ಮೇ.10ರಂದು ನಡೆಯುವ ಮತದಾನಕ್ಕೆ ಮತಗಟ್ಟೆ ಸಜ್ಜು: ಚುನಾವಣಾಧಿಕಾರಿ ತೇಜಸ್ ಕುಮಾರ್

ಮೇ.10ರಂದು ನಡೆಯಲಿರುವ ಮತದಾನಕ್ಕಾಗಿ ಮತಗಟ್ಟೆಗಳನ್ನ ಸಜ್ಜುಗೊಳಿಸಲಾಗಿದೆ ಎಂಬ ಮಾಹಿತಿ ಮತದಾರರಿಗೆ ತಿಳಿಸುವ ಉದ್ದೇಶದಿಂದ

ಏ.29 ರಿಂದ ಏ.30ರವರೆಗೆ ಎರಡು ದಿನಗಳು 180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ 276 ಮತಗಟ್ಟೆಗಳನ್ನು ಮತದಾರರ ಮುಕ್ತ ಪರಿಶೀಲನೆಗೆ ಅವಕಾಶ ಕಲ್ಪಿಸಿದ್ದು, ಈ ಕಾರ್ಯಕ್ರಮದ ಭಾಗವಾಗಿ ಈ ದಿನ ಎಲ್ಲಾ 276 ಮತಗಟ್ಟೆಗಳ ಮೇಲೆ ಚುನಾವಣಾ ಆಯೋಗದ ಧ್ವಜವನ್ನು ಹಾರಿಸಿಲಾಗಿದ್ದು, ಮತದಾರರಿಗೆ ಮತಗಟ್ಟೆ ಗುರುತಿಸಲು ಮತ್ತು ಮತಗಟ್ಟೆಗಳಲ್ಲಿ ಒದಗಿಸಲಾದ ಶೌಚಾಲಯ, ನೀರಿನ ವ್ಯವಸ್ಥೆ, ವಿಶೇಷ ಚೇತರಿಗೆ ನೀಡಿರುವ ವ್ಯವಸ್ಥೆಗಳ ಪರಿಶೀಲನೆ ಮಾಡಬಹುದಾಗಿದೆ ಎಂದು ಚುನಾವಣಾಧಿಕಾರಿ ತೇಜಸ್ ಕುಮಾರ್ ಹೇಳಿಕೆ.

ತಾಲ್ಲೂಕು ಸ್ವೀಪ್ ಸಮಿತಿ ಮತ್ತು ನಗರಸಭೆ ಸಹಯೋಗದಲ್ಲಿ ನಗರಸಭೆ ವ್ಯಾಪ್ತಿಯ ಮುತ್ಸಂದ್ರ ಸರ್ಕಾರಿ ಶಾಲೆಯಲ್ಲಿ ‘ನಮ್ಮ ನಡೆ ಮತಗಟ್ಟೆ ಕಡೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೇ.10ರಂದು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲಾ ಮತದಾರರು ಕಡ್ಡಾಯವಾಗಿ ಮತದಾನ ಮಾಡಲು ಅನುಕೂಲವಾಗುವಂತೆ ಮತಗಟ್ಟೆಗಳಿಗೆ ಮೂಲಭೂತ ಸೌಲಭ್ಯ, ಶುದ್ಧ ಕುಡಿಯುವ ನೀರು, ಶೌಚಾಲಯ, ವಿಶೇಷಚೇತರಿಗೆ ವೀಲ್ಹ್ ಚೇರ್ ಇತ್ಯಾದಿಗಳನ್ನು ಕಲ್ಪಿಸಲಾಗಿದ್ದು, ಎಲ್ಲಾ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಭಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಲು ಚುನಾವಣಾಧಿಕಾರಿಗಳು ಮತದಾರರಲ್ಲಿ ಮನವಿ ಮಾಡಿದರು.

ನಂತರ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರಾದ ಶ್ರೀನಾಥಗೌಡ ಮಾತನಾಡಿ, ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚಿನ ಮತದಾನವಾಗುವ ನಿಟ್ಟಿನಲ್ಲಿ ಎಲ್ಲಾ ಮತಗಟ್ಟೆ ವ್ಯಾಪ್ತಿಯಲ್ಲಿ ಈಗಾಗಲೇ ಮತದಾನ ಜಾಗೃತಿ ಜಾಥಾ, ಪಂಜಿನ ಮೆರವಣಿಗೆ, ರಂಗೋಲಿ ಸ್ಪರ್ಧೆ, ಬೈಕ್ ಜಾಥಾ, ವಾಹನಗಳ ಮೂಲಕ ಜಾಗೃತಿ ಗೀತೆಗಳು ಒಳಗೊಂಡು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಾಲಾಗಿದೆ.

ಎಲ್ಲಾ ಮತದಾರರು ತಮ್ಮ ಜವಾಬ್ಧಾರಿಯನ್ನು ತಿಳಿದುಕೊಂಡು ಕಡ್ಡಾಯವಾಗಿ ಮತದಾನ ಮಾಡಬೇಕಾಗಿದ್ದು, ಮತದಾರರನ್ನು ಮತಗಟ್ಟೆ ಕಡೆ ಸೆಳೆಯುವ ಉದ್ದೇಶದಿಂದ ಗ್ರಾಮೀಣ ಭಾಗದಲ್ಲಿ 05 ಮತ್ತು ನಗರ ವ್ಯಾಪ್ತಿಯಲ್ಲಿ 04 ಮತಗಟ್ಟೆಗಳನ್ನು ಸಖಿ, ಮಾದರಿ, ವಿಶೇಷಚೇತನರ ಮತಗಟ್ಟೆಗಳನ್ನು ಸ್ಥಾಪಿಸಲಾಗಿರುತ್ತದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಚುನಾವಣಾಧಿಕಾರಿಗಳು ಪ್ರತಿಜ್ಞೆ ವಿಧಿಯನ್ನು ಬೋಧಿಸಿ, ನಗರವ್ಯಾಪ್ತಿಯ 31 ವಾರ್ಡ್ ಗಳನ್ನು ಮತದಾನ ಜಾಗೃತಿ ಮೂಡಿಸುವ ವಾಹನಗಳಿಗೆ ಮತ್ತು ಮತದಾನದ ಕುರಿತಾಗಿ ಚುನಾವಣಾ ಆಯೋಗದ ವಿಡಿಯೋ ಮಾಹಿತಿ ಒಳಗೊಂಡ ವಾಹನಗಳಿಗೆ ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ನಗರಸಭೆ ಆಯುಕ್ತರಾದ ಶಿವಶಂಕರ್, ನಗರಸಭೆ ಆರ್. ಐ ಪ್ರವೀಣ್, ಆಂಜನೇಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶ್ರೀಕಾಂತ್, ಬಿ.ಎಲ್. ಓ ಗಳು, ಶಿಕ್ಷಕರು ಮತ್ತು ಮುತ್ಸಂದ್ರ ಮತಗಟ್ಟೆಯ ಮತದಾರರು ಹಾಜರಾಗಿದ್ದರು.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

9 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

11 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

14 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 day ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago