ಸಾಮಾಜಿಕ ನ್ಯಾಯವನ್ನು ಎಲ್ಲಾ ವರ್ಗದವರಿಗೂ ಒದಗಿಸಬೇಕು ಎಂಬುದು ಸರ್ಕಾರದ ಉದ್ದೇಶವಾಗಿದ್ದು ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆಯನ್ನು ಮೇ 05 ರಿಂದ ಕೈಗೊಂಡಿದ್ದು ಗಣತಿದಾರರು ಮನೆ ಮನೆ ಭೇಟಿ ನೀಡಿ ದತ್ತಾಂಶ ಸಂಗ್ರಹಿಸಲಿದ್ದಾರೆ, ದತ್ತಾಂಶ ಸಂಗ್ರಹದಲ್ಲಿ ಲೋಪವಾಗದಂತೆ ಸರಿಯಾದ ಕ್ರಮದಲ್ಲಿ ಸಮೀಕ್ಷೆ ಮಾಡಿ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಶಾ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀ ಹೆಚ್.ಎನ್ ನಾಗಮೋಹನ್ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಸಮೀಕ್ಷೆ ಕುರಿತ ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೈನರ್ ಗಳ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಒಳಮೀಸಲಾತಿ ಸಮೀಕ್ಷೆಯು ಮೇ 05 ರಿಂದ ಪ್ರಾರಂಭವಾಗಲಿದೆ. ಸಮೀಕ್ಷೆ ನಡೆಸಲು ಸರ್ಕಾರದಿಂದ ಅಪ್ಲಿಕೇಶನ್ ಸಿದ್ದಪಡಿಸಲಾಗಿದ್ದು, ಸಮೀಕ್ಷೆಯಲ್ಲಿ ಬರುವ ತಾಂತ್ರಿಕ ತೊಂದರೆ ಹಾಗೂ ಅದಕ್ಕೆ ಪೂರಕ ಪರಿಹಾರವನ್ನು ಪಡೆದುಕೊಳ್ಳಲು ತಿಳಿಸಿದರು. ಈ ತರಬೇತಿಯಲ್ಲಿ ಅಪ್ಲೀಕೇಶನ್ ನಿರ್ವಹಣೆ, ಹೇಗೆ ದತ್ತಾಂಶ ಸಂಗ್ರಹಿಸಿ ನಮೂದಿಸಬೇಕು ಎಂಬ ಸಂಪೂರ್ಣ ಮಾಹಿತಿ ಇದೆ. ದತ್ತಾಂಶದಲ್ಲಿ ಏರುಪೇರಾದರೇ ಸರ್ಕಾರದಿಂದ ಸಿಗುವ ರಾಜಕೀಯ, ಶಿಕ್ಷಣ, ಉದ್ಯೋಗ, ಸೇರಿದಂತೆ ಎಲ್ಲಾ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಹಾಗಾಗಿ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿ ದತ್ತಾಂಶ ಸರಿಯಾದ ಕ್ರಮದಲ್ಲಿ ಸಂಗ್ರಹಿಸಿ ಎಂದರು. ಸುಭದ್ರ ಪ್ರಜಾಪ್ರಭುತ್ವಕ್ಕೆ ನೀವೆಲ್ಲರು ನೀಡುವ ದತ್ತಾಂಶ ಮುಖ್ಯವಾಗಿದೆ ಎಂದರು.
ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆಗೆ ಶಿಕ್ಷಕರನ್ನು ಗಣತಿದಾರರನ್ನಾಗಿ ನೇಮಿಸಲಾಗುವುದು. ಮೊದಲ ಹಂತದಲ್ಲಿ ಮೇ 5 ರಿಂದ 17 ವರೆಗೆ ಗಣತಿದಾರರು ಮನೆ ಮನೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳುವರು. ಎರಡನೇ ಹಂತದಲ್ಲಿ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಕೈಗೊಳ್ಳುವರು. ಮೂರನೇ ಹಂತದಲ್ಲಿ ಮೇ 19 ರಿಂದ 23 ರ ವರೆಗೆ ಆನ್ಲೈನ್ ಮೂಲಕ ಸ್ವಯಂ ಘೋಷಣೆ ಮಾಡಬಹುದಾಗಿದೆ.
ಕಾರ್ಯಗಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಪ್ರೇಮ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬೈಲಾಂಜಿನಪ್ಪ, ದತ್ತಾಂಶ ಸಂಗ್ರಹ ಜಿಲ್ಲಾ, ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೇನರ್ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…
ದೃಷ್ಟಿಕೋನ........ ಗೆಲ್ಲುತ್ತಲೇ ಇರುವ ರಾಜಕಾರಣಿಗಳು, ಸೋಲುತ್ತಲೇ ಇರುವ ಮತದಾರರು, ಕನಸು ಕಾಣುತ್ತಲೇ ಇರುವ ಬಡ, ಮಧ್ಯಮ ವರ್ಗದವರು, ಅಧಿಕ ಪ್ರಸಂಗಿಗಳಂತೆ…
ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗವನ್ನು ತುಳಿದು ದೌರ್ಜನ್ಯ ನಡೆಸಿ ಮಹಿಳೆಯ ಸಾವಿಗೆ ಕಾರಣನಾದ ಕಾಮುಕನನ್ನು ಪೊಲೀಸರು ಬಂಧಿಸಿರುವ…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೇ.5ರಂದು 66/11 ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF17-ನಂದಿ ಮೋರಿ, DF18-ಬೀಡಿಕೆರೆ ಫೀಡರ್ಗಳಲ್ಲಿ ವಿದ್ಯುತ್…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…