ಸಾಮಾಜಿಕ ನ್ಯಾಯವನ್ನು ಎಲ್ಲಾ ವರ್ಗದವರಿಗೂ ಒದಗಿಸಬೇಕು ಎಂಬುದು ಸರ್ಕಾರದ ಉದ್ದೇಶವಾಗಿದ್ದು ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆಯನ್ನು ಮೇ 05 ರಿಂದ ಕೈಗೊಂಡಿದ್ದು ಗಣತಿದಾರರು ಮನೆ ಮನೆ ಭೇಟಿ ನೀಡಿ ದತ್ತಾಂಶ ಸಂಗ್ರಹಿಸಲಿದ್ದಾರೆ, ದತ್ತಾಂಶ ಸಂಗ್ರಹದಲ್ಲಿ ಲೋಪವಾಗದಂತೆ ಸರಿಯಾದ ಕ್ರಮದಲ್ಲಿ ಸಮೀಕ್ಷೆ ಮಾಡಿ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಶಾ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀ ಹೆಚ್.ಎನ್ ನಾಗಮೋಹನ್ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಸಮೀಕ್ಷೆ ಕುರಿತ ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೈನರ್ ಗಳ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಒಳಮೀಸಲಾತಿ ಸಮೀಕ್ಷೆಯು ಮೇ 05 ರಿಂದ ಪ್ರಾರಂಭವಾಗಲಿದೆ. ಸಮೀಕ್ಷೆ ನಡೆಸಲು ಸರ್ಕಾರದಿಂದ ಅಪ್ಲಿಕೇಶನ್ ಸಿದ್ದಪಡಿಸಲಾಗಿದ್ದು, ಸಮೀಕ್ಷೆಯಲ್ಲಿ ಬರುವ ತಾಂತ್ರಿಕ ತೊಂದರೆ ಹಾಗೂ ಅದಕ್ಕೆ ಪೂರಕ ಪರಿಹಾರವನ್ನು ಪಡೆದುಕೊಳ್ಳಲು ತಿಳಿಸಿದರು. ಈ ತರಬೇತಿಯಲ್ಲಿ ಅಪ್ಲೀಕೇಶನ್ ನಿರ್ವಹಣೆ, ಹೇಗೆ ದತ್ತಾಂಶ ಸಂಗ್ರಹಿಸಿ ನಮೂದಿಸಬೇಕು ಎಂಬ ಸಂಪೂರ್ಣ ಮಾಹಿತಿ ಇದೆ. ದತ್ತಾಂಶದಲ್ಲಿ ಏರುಪೇರಾದರೇ ಸರ್ಕಾರದಿಂದ ಸಿಗುವ ರಾಜಕೀಯ, ಶಿಕ್ಷಣ, ಉದ್ಯೋಗ, ಸೇರಿದಂತೆ ಎಲ್ಲಾ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಹಾಗಾಗಿ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿ ದತ್ತಾಂಶ ಸರಿಯಾದ ಕ್ರಮದಲ್ಲಿ ಸಂಗ್ರಹಿಸಿ ಎಂದರು. ಸುಭದ್ರ ಪ್ರಜಾಪ್ರಭುತ್ವಕ್ಕೆ ನೀವೆಲ್ಲರು ನೀಡುವ ದತ್ತಾಂಶ ಮುಖ್ಯವಾಗಿದೆ ಎಂದರು.
ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆಗೆ ಶಿಕ್ಷಕರನ್ನು ಗಣತಿದಾರರನ್ನಾಗಿ ನೇಮಿಸಲಾಗುವುದು. ಮೊದಲ ಹಂತದಲ್ಲಿ ಮೇ 5 ರಿಂದ 17 ವರೆಗೆ ಗಣತಿದಾರರು ಮನೆ ಮನೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳುವರು. ಎರಡನೇ ಹಂತದಲ್ಲಿ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಕೈಗೊಳ್ಳುವರು. ಮೂರನೇ ಹಂತದಲ್ಲಿ ಮೇ 19 ರಿಂದ 23 ರ ವರೆಗೆ ಆನ್ಲೈನ್ ಮೂಲಕ ಸ್ವಯಂ ಘೋಷಣೆ ಮಾಡಬಹುದಾಗಿದೆ.
ಕಾರ್ಯಗಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಪ್ರೇಮ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬೈಲಾಂಜಿನಪ್ಪ, ದತ್ತಾಂಶ ಸಂಗ್ರಹ ಜಿಲ್ಲಾ, ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೇನರ್ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…