ಮೇ ಕೊನೆ ದಿನದವರೆಗೂ ರಾಗಿ ಖರೀದಿಸಲು ಚಿಂತನೆ; ರೈತರು ಆತಂಕ ಪಡುವ ಅವಶ್ಯಕತೆ ಇಲ್ಲ; ಎಲ್ಲಾ ರೈತರಿಂದ ರಾಗಿ ಖರೀದಿ ಮಾಡಲಾಗುತ್ತದೆ- ತಹಶೀಲ್ದಾರ್ ಮೋಹನಕುಮಾರಿ

ಜಿಲ್ಲಾದ್ಯಂತ ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ರೈತರಿಂದ ರಾಗಿ ಖರೀದಿಯನ್ನ ಮಾಡಲಾಗುತ್ತಿದೆ. ಈಗಾಗಲೇ ನೋಂದಾಯಿತ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಗೋದಾಮುಗಳಿಗೆ ಬರುತ್ತಿದ್ದಾರೆ. ಇದರಿಂದ ಕಿಲೋ ಮೀಟರ್ ಗಟ್ಟಲೆ ರಾಗಿ ಮೂಟೆ ಹೊತ್ತ ಟ್ರ್ಯಾಕ್ಟರ್ ಗಳು ಸಾಲುಗಟ್ಟಿ ನಿಂತಿವೆ. ಈ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಮೋಹನಕುಮಾರಿ ರೈತರ ಸಮಸ್ಯೆಗಳನ್ನ ಆಲಿಸಿದರು.

ದೊಡ್ಡಬಳ್ಳಾಪುರ ತಾಲೂಕಿನ ಗುಂಡಮಗೆರೆ ಕ್ರಾಸ್ ಬಳಿಯ ಕರ್ನಾಟಕ ರಾಜ್ಯ ಉಗ್ರಣ ನಿಗಮದ ಗೋದಾಮುಗಳಲ್ಲಿ ರೈತರಿಂದ ಖರೀದಿ ಮಾಡಿದ ರಾಗಿಯನ್ನ ದಾಸ್ತಾನು ಮಾಡಲಾಗುತ್ತಿದೆ. ತಾಲೂಕಿನ ರೈತರು ಸೇರಿದಂತೆ ನೆಲಮಂಗದ ರೈತರು ಸಹ ರಾಗಿ ದಾಸ್ತಾನು ಮಾಡಲು ದೊಡ್ಡಬಳ್ಳಾಪುರಕ್ಕೆ ಬರುತ್ತಿದ್ದಾರೆ, ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬರುತ್ತಿರುವುದರಿಂದ ದಟ್ಟನೆ ಉಂಟಾಗಿದೆ.

ರಾಗಿ ದಾಸ್ತಾನು ಮಾಡಲು ರೈತರು ಎರಡರಿಂದ ಮೂರು ದಿನ ಕಾಯಬೇಕಾದ ಪರಿಸ್ಥಿತಿ ಇದೆ. ಇತ್ತೀಚೆಗೆ ಜಿಲ್ಲಾಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು, ರೈತರಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನ ಕಲ್ಪಿಸುವಂತೆ ಮತ್ತು ಕಾರ್ಮಿಕರ ಸಂಖ್ಯೆ ಹೆಚ್ಚಿಸುವಂತೆ ಸೂಚನೆ ಸಹ ನೀಡಿದ್ದರು.

ತಹಶೀಲ್ದಾರ್ ಮೋಹನಕುಮಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಸೂಚನೆಯಂತೆ ರಾಗಿ ದಾಸ್ತಾನು ಮಾಡಲು 50ಕ್ಕೂ ಹೆಚ್ಚು ಕಾರ್ಮಿಕರನ್ನ ತೆಗೆದುಕೊಳ್ಳಲಾಗಿದೆ, ಹೆಚ್ಚಿನ ರೈತರು ಬಂದಲ್ಲಿ ಇನ್ನೂ 30ಕ್ಕೂ ಹೆಚ್ಚು ಕಾರ್ಮಿಕರನ್ನ ತೆಗೆದು ಕೊಳ್ಳಲಾಗುವುದು ಎಂದರು.

ಸದ್ಯ 8 ಕೇಂದ್ರಗಳಲ್ಲಿ ರಾಗಿ ಖರೀದಿ ಪ್ರಕ್ರಿಯೆ ನಡೆಯುತ್ತಿದೆ, ದಿನಕ್ಕೆ 300 ರೈತರಿಂದ ರಾಗಿ ಖರೀದಿಯ ದಾಸ್ತಾನು ಮಾಡಲಾಗುತ್ತಿದೆ. ರೈತರಲ್ಲಿ ಮನವಿ ಮಾಡಿಕೊಂಡ ಅವರು ರೈತರು ನೋಂದಾಣಿ ಮಾಡಿಕೊಂಡ ದಿನದಂದ್ದು ರಾಗಿ ಖರೀದಿ ಕೇಂದ್ರಕ್ಕೆ ಬರುವ ದಿನಾಂಕವನ್ನು ನೀಡಲಾಗಿದೆ ಆ ದಿನಾಂಕದಂದೇ ರಾಗಿ ಖರೀದಿ ಕೇಂದ್ರಕ್ಕೆ ಬರಬೇಕು ಎಂದು ಮನವಿ ಮಾಡಿದರು.

ಎಲ್ಲಾ ರೈತರು ಒಮ್ಮಲೇ ಬರುತ್ತಿರುವುದರಿಂದ ದಟ್ಟನೆ ಉಂಟಾಗುತ್ತಿದೆ. ರಾಗಿ ಖರೀದಿಗೆ ಮಾರ್ಚ್ 31ರ ವರೆಗೂ ಸಮಯ ಇರುವುದರಿಂದ ರೈತರು ಸಾವದಾನದಿಂದ ವರ್ತಿಸಬೇಕೆಂದು ಮನವಿ ಮಾಡಿದರು. ಇನ್ನೂ ರಾಗಿ ಖರೀದಿ ಉಳಿಕೆ ಇದ್ದರೆ ಮೇ ಕೊನೆ ದಿನದವರೆಗೂ ರಾಗಿ ಖರೀದಿಸಲು ಸರ್ಕಾರ ಚಿಂತನೆ ನಡೆಸಲಿದೆ. ರೈತರು ಆತಂಕ ಪಡುವ ಅವಶ್ಯಕತೆ ಇಲ್ಲ, ಎಲ್ಲಾ ರೈತರಿಂದ ರಾಗಿ ಖರೀದಿ ಮಾಡಲಾಗುತ್ತದೆ ಎಂದರು.

ರೈತರಿಗೆ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ದೀಪ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ಮಾಡಲಾಗಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

8 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago