ಮೇ.10ರಂದು ನಡೆಯುವ ಮತದಾನಕ್ಕೆ ಮತಗಟ್ಟೆ ಸಜ್ಜು: ಚುನಾವಣಾಧಿಕಾರಿ ತೇಜಸ್ ಕುಮಾರ್

ಮೇ.10ರಂದು ನಡೆಯಲಿರುವ ಮತದಾನಕ್ಕಾಗಿ ಮತಗಟ್ಟೆಗಳನ್ನ ಸಜ್ಜುಗೊಳಿಸಲಾಗಿದೆ ಎಂಬ ಮಾಹಿತಿ ಮತದಾರರಿಗೆ ತಿಳಿಸುವ ಉದ್ದೇಶದಿಂದ

ಏ.29 ರಿಂದ ಏ.30ರವರೆಗೆ ಎರಡು ದಿನಗಳು 180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ 276 ಮತಗಟ್ಟೆಗಳನ್ನು ಮತದಾರರ ಮುಕ್ತ ಪರಿಶೀಲನೆಗೆ ಅವಕಾಶ ಕಲ್ಪಿಸಿದ್ದು, ಈ ಕಾರ್ಯಕ್ರಮದ ಭಾಗವಾಗಿ ಈ ದಿನ ಎಲ್ಲಾ 276 ಮತಗಟ್ಟೆಗಳ ಮೇಲೆ ಚುನಾವಣಾ ಆಯೋಗದ ಧ್ವಜವನ್ನು ಹಾರಿಸಿಲಾಗಿದ್ದು, ಮತದಾರರಿಗೆ ಮತಗಟ್ಟೆ ಗುರುತಿಸಲು ಮತ್ತು ಮತಗಟ್ಟೆಗಳಲ್ಲಿ ಒದಗಿಸಲಾದ ಶೌಚಾಲಯ, ನೀರಿನ ವ್ಯವಸ್ಥೆ, ವಿಶೇಷ ಚೇತರಿಗೆ ನೀಡಿರುವ ವ್ಯವಸ್ಥೆಗಳ ಪರಿಶೀಲನೆ ಮಾಡಬಹುದಾಗಿದೆ ಎಂದು ಚುನಾವಣಾಧಿಕಾರಿ ತೇಜಸ್ ಕುಮಾರ್ ಹೇಳಿಕೆ.

ತಾಲ್ಲೂಕು ಸ್ವೀಪ್ ಸಮಿತಿ ಮತ್ತು ನಗರಸಭೆ ಸಹಯೋಗದಲ್ಲಿ ನಗರಸಭೆ ವ್ಯಾಪ್ತಿಯ ಮುತ್ಸಂದ್ರ ಸರ್ಕಾರಿ ಶಾಲೆಯಲ್ಲಿ ‘ನಮ್ಮ ನಡೆ ಮತಗಟ್ಟೆ ಕಡೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೇ.10ರಂದು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲಾ ಮತದಾರರು ಕಡ್ಡಾಯವಾಗಿ ಮತದಾನ ಮಾಡಲು ಅನುಕೂಲವಾಗುವಂತೆ ಮತಗಟ್ಟೆಗಳಿಗೆ ಮೂಲಭೂತ ಸೌಲಭ್ಯ, ಶುದ್ಧ ಕುಡಿಯುವ ನೀರು, ಶೌಚಾಲಯ, ವಿಶೇಷಚೇತರಿಗೆ ವೀಲ್ಹ್ ಚೇರ್ ಇತ್ಯಾದಿಗಳನ್ನು ಕಲ್ಪಿಸಲಾಗಿದ್ದು, ಎಲ್ಲಾ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಭಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಲು ಚುನಾವಣಾಧಿಕಾರಿಗಳು ಮತದಾರರಲ್ಲಿ ಮನವಿ ಮಾಡಿದರು.

ನಂತರ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರಾದ ಶ್ರೀನಾಥಗೌಡ ಮಾತನಾಡಿ, ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚಿನ ಮತದಾನವಾಗುವ ನಿಟ್ಟಿನಲ್ಲಿ ಎಲ್ಲಾ ಮತಗಟ್ಟೆ ವ್ಯಾಪ್ತಿಯಲ್ಲಿ ಈಗಾಗಲೇ ಮತದಾನ ಜಾಗೃತಿ ಜಾಥಾ, ಪಂಜಿನ ಮೆರವಣಿಗೆ, ರಂಗೋಲಿ ಸ್ಪರ್ಧೆ, ಬೈಕ್ ಜಾಥಾ, ವಾಹನಗಳ ಮೂಲಕ ಜಾಗೃತಿ ಗೀತೆಗಳು ಒಳಗೊಂಡು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಾಲಾಗಿದೆ.

ಎಲ್ಲಾ ಮತದಾರರು ತಮ್ಮ ಜವಾಬ್ಧಾರಿಯನ್ನು ತಿಳಿದುಕೊಂಡು ಕಡ್ಡಾಯವಾಗಿ ಮತದಾನ ಮಾಡಬೇಕಾಗಿದ್ದು, ಮತದಾರರನ್ನು ಮತಗಟ್ಟೆ ಕಡೆ ಸೆಳೆಯುವ ಉದ್ದೇಶದಿಂದ ಗ್ರಾಮೀಣ ಭಾಗದಲ್ಲಿ 05 ಮತ್ತು ನಗರ ವ್ಯಾಪ್ತಿಯಲ್ಲಿ 04 ಮತಗಟ್ಟೆಗಳನ್ನು ಸಖಿ, ಮಾದರಿ, ವಿಶೇಷಚೇತನರ ಮತಗಟ್ಟೆಗಳನ್ನು ಸ್ಥಾಪಿಸಲಾಗಿರುತ್ತದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಚುನಾವಣಾಧಿಕಾರಿಗಳು ಪ್ರತಿಜ್ಞೆ ವಿಧಿಯನ್ನು ಬೋಧಿಸಿ, ನಗರವ್ಯಾಪ್ತಿಯ 31 ವಾರ್ಡ್ ಗಳನ್ನು ಮತದಾನ ಜಾಗೃತಿ ಮೂಡಿಸುವ ವಾಹನಗಳಿಗೆ ಮತ್ತು ಮತದಾನದ ಕುರಿತಾಗಿ ಚುನಾವಣಾ ಆಯೋಗದ ವಿಡಿಯೋ ಮಾಹಿತಿ ಒಳಗೊಂಡ ವಾಹನಗಳಿಗೆ ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ನಗರಸಭೆ ಆಯುಕ್ತರಾದ ಶಿವಶಂಕರ್, ನಗರಸಭೆ ಆರ್. ಐ ಪ್ರವೀಣ್, ಆಂಜನೇಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶ್ರೀಕಾಂತ್, ಬಿ.ಎಲ್. ಓ ಗಳು, ಶಿಕ್ಷಕರು ಮತ್ತು ಮುತ್ಸಂದ್ರ ಮತಗಟ್ಟೆಯ ಮತದಾರರು ಹಾಜರಾಗಿದ್ದರು.

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

5 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

6 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago