ಜಿಲ್ಲಾದ್ಯಂತ ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ರೈತರಿಂದ ರಾಗಿ ಖರೀದಿಯನ್ನ ಮಾಡಲಾಗುತ್ತಿದೆ. ಈಗಾಗಲೇ ನೋಂದಾಯಿತ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಗೋದಾಮುಗಳಿಗೆ ಬರುತ್ತಿದ್ದಾರೆ. ಇದರಿಂದ ಕಿಲೋ ಮೀಟರ್ ಗಟ್ಟಲೆ ರಾಗಿ ಮೂಟೆ ಹೊತ್ತ ಟ್ರ್ಯಾಕ್ಟರ್ ಗಳು ಸಾಲುಗಟ್ಟಿ ನಿಂತಿವೆ. ಈ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಮೋಹನಕುಮಾರಿ ರೈತರ ಸಮಸ್ಯೆಗಳನ್ನ ಆಲಿಸಿದರು.
ದೊಡ್ಡಬಳ್ಳಾಪುರ ತಾಲೂಕಿನ ಗುಂಡಮಗೆರೆ ಕ್ರಾಸ್ ಬಳಿಯ ಕರ್ನಾಟಕ ರಾಜ್ಯ ಉಗ್ರಣ ನಿಗಮದ ಗೋದಾಮುಗಳಲ್ಲಿ ರೈತರಿಂದ ಖರೀದಿ ಮಾಡಿದ ರಾಗಿಯನ್ನ ದಾಸ್ತಾನು ಮಾಡಲಾಗುತ್ತಿದೆ. ತಾಲೂಕಿನ ರೈತರು ಸೇರಿದಂತೆ ನೆಲಮಂಗದ ರೈತರು ಸಹ ರಾಗಿ ದಾಸ್ತಾನು ಮಾಡಲು ದೊಡ್ಡಬಳ್ಳಾಪುರಕ್ಕೆ ಬರುತ್ತಿದ್ದಾರೆ, ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬರುತ್ತಿರುವುದರಿಂದ ದಟ್ಟನೆ ಉಂಟಾಗಿದೆ.
ತಹಶೀಲ್ದಾರ್ ಮೋಹನಕುಮಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಸೂಚನೆಯಂತೆ ರಾಗಿ ದಾಸ್ತಾನು ಮಾಡಲು 50ಕ್ಕೂ ಹೆಚ್ಚು ಕಾರ್ಮಿಕರನ್ನ ತೆಗೆದುಕೊಳ್ಳಲಾಗಿದೆ, ಹೆಚ್ಚಿನ ರೈತರು ಬಂದಲ್ಲಿ ಇನ್ನೂ 30ಕ್ಕೂ ಹೆಚ್ಚು ಕಾರ್ಮಿಕರನ್ನ ತೆಗೆದು ಕೊಳ್ಳಲಾಗುವುದು ಎಂದರು.
ಎಲ್ಲಾ ರೈತರು ಒಮ್ಮಲೇ ಬರುತ್ತಿರುವುದರಿಂದ ದಟ್ಟನೆ ಉಂಟಾಗುತ್ತಿದೆ. ರಾಗಿ ಖರೀದಿಗೆ ಮಾರ್ಚ್ 31ರ ವರೆಗೂ ಸಮಯ ಇರುವುದರಿಂದ ರೈತರು ಸಾವದಾನದಿಂದ ವರ್ತಿಸಬೇಕೆಂದು ಮನವಿ ಮಾಡಿದರು. ಇನ್ನೂ ರಾಗಿ ಖರೀದಿ ಉಳಿಕೆ ಇದ್ದರೆ ಮೇ ಕೊನೆ ದಿನದವರೆಗೂ ರಾಗಿ ಖರೀದಿಸಲು ಸರ್ಕಾರ ಚಿಂತನೆ ನಡೆಸಲಿದೆ. ರೈತರು ಆತಂಕ ಪಡುವ ಅವಶ್ಯಕತೆ ಇಲ್ಲ, ಎಲ್ಲಾ ರೈತರಿಂದ ರಾಗಿ ಖರೀದಿ ಮಾಡಲಾಗುತ್ತದೆ ಎಂದರು.
ರೈತರಿಗೆ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ದೀಪ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ಮಾಡಲಾಗಿದೆ ಎಂದು ತಿಳಿಸಿದರು.
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…
ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…