ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ ಬಂದ್ ಅನ್ನು ಬೆಂಬಲಿಸಲಾಗುವುದು ಎಂದು ಔಷಧ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಅಧ್ಯಕ್ಷ ಟಿ.ಡಿ.ಶ್ಯಾಮ್ ಸುಂದರ್ ತಿಳಿಸಿದ್ದಾರೆ.
ಸೋಮವಾರ ಸಂಘದ ವತಿಯಿಂದ ನಗರದಲ್ಲಿನ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದ ನಂತರ ಬಂದ್ ಕುರಿತು ಮಾಹಿತಿ ನೀಡಿದ ಅವರು, ದೇಶದಲ್ಲಿ ಸುಮಾರು 12.40 ಲಕ್ಷಕ್ಕೂ ಹೆಚ್ಚು ಔಷಧ ವ್ಯಾಪಾರಿಗಳಿದ್ದು, ಆನ್ಲೈನ್ ಪೋರ್ಟಲ್ ಗಳ ಅನಿಯಂತ್ರಿತ ಕಾರ್ಯನಿರ್ವಹಣೆಯಿಂದ ಸಣ್ಣ ಹಾಗೂ ಮಧ್ಯಮ ಮಟ್ಟದ ಔಷಧ ಅಂಗಡಿಗಳ ಮೇಲೆ ಪರಿಣಾಮ ಬೀರುತ್ತಿದೆ. ಇ-ಫಾರ್ಮಸಿ ಪೋರ್ಟಲ್ಗಳು ಭಾರಿ ಪ್ರಮಾಣದ ರಿಯಾಯಿತಿ ನೀಡಿ ಔಷಧ ಮಾರಾಟ ಮಾಡುತ್ತಿರುವುದು ಸ್ಥಳೀಯ ವ್ಯಾಪಾರಿಗಳಿಗೆ ಸಂಕಷ್ಟ ತಂದೊಡ್ಡುತ್ತಿದೆ. ಕೋವಿಡ್-19 ಸಮಯದಲ್ಲಿ ಜಾರಿಯಾದ ತಾತ್ಕಾಲಿಕ ಆದೇಶಗಳನ್ನು ದುರುಪಯೋಗಪಡಿಸಿಕೊಂಡು ಇ-ಫಾರ್ಮಸಿ ಕಂಪನಿಗಳು ವ್ಯಾಪಾರ ವಿಸ್ತರಣೆ ಮಾಡಿಕೊಂಡಿವೆ. ವೈದ್ಯರು ನೀಡುವ ಚೀಟಿ ಇಲ್ಲದೆ ಔಷಧಿಗಳನ್ನು ಮಾರಾಟ ಮಾಡುವುದರಿಂದ ಗ್ರಾಹಕರ ಆರೋಗ್ಯಕ್ಕೂ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದರು.
ಅನಿಯಂತ್ರಿತ ಆನ್ಲೈನ್ ಔಷಧ ಮಾರಾಟದಿಂದ ರೋಗನಿರೋಧಕ ಔಷಧಿಗಳ ದುರ್ಬಳಕೆ ಹೆಚ್ಚಾಗಿ ಅಡ್ಡ ಪರಿಣಾಮದಗಳ ಸಮಸ್ಯೆ ತೀವ್ರವಾಗುತ್ತಿವೆ. ವೈದ್ಯರ ಸಲಹೆ ಇಲ್ಲದೆ ಔಷಧ ಲಭ್ಯವಾಗುತ್ತಿರುವುದು ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದರು.
ಆನ್ಲೈನ್ ಔಷಧಿ ಮಾರಾಟದಿಂದ ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ಕಾಯ್ದೆ ಉಲ್ಲಂಘನೆಯಾಗುತ್ತಿದೆ. ಸರ್ಕಾರ ತಕ್ಷಣ ಕ್ರಮ ಕೈಗೊಂಡು ಇ-ಫಾರ್ಮಸಿ ನಿಯಂತ್ರಣಕ್ಕೆ ಸ್ಪಷ್ಟ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಸಂಘದ ಸಂಸ್ಥಾಪಕ ಅಧ್ಯಕ್ಷ ಎನ್.ಸಿ.ಪಟಾಲಯ್ಯ ಮಾಹಿತಿ ನೀಡಿ,ವೈದ್ಯರಷ್ಟೇ ಮುಖ್ಯವಾಗಿರುವುದು ಔಷಧ ಮಾರಾಟಗಾರರು ಸಹ. ಬಂದ್ ವೇಳೆ ಖಾಸಗಿ ಆಸ್ಪತ್ರೆಗಳಲ್ಲಿನ ಔಷಧಿ ಮಾರಾಟ ಮಳಿಗೆಗಳು ತೆರೆದಿದ್ದು, ಪ್ರತಿ ನಿತ್ಯದಂತ ಔಷಧಿಗಳ ಮಾರಾಟ ಮಾಡಲಿವೆ. ರೋಗಿಗಳಿಗೆ ಔಷಧಿಗಳ ತುರ್ತು ಅಗತ್ಯ ಇದ್ದರೆ ಕರೆ ಮಾಡುವಂತೆ ತಾಲ್ಲೂಕಿನ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ವೈದ್ಯರಿಗೆ ಸಮೀಪದ ಔಷಧಿ ಮಾರಾಟಗಾರರ ಮೊಬೈಲ್ ನಂಬರ್ಗಳನ್ನು ನೀಡಲಾಗಿದೆ ಎಂದರು.
ಔಷಧ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನೀಡಲಾದ ಮನವಿ ಸ್ವೀಕರಿಸಿದ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಮಂಜುನಾಥ್ ‘ಔಷಧಿ ಮಾರಾಟ ಮಳಿಗೆಗಳ ಬಂದ್ ನಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಂಜಾಗ್ರತೆ ಹಾಗೂ ಎಚ್ಚರ ವಹಿಸಬೇಕು’ ಎಂದು ಹೇಳಿದರು.
ಈ ಸಂದರ್ಭದಲ್ಲಿ ಔಷಧ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ಗೌರವ ಅಧ್ಯಕ್ಷ ಡಿ.ಎಸ್.ಸಿದ್ದಣ್ಣ, ಕಾರ್ಯದರ್ಶಿ ಸಿ.ರಜನೀಶ್, ಖಜಾಂಚಿ ರಹೀಂಖಾನ್, ಉಪಾಧ್ಯಕ್ಷ ಚಂದ್ರಣ್ಣ, ಕೆ.ಎಸ್.ಅಭಿಜಿತ್, ಮುರಳಿ, ಚಂದ್ರಶೇಖರ್, ರಂಗನಾಥ್, ರಾಮಕೃಷ್ಣ ಇದ್ದರು.
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…
ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…
ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…
ಚಿಕ್ಕನಾಯಕನಹಳ್ಳಿ: ರೈತರ ವಿಕಸನಕ್ಕೆಂದೇ ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಪ್ರಯಾಣಿಕರ ಅನುಭವವನ್ನು ಇನ್ನಷ್ಟು ಸುಗಮ, ಅನುಕೂಲಕರ ಮತ್ತು ವೈಯಕ್ತಿಕ ಅಗತ್ಯಗಳಿಗೆ ಹೊಂದುವಂತೆ…