ಮೇ 05 ರಿಂದ ಪ.ಜಾತಿ ಒಳಮೀಸಲಾತಿ ಸಮೀಕ್ಷೆ: ಅಧಿಕಾರಿಗಳಿಗೆ ಪ.ಜಾತಿ ಒಳಮೀಸಲಾತಿ ಸಮೀಕ್ಷೆ ತರಬೇತಿ ಕಾರ್ಯಗಾರ

ಸಾಮಾಜಿಕ ನ್ಯಾಯವನ್ನು ಎಲ್ಲಾ ವರ್ಗದವರಿಗೂ ಒದಗಿಸಬೇಕು ಎಂಬುದು ಸರ್ಕಾರದ ಉದ್ದೇಶವಾಗಿದ್ದು ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆಯನ್ನು ಮೇ 05 ರಿಂದ ಕೈಗೊಂಡಿದ್ದು ಗಣತಿದಾರರು ಮನೆ ಮನೆ ಭೇಟಿ ನೀಡಿ ದತ್ತಾಂಶ ಸಂಗ್ರಹಿಸಲಿದ್ದಾರೆ, ದತ್ತಾಂಶ ಸಂಗ್ರಹದಲ್ಲಿ ಲೋಪವಾಗದಂತೆ ಸರಿಯಾದ ಕ್ರಮದಲ್ಲಿ ಸಮೀಕ್ಷೆ ಮಾಡಿ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಶಾ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀ ಹೆಚ್.ಎನ್ ನಾಗಮೋಹನ್ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಸಮೀಕ್ಷೆ ಕುರಿತ ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೈನರ್ ಗಳ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಒಳಮೀಸಲಾತಿ ಸಮೀಕ್ಷೆಯು ಮೇ 05 ರಿಂದ ಪ್ರಾರಂಭವಾಗಲಿದೆ. ಸಮೀಕ್ಷೆ ನಡೆಸಲು ಸರ್ಕಾರದಿಂದ ಅಪ್ಲಿಕೇಶನ್ ಸಿದ್ದಪಡಿಸಲಾಗಿದ್ದು, ಸಮೀಕ್ಷೆಯಲ್ಲಿ ಬರುವ ತಾಂತ್ರಿಕ ತೊಂದರೆ ಹಾಗೂ ಅದಕ್ಕೆ ಪೂರಕ ಪರಿಹಾರವನ್ನು ಪಡೆದುಕೊಳ್ಳಲು ತಿಳಿಸಿದರು. ಈ ತರಬೇತಿಯಲ್ಲಿ ಅಪ್ಲೀಕೇಶನ್ ನಿರ್ವಹಣೆ, ಹೇಗೆ ದತ್ತಾಂಶ ಸಂಗ್ರಹಿಸಿ ನಮೂದಿಸಬೇಕು ಎಂಬ ಸಂಪೂರ್ಣ ಮಾಹಿತಿ ಇದೆ. ದತ್ತಾಂಶದಲ್ಲಿ ಏರುಪೇರಾದರೇ ಸರ್ಕಾರದಿಂದ ಸಿಗುವ ರಾಜಕೀಯ, ಶಿಕ್ಷಣ, ಉದ್ಯೋಗ, ಸೇರಿದಂತೆ ಎಲ್ಲಾ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಹಾಗಾಗಿ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿ ದತ್ತಾಂಶ ಸರಿಯಾದ ಕ್ರಮದಲ್ಲಿ ಸಂಗ್ರಹಿಸಿ ಎಂದರು. ಸುಭದ್ರ ಪ್ರಜಾಪ್ರಭುತ್ವಕ್ಕೆ ನೀವೆಲ್ಲರು ನೀಡುವ ದತ್ತಾಂಶ ಮುಖ್ಯವಾಗಿದೆ ಎಂದರು.

*ಸಮೀಕ್ಷೆಯ ವಿಧಾನ ಮತ್ತು ವೇಳಾಪಟ್ಟಿ ವಿವರ*

ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆಗೆ ಶಿಕ್ಷಕರನ್ನು ಗಣತಿದಾರರನ್ನಾಗಿ ನೇಮಿಸಲಾಗುವುದು. ಮೊದಲ ಹಂತದಲ್ಲಿ ಮೇ 5 ರಿಂದ 17 ವರೆಗೆ ಗಣತಿದಾರರು ಮನೆ ಮನೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳುವರು. ಎರಡನೇ ಹಂತದಲ್ಲಿ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಕೈಗೊಳ್ಳುವರು. ಮೂರನೇ ಹಂತದಲ್ಲಿ ಮೇ 19 ರಿಂದ 23 ರ ವರೆಗೆ ಆನ್ಲೈನ್ ಮೂಲಕ ಸ್ವಯಂ ಘೋಷಣೆ ಮಾಡಬಹುದಾಗಿದೆ.

ಕಾರ್ಯಗಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಪ್ರೇಮ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬೈಲಾಂಜಿನಪ್ಪ, ದತ್ತಾಂಶ ಸಂಗ್ರಹ ಜಿಲ್ಲಾ, ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೇನರ್ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

4 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

8 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

9 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

10 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

20 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

22 hours ago