ಮೇ.10ರಂದು ನಡೆಯುವ ಚುನಾವಣೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ತೇಜಸ್ ಕುಮಾರ್ ಮಾಹಿತಿ

ಮೇ.10 ರಂದು ನಡೆಯಲಿರುವ ಮತದಾನ ಪ್ರಕ್ರಿಯೆಗೆ ತಾಲ್ಲೂಕು ಚುನಾವಣಾಧಿಕಾರಿ ಕಾರ್ಯಾಲಯದದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸದ್ಯ ಯಾವುದೇ ಸಮಸ್ಯೆ, ದೂರುಗಳಾಗಲಿ ಇಲ್ಲ ಎಂದು ಚುನಾವಣಾಧಿಕಾರಿ ತೇಜಸ್ ಕುಮಾರ್ ತಿಳಿಸಿದರು.

ನಗರದ ಚುನಾವಣಾಧಿಕಾರಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಂತಿಯುತ, ನ್ಯಾಯಸಮ್ಮತ, ಪಾರದರ್ಶಕ ಚುನಾವಣೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,14,182 ಮತದಾರರು ಇದ್ದು, ಅದರಲ್ಲಿ ಪುರುಷರ ಮತದಾರರ ಸಂಖ್ಯೆ 1,06,621, ಮಹಿಳಾ ಮತದಾರರ ಸಂಖ್ಯೆ 1,07,559, ಇತರೆ ಮತದಾರರು ಇಬ್ಬರು ಇದ್ದಾರೆ.

ಕ್ಷೇತ್ರದಲ್ಲಿ ಒಟ್ಟು 276 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಕಣದಲ್ಲಿ ಒಟ್ಟು 12 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ. ಕ್ಷೇತ್ರಕ್ಕೆ 359 ವಿವಿಪ್ಯಾಟ್ ಗಳನ್ನು ತರಿಸಲಾಗಿದೆ. ಮಂಗಳವಾರ ಮಧ್ಯಾಹ್ನ 3 ಗಂಟೆ ಬಳಿಕ ಆಯಾ ಮತಗಟ್ಟೆಗಳ ನಿಯೋಜಿತ ಸಿಬ್ಬಂದಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ಟ್ರಾಂಗ್ ರೂಂ ಬಳಿಗೆ ಆಗಮಿಸಿ ವಿವಿಪ್ಯಾಟ್ ಸೇರಿದಂತೆ ಇತರ ಚುನಾವಣಾ ಸಾಮಗ್ರಿಗಳನ್ನು ತೆಗೆದುಕೊಂಡು ಹೋಗಲಿದ್ದಾರೆ.

ಒಟ್ಟು 58 ಸೇವಾ ಮತದಾರರಿದ್ದು , ಈ ಮತದಾರರಿಗೆ ಇಟಿಪಿಬಿಎಸ್ ತಂತ್ರಾಂಶದ ಮುಖಾಂತರ ವಿದ್ಯುನ್ಮಾನ ಮತಪತ್ರಗಳನ್ನು ರವಾನಿಸಲಾಗಿರುತ್ತದೆ. ತಂತ್ರಾಂಶ ಮೂಲಕ ಮತ ಚಲಾಯಿಸಲಿದ್ದಾರೆ. ಸಾರಿಗೆ ವ್ಯವಸ್ಥೆಗಾಗಿ ಒಟ್ಟು 58 ರೂಟ್ ಗಳನ್ನು ಗುರುತಿಸಲಾಗಿದ್ದು, ಬಸ್ ವ್ಯವಸ್ಥೆ ಮಾಡಲಾಗಿದೆ. ನಿಯೋಜಿತ 1,254 ಮಂದಿ ಸಿಬ್ಬಂದಿಗಳಿಗೆ ಯಾವುದೇ ಸಮಸ್ಯೆ ಇಲ್ಲದಂತೆ ಪ್ರತಿಯೊಂದನ್ನು ಒದಗಿಸಲಾಗಿದೆ. ಆಯಾ ಬೂತ್ ಗಳ ಮಾಹಿತಿಯನ್ನು ಬಿಎಲ್ ಓಗಳು ನೀಡಲಿದ್ದಾರೆ ಎಂದರು.

ಮನೆಯಿಂದ ಮತದಾನ ಮಾಡಿದ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿಕಲಚೇತನರು 220 ಮಂದಿ ನೋಂದಾಯಿಸಿಕೊಂಡಿದ್ದರು. 215 ಮಂದಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ ಎಂದು ತಿಳಿಸಿದರು.

ಕ್ಷೇತ್ರದಲ್ಲಿ 5 ಸಖಿ ಬೂತ್, 2 ಮಾದರಿ ಮತಗಟ್ಟೆ, ಒಂದು‌ ಪಿಡಬ್ಲೂಡಿ ಮತಗಟ್ಟೆ, ಒಂದು ಎಥ್ನಿಕ್ ಮತಗಟ್ಟೆಯನ್ನು ರಚಿಸಲಾಗಿದೆ. ಮೇ.10ರಂದು ಬೆಳಗ್ಗೆ 5:30ಕ್ಕೆ ಅಣಕು ಮತದಾನ ಆರಂಭಿಸಲಾಗುವುದು, ಮತದಾನ ಕಾರ್ಯವನ್ನು ಬೆಳಗ್ಗೆ 7‌ರಿಂದ ಸಂಜೆ 6ಗಂಟೆಯವರೆಗೆ ನಿಗದಿಪಡಿಸಲಾಗಿದೆ ಎಂದರು.

ಮೇ.13ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದ್ದು, ಮತದಾನ ಎಣಿಕೆ‌ ಕಾರ್ಯವನ್ನು ‌ದೇವನಹಳ್ಳಿ ಟೌನಿನ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಮಾಡಲಾಗುವುದು. ಮತ ಎಣಿಕೆ ಕೇಂದ್ರದಲ್ಲಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತ‌ ಎಣಿಕೆ ಕಾರ್ಯಕ್ಕಾಗಿ ಒಟ್ಟು 14 ಟೇಬಲ್ ಗಳನ್ನು ನಿಗದಿಪಡಿಸಲಾಗಿದ್ದು ಪ್ರತಿ ಟೇಬಲ್ ಗೆ ಒಬ್ಬರಂತೆ ಮತ ಎಣಿಕೆ ಏಜೆಂಟರನ್ನು ನೇಮಿಸಲಾಗಿದೆ ಎಂದರು.

ಬಹಿರಂಗ ಪ್ರಚಾರಕ್ಕೆ ತೆರೆ:

ಚುನಾವಣಾ ಪ್ರಚಾರ ಸಂಜೆಗೆ ಅಂತ್ಯಗೊಳ್ಳಲಿದೆ. ಕಡ್ಡಾಯವಾಗಿ ನೀತಿ ಸಂಹಿತೆ ಪಾಲನೆಗೆ ರಾಜಕೀಯ ಪಕ್ಷಗಳ ಎಲ್ಲಾ ನಾಯಕರಿಗೆ ತಿಳಿಸಲಾಗಿದೆ. ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಮೇಲೆ ಚುನಾವಣಾ ಸಿಬ್ಬಂದಿ ಹದ್ದಿನ ಕಣ್ಣು ಇರಿಸಿದ್ದಾರೆ ಎಂದರು.

ಕ್ಯೂಆರ್ ಕೋಡ್ ಸೈಬರ್ ಠಾಣೆಯಲ್ಲಿ ದೂರು ದಾಖಲು:

ಎರಡು ದಿನಗಳ ಹಿಂದೆ ಕ್ಷೇತ್ರಾದ್ಯಂತ ಸದ್ದು ಮಾಡಿದ್ದ ಕ್ಯೂಆರ್ ಕೋಡ್ ಪ್ರಕರಣ ಸೈಬರ್ ಠಾಣೆಗೆ ವರ್ಗಾವಣೆ ಆಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.

ಈ ವೇಳೆ ಸಹಾಯಕ ಚುನಾವಣಾಧಿಕಾರಿ ಮೋಹನಕುಮಾರಿ ಇದ್ದರು.

Ramesh Babu

Journalist

Recent Posts

The Ultimate Overview to Free Online Live Roulette Game

Are you a fan of gambling enterprise video games? Do you appreciate the excitement of…

5 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

16 hours ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

19 hours ago

Instant Play Casino

Instant play casinos allow you to play casino games online without installing any software. These…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

2 days ago