ಮೇ 04 ರಂದು NEET ಪರೀಕ್ಷೆ: ದೊಡ್ಡಬಳ್ಳಾಪುರದಲ್ಲಿ ನಾಲ್ಕು ಪರೀಕ್ಷಾ ಕೇಂದ್ರ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

2025 ನೇ ಸಾಲಿನಲ್ಲಿ ವೈದ್ಯಕೀಯ ಪ್ರವೇಶಾತಿ ಕಲ್ಪಿಸಲು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET)ಯು ರಾಜ್ಯಾದ್ಯಂತ ಮೇ 4 ರಂದು ನಡೆಯುತ್ತಿದ್ದು ಜಿಲ್ಲೆಯ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ NEET-2025 ಪರೀಕ್ಷೆ ಸಂಬಂಧ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಗಂಗಾಧರಪುರ ಬಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು, ಮಾದಗೊಂಡನಹಳ್ಳಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತಾಲ್ಲೂಕು ಆಫೀಸ್ ರಸ್ತೆಯ ಸರ್ಕಾರಿ ಪದವಿ ಕಾಲೇಜು(ಪ್ರೌಢಶಾಲಾ ವಿಭಾಗ) ಈ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ NEET ಪರೀಕ್ಷೆ ನಡೆಯಲಿದೆ.

ಆ ದಿನ ಮಧ್ಯಾಹ್ನ 2:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಪರೀಕ್ಷೆ ನಡೆಯಲಿದ್ದು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 01.30 ರ ಒಳಗೆ ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಿರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪ್ಯಾನ್‌ ಕಾರ್ಡ್, ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಚೀಟಿಯ ಜೊತೆ ಒಂದು ಪೋಸ್ಟ್ ಕಾರ್ಡ್ ಮತ್ತು ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳ ಸಹಿತ ಹಾಜರಾಗಬೇಕು.

ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಇರುವ ಕೊಠಡಿಗೆ ತೆರಳಬೇಕು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದ್ದು, ಪ್ರವೇಶ ಪತ್ರದಲ್ಲಿ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು.

NEET ಪರೀಕ್ಷೆಯು ಸುಗಮವಾಗಿ ನಡೆಸಲು ಜಿಲ್ಲಾಡಳಿತದಿಂದ ಸಿದ್ದತೆ ಕೈಗೊಳ್ಳಲಾಗಿದ್ದು ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪವಾಗದಂತೆ ಕಾರ್ಯನಿರ್ವಹಿಸಲು ನಾಲ್ಕು ಕೇಂದ್ರಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಭದ್ರತೆಗಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯುತ್ ವ್ಯವಸ್ಥೆ, ಸಿ.ಸಿ ಕ್ಯಾಮೆರಾ ಅಳವಡಿಕೆ, ಆಂಬುಲೆನ್ಸ್ ಸೇವೆ , ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆ ಮತ್ತು ಪರೀಕ್ಷೆಗೆ ಹಾಜರಾಗುವ ಅಂಗವಿಕಲರು, ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವೀಲ್ ಚೇರ್ ವ್ಯವಸ್ಥೆ ಹಾಗೂ ತುರ್ತು ಅಗ್ನಿಶಾಮಕ ವ್ಯವಸ್ಥೆ ಕಲ್ಪಿಸಲಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಸೂಕ್ತ ಕ್ರಮ ವಹಿಸಿ ಎಂದು ಅಧಿಕಾರಿಗಳು ಸೂಚಿಸಿದರು. ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಮಾರ್ಗಸೂಚಿ ಅನ್ವಯ ಕಾರ್ಯನಿರ್ವಹಿಸಿ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಶಾ, ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮೋಹನ್ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರರಾದ ಬೈಲಾಂಜನಪ್ಪ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕರಾದ ನರೇಂದ್ರ ಬಾಬು, ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

46 minutes ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago