ಮೇ 05 ರಿಂದ ಪ.ಜಾತಿ ಒಳಮೀಸಲಾತಿ ಸಮೀಕ್ಷೆ: ಅಧಿಕಾರಿಗಳಿಗೆ ಪ.ಜಾತಿ ಒಳಮೀಸಲಾತಿ ಸಮೀಕ್ಷೆ ತರಬೇತಿ ಕಾರ್ಯಗಾರ

ಸಾಮಾಜಿಕ ನ್ಯಾಯವನ್ನು ಎಲ್ಲಾ ವರ್ಗದವರಿಗೂ ಒದಗಿಸಬೇಕು ಎಂಬುದು ಸರ್ಕಾರದ ಉದ್ದೇಶವಾಗಿದ್ದು ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆಯನ್ನು ಮೇ 05 ರಿಂದ ಕೈಗೊಂಡಿದ್ದು ಗಣತಿದಾರರು ಮನೆ ಮನೆ ಭೇಟಿ ನೀಡಿ ದತ್ತಾಂಶ ಸಂಗ್ರಹಿಸಲಿದ್ದಾರೆ, ದತ್ತಾಂಶ ಸಂಗ್ರಹದಲ್ಲಿ ಲೋಪವಾಗದಂತೆ ಸರಿಯಾದ ಕ್ರಮದಲ್ಲಿ ಸಮೀಕ್ಷೆ ಮಾಡಿ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಶಾ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀ ಹೆಚ್.ಎನ್ ನಾಗಮೋಹನ್ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಸಮೀಕ್ಷೆ ಕುರಿತ ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೈನರ್ ಗಳ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಒಳಮೀಸಲಾತಿ ಸಮೀಕ್ಷೆಯು ಮೇ 05 ರಿಂದ ಪ್ರಾರಂಭವಾಗಲಿದೆ. ಸಮೀಕ್ಷೆ ನಡೆಸಲು ಸರ್ಕಾರದಿಂದ ಅಪ್ಲಿಕೇಶನ್ ಸಿದ್ದಪಡಿಸಲಾಗಿದ್ದು, ಸಮೀಕ್ಷೆಯಲ್ಲಿ ಬರುವ ತಾಂತ್ರಿಕ ತೊಂದರೆ ಹಾಗೂ ಅದಕ್ಕೆ ಪೂರಕ ಪರಿಹಾರವನ್ನು ಪಡೆದುಕೊಳ್ಳಲು ತಿಳಿಸಿದರು. ಈ ತರಬೇತಿಯಲ್ಲಿ ಅಪ್ಲೀಕೇಶನ್ ನಿರ್ವಹಣೆ, ಹೇಗೆ ದತ್ತಾಂಶ ಸಂಗ್ರಹಿಸಿ ನಮೂದಿಸಬೇಕು ಎಂಬ ಸಂಪೂರ್ಣ ಮಾಹಿತಿ ಇದೆ. ದತ್ತಾಂಶದಲ್ಲಿ ಏರುಪೇರಾದರೇ ಸರ್ಕಾರದಿಂದ ಸಿಗುವ ರಾಜಕೀಯ, ಶಿಕ್ಷಣ, ಉದ್ಯೋಗ, ಸೇರಿದಂತೆ ಎಲ್ಲಾ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಹಾಗಾಗಿ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿ ದತ್ತಾಂಶ ಸರಿಯಾದ ಕ್ರಮದಲ್ಲಿ ಸಂಗ್ರಹಿಸಿ ಎಂದರು. ಸುಭದ್ರ ಪ್ರಜಾಪ್ರಭುತ್ವಕ್ಕೆ ನೀವೆಲ್ಲರು ನೀಡುವ ದತ್ತಾಂಶ ಮುಖ್ಯವಾಗಿದೆ ಎಂದರು.

*ಸಮೀಕ್ಷೆಯ ವಿಧಾನ ಮತ್ತು ವೇಳಾಪಟ್ಟಿ ವಿವರ*

ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆಗೆ ಶಿಕ್ಷಕರನ್ನು ಗಣತಿದಾರರನ್ನಾಗಿ ನೇಮಿಸಲಾಗುವುದು. ಮೊದಲ ಹಂತದಲ್ಲಿ ಮೇ 5 ರಿಂದ 17 ವರೆಗೆ ಗಣತಿದಾರರು ಮನೆ ಮನೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳುವರು. ಎರಡನೇ ಹಂತದಲ್ಲಿ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಕೈಗೊಳ್ಳುವರು. ಮೂರನೇ ಹಂತದಲ್ಲಿ ಮೇ 19 ರಿಂದ 23 ರ ವರೆಗೆ ಆನ್ಲೈನ್ ಮೂಲಕ ಸ್ವಯಂ ಘೋಷಣೆ ಮಾಡಬಹುದಾಗಿದೆ.

ಕಾರ್ಯಗಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಪ್ರೇಮ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬೈಲಾಂಜಿನಪ್ಪ, ದತ್ತಾಂಶ ಸಂಗ್ರಹ ಜಿಲ್ಲಾ, ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೇನರ್ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಎ.ಬಿ.ಬಸವರಾಜುಗೆ ಸಿಕ್ತು ಪೋಸ್ಟಿಂಗ್: ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ನೇಮಕ

ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ... ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ…

16 minutes ago

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

12 hours ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

13 hours ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

1 day ago