಗಳು ಸಾಲುಗಟ್ಟಿ ನಿಂತಿವೆ. ಈ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಮೋಹನಕುಮಾರಿ ರೈತರ ಸಮಸ್ಯೆಗಳನ್ನ ಆಲಿಸಿದರು.

ದೊಡ್ಡಬಳ್ಳಾಪುರ ತಾಲೂಕಿನ ಗುಂಡಮಗೆರೆ ಕ್ರಾಸ್ ಬಳಿಯ ಕರ್ನಾಟಕ ರಾಜ್ಯ ಉಗ್ರಣ ನಿಗಮದ ಗೋದಾಮುಗಳಲ್ಲಿ ರೈತರಿಂದ ಖರೀದಿ ಮಾಡಿದ ರಾಗಿಯನ್ನ ದಾಸ್ತಾನು ಮಾಡಲಾಗುತ್ತಿದೆ. ತಾಲೂಕಿನ ರೈತರು ಸೇರಿದಂತೆ ನೆಲಮಂಗದ ರೈತರು ಸಹ ರಾಗಿ ದಾಸ್ತಾನು ಮಾಡಲು ದೊಡ್ಡಬಳ್ಳಾಪುರಕ್ಕೆ ಬರುತ್ತಿದ್ದಾರೆ, ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬರುತ್ತಿರುವುದರಿಂದ ದಟ್ಟನೆ ಉಂಟಾಗಿದೆ.

ರಾಗಿ ದಾಸ್ತಾನು ಮಾಡಲು ರೈತರು ಎರಡರಿಂದ ಮೂರು ದಿನ ಕಾಯಬೇಕಾದ ಪರಿಸ್ಥಿತಿ ಇದೆ. ಇತ್ತೀಚೆಗೆ ಜಿಲ್ಲಾಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು, ರೈತರಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನ ಕಲ್ಪಿಸುವಂತೆ ಮತ್ತು ಕಾರ್ಮಿಕರ ಸಂಖ್ಯೆ ಹೆಚ್ಚಿಸುವಂತೆ ಸೂಚನೆ ಸಹ ನೀಡಿದ್ದರು.

ತಹಶೀಲ್ದಾರ್ ಮೋಹನಕುಮಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಸೂಚನೆಯಂತೆ ರಾಗಿ ದಾಸ್ತಾನು ಮಾಡಲು 50ಕ್ಕೂ ಹೆಚ್ಚು ಕಾರ್ಮಿಕರನ್ನ ತೆಗೆದುಕೊಳ್ಳಲಾಗಿದೆ, ಹೆಚ್ಚಿನ ರೈತರು ಬಂದಲ್ಲಿ ಇನ್ನೂ 30ಕ್ಕೂ ಹೆಚ್ಚು ಕಾರ್ಮಿಕರನ್ನ ತೆಗೆದು ಕೊಳ್ಳಲಾಗುವುದು ಎಂದರು.

ಸದ್ಯ 8 ಕೇಂದ್ರಗಳಲ್ಲಿ ರಾಗಿ ಖರೀದಿ ಪ್ರಕ್ರಿಯೆ ನಡೆಯುತ್ತಿದೆ, ದಿನಕ್ಕೆ 300 ರೈತರಿಂದ ರಾಗಿ ಖರೀದಿಯ ದಾಸ್ತಾನು ಮಾಡಲಾಗುತ್ತಿದೆ. ರೈತರಲ್ಲಿ ಮನವಿ ಮಾಡಿಕೊಂಡ ಅವರು ರೈತರು ನೋಂದಾಣಿ ಮಾಡಿಕೊಂಡ ದಿನದಂದ್ದು ರಾಗಿ ಖರೀದಿ ಕೇಂದ್ರಕ್ಕೆ ಬರುವ ದಿನಾಂಕವನ್ನು ನೀಡಲಾಗಿದೆ ಆ ದಿನಾಂಕದಂದೇ ರಾಗಿ ಖರೀದಿ ಕೇಂದ್ರಕ್ಕೆ ಬರಬೇಕು ಎಂದು ಮನವಿ ಮಾಡಿದರು.

ಎಲ್ಲಾ ರೈತರು ಒಮ್ಮಲೇ ಬರುತ್ತಿರುವುದರಿಂದ ದಟ್ಟನೆ ಉಂಟಾಗುತ್ತಿದೆ. ರಾಗಿ ಖರೀದಿಗೆ ಮಾರ್ಚ್ 31ರ ವರೆಗೂ ಸಮಯ ಇರುವುದರಿಂದ ರೈತರು ಸಾವದಾನದಿಂದ ವರ್ತಿಸಬೇಕೆಂದು ಮನವಿ ಮಾಡಿದರು. ಇನ್ನೂ ರಾಗಿ ಖರೀದಿ ಉಳಿಕೆ ಇದ್ದರೆ ಮೇ ಕೊನೆ ದಿನದವರೆಗೂ ರಾಗಿ ಖರೀದಿಸಲು ಸರ್ಕಾರ ಚಿಂತನೆ ನಡೆಸಲಿದೆ. ರೈತರು ಆತಂಕ ಪಡುವ ಅವಶ್ಯಕತೆ ಇಲ್ಲ, ಎಲ್ಲಾ ರೈತರಿಂದ ರಾಗಿ ಖರೀದಿ ಮಾಡಲಾಗುತ್ತದೆ ಎಂದರು.

ರೈತರಿಗೆ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ದೀಪ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ಮಾಡಲಾಗಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

7 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

12 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

21 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago