ಮೇ 20 ಇ-ಫಾರ್ಮಸಿ ವಿರೋಧಿ ಬಂದ್‌ಗೆ ಔಷಧ ವ್ಯಾಪಾರಿಗಳ ಬೆಂಬಲ


ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ ಬಂದ್ ಅನ್ನು ಬೆಂಬಲಿಸಲಾಗುವುದು ಎಂದು ಔಷಧ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಅಧ್ಯಕ್ಷ ಟಿ.ಡಿ.ಶ್ಯಾಮ್ ಸುಂದರ್ ತಿಳಿಸಿದ್ದಾರೆ.

ಸೋಮವಾರ ಸಂಘದ ವತಿಯಿಂದ ನಗರದಲ್ಲಿನ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದ ನಂತರ ಬಂದ್ ಕುರಿತು ಮಾಹಿತಿ ನೀಡಿದ ಅವರು, ದೇಶದಲ್ಲಿ ಸುಮಾರು 12.40 ಲಕ್ಷಕ್ಕೂ ಹೆಚ್ಚು ಔಷಧ ವ್ಯಾಪಾರಿಗಳಿದ್ದು, ಆನ್ಲೈನ್ ಪೋರ್ಟಲ್ ಗಳ ಅನಿಯಂತ್ರಿತ ಕಾರ್ಯನಿರ್ವಹಣೆಯಿಂದ ಸಣ್ಣ ಹಾಗೂ ಮಧ್ಯಮ ಮಟ್ಟದ ಔಷಧ ಅಂಗಡಿಗಳ ಮೇಲೆ ಪರಿಣಾಮ ಬೀರುತ್ತಿದೆ. ಇ-ಫಾರ್ಮಸಿ ಪೋರ್ಟಲ್ಗಳು ಭಾರಿ ಪ್ರಮಾಣದ ರಿಯಾಯಿತಿ ನೀಡಿ ಔಷಧ ಮಾರಾಟ ಮಾಡುತ್ತಿರುವುದು ಸ್ಥಳೀಯ ವ್ಯಾಪಾರಿಗಳಿಗೆ ಸಂಕಷ್ಟ ತಂದೊಡ್ಡುತ್ತಿದೆ. ಕೋವಿಡ್-19 ಸಮಯದಲ್ಲಿ ಜಾರಿಯಾದ ತಾತ್ಕಾಲಿಕ ಆದೇಶಗಳನ್ನು ದುರುಪಯೋಗಪಡಿಸಿಕೊಂಡು ಇ-ಫಾರ್ಮಸಿ ಕಂಪನಿಗಳು ವ್ಯಾಪಾರ ವಿಸ್ತರಣೆ ಮಾಡಿಕೊಂಡಿವೆ. ವೈದ್ಯರು ನೀಡುವ ಚೀಟಿ ಇಲ್ಲದೆ ಔಷಧಿಗಳನ್ನು ಮಾರಾಟ ಮಾಡುವುದರಿಂದ ಗ್ರಾಹಕರ ಆರೋಗ್ಯಕ್ಕೂ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದರು.

ಅನಿಯಂತ್ರಿತ ಆನ್ಲೈನ್ ಔಷಧ ಮಾರಾಟದಿಂದ ರೋಗನಿರೋಧಕ ಔಷಧಿಗಳ ದುರ್ಬಳಕೆ ಹೆಚ್ಚಾಗಿ ಅಡ್ಡ ಪರಿಣಾಮದಗಳ ಸಮಸ್ಯೆ ತೀವ್ರವಾಗುತ್ತಿವೆ. ವೈದ್ಯರ ಸಲಹೆ ಇಲ್ಲದೆ ಔಷಧ ಲಭ್ಯವಾಗುತ್ತಿರುವುದು ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದರು.
ಆನ್ಲೈನ್ ಔಷಧಿ ಮಾರಾಟದಿಂದ ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ಕಾಯ್ದೆ ಉಲ್ಲಂಘನೆಯಾಗುತ್ತಿದೆ. ಸರ್ಕಾರ ತಕ್ಷಣ ಕ್ರಮ ಕೈಗೊಂಡು ಇ-ಫಾರ್ಮಸಿ ನಿಯಂತ್ರಣಕ್ಕೆ ಸ್ಪಷ್ಟ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಸಂಘದ ಸಂಸ್ಥಾಪಕ ಅಧ್ಯಕ್ಷ ಎನ್.ಸಿ.ಪಟಾಲಯ್ಯ ಮಾಹಿತಿ ನೀಡಿ,ವೈದ್ಯರಷ್ಟೇ ಮುಖ್ಯವಾಗಿರುವುದು ಔಷಧ ಮಾರಾಟಗಾರರು ಸಹ. ಬಂದ್ ವೇಳೆ ಖಾಸಗಿ ಆಸ್ಪತ್ರೆಗಳಲ್ಲಿನ ಔಷಧಿ ಮಾರಾಟ ಮಳಿಗೆಗಳು ತೆರೆದಿದ್ದು, ಪ್ರತಿ ನಿತ್ಯದಂತ ಔಷಧಿಗಳ ಮಾರಾಟ ಮಾಡಲಿವೆ. ರೋಗಿಗಳಿಗೆ ಔಷಧಿಗಳ ತುರ್ತು ಅಗತ್ಯ ಇದ್ದರೆ ಕರೆ ಮಾಡುವಂತೆ ತಾಲ್ಲೂಕಿನ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ವೈದ್ಯರಿಗೆ ಸಮೀಪದ ಔಷಧಿ ಮಾರಾಟಗಾರರ ಮೊಬೈಲ್ ನಂಬರ್ಗಳನ್ನು ನೀಡಲಾಗಿದೆ ಎಂದರು.

ಔಷಧ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನೀಡಲಾದ ಮನವಿ ಸ್ವೀಕರಿಸಿದ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಮಂಜುನಾಥ್ ‘ಔಷಧಿ ಮಾರಾಟ ಮಳಿಗೆಗಳ ಬಂದ್ ನಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಂಜಾಗ್ರತೆ ಹಾಗೂ ಎಚ್ಚರ ವಹಿಸಬೇಕು’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಔಷಧ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ಗೌರವ ಅಧ್ಯಕ್ಷ ಡಿ.ಎಸ್.ಸಿದ್ದಣ್ಣ, ಕಾರ್ಯದರ್ಶಿ ಸಿ.ರಜನೀಶ್, ಖಜಾಂಚಿ ರಹೀಂಖಾನ್, ಉಪಾಧ್ಯಕ್ಷ ಚಂದ್ರಣ್ಣ, ಕೆ.ಎಸ್.ಅಭಿಜಿತ್, ಮುರಳಿ, ಚಂದ್ರಶೇಖರ್, ರಂಗನಾಥ್, ರಾಮಕೃಷ್ಣ ಇದ್ದರು.

Ramesh Babu

Journalist

Recent Posts

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

8 hours ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

20 hours ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

1 day ago

ಜು.25ರಂದು ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ…

1 day ago

ಆಕ್ರೋಶ, ಅರಾಜಕತೆ ಮತ್ತು ಮಾಧ್ಯಮಗಳು…..

ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ,…

1 day ago

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಕರ್ನಾಟಕ ಮುಕ್ತ – ಖಾಸಗಿ ಹೂಡಿಕೆದಾರರಿಗೆ ಸರ್ಕಾರದಿಂದ ಸಂಪೂರ್ಣ ಬೆಂಬಲ- ಸಚಿವ ಕೆ.ಜೆ. ಜಾರ್ಜ್

ಕರ್ನಾಟಕವನ್ನು ದೇಶದ ಹೂಡಿಕೆ ಸ್ನೇಹಿ ಪ್ರವಾಸೋದ್ಯಮ ರಾಜ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಪ್ರವಾಸೋದ್ಯಮ ನೀತಿಗಳನ್ನು ಮತ್ತಷ್ಟು ಸರಳೀಕರಿಸುತ್ತಿದ್ದು, ಖಾಸಗಿ ಹೂಡಿಕೆದಾರರಿಗೆ…

1 day ago