ಮೇ 20 ಇ-ಫಾರ್ಮಸಿ ವಿರೋಧಿ ಬಂದ್‌ಗೆ ಔಷಧ ವ್ಯಾಪಾರಿಗಳ ಬೆಂಬಲ


ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ ಬಂದ್ ಅನ್ನು ಬೆಂಬಲಿಸಲಾಗುವುದು ಎಂದು ಔಷಧ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಅಧ್ಯಕ್ಷ ಟಿ.ಡಿ.ಶ್ಯಾಮ್ ಸುಂದರ್ ತಿಳಿಸಿದ್ದಾರೆ.

ಸೋಮವಾರ ಸಂಘದ ವತಿಯಿಂದ ನಗರದಲ್ಲಿನ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದ ನಂತರ ಬಂದ್ ಕುರಿತು ಮಾಹಿತಿ ನೀಡಿದ ಅವರು, ದೇಶದಲ್ಲಿ ಸುಮಾರು 12.40 ಲಕ್ಷಕ್ಕೂ ಹೆಚ್ಚು ಔಷಧ ವ್ಯಾಪಾರಿಗಳಿದ್ದು, ಆನ್ಲೈನ್ ಪೋರ್ಟಲ್ ಗಳ ಅನಿಯಂತ್ರಿತ ಕಾರ್ಯನಿರ್ವಹಣೆಯಿಂದ ಸಣ್ಣ ಹಾಗೂ ಮಧ್ಯಮ ಮಟ್ಟದ ಔಷಧ ಅಂಗಡಿಗಳ ಮೇಲೆ ಪರಿಣಾಮ ಬೀರುತ್ತಿದೆ. ಇ-ಫಾರ್ಮಸಿ ಪೋರ್ಟಲ್ಗಳು ಭಾರಿ ಪ್ರಮಾಣದ ರಿಯಾಯಿತಿ ನೀಡಿ ಔಷಧ ಮಾರಾಟ ಮಾಡುತ್ತಿರುವುದು ಸ್ಥಳೀಯ ವ್ಯಾಪಾರಿಗಳಿಗೆ ಸಂಕಷ್ಟ ತಂದೊಡ್ಡುತ್ತಿದೆ. ಕೋವಿಡ್-19 ಸಮಯದಲ್ಲಿ ಜಾರಿಯಾದ ತಾತ್ಕಾಲಿಕ ಆದೇಶಗಳನ್ನು ದುರುಪಯೋಗಪಡಿಸಿಕೊಂಡು ಇ-ಫಾರ್ಮಸಿ ಕಂಪನಿಗಳು ವ್ಯಾಪಾರ ವಿಸ್ತರಣೆ ಮಾಡಿಕೊಂಡಿವೆ. ವೈದ್ಯರು ನೀಡುವ ಚೀಟಿ ಇಲ್ಲದೆ ಔಷಧಿಗಳನ್ನು ಮಾರಾಟ ಮಾಡುವುದರಿಂದ ಗ್ರಾಹಕರ ಆರೋಗ್ಯಕ್ಕೂ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದರು.

ಅನಿಯಂತ್ರಿತ ಆನ್ಲೈನ್ ಔಷಧ ಮಾರಾಟದಿಂದ ರೋಗನಿರೋಧಕ ಔಷಧಿಗಳ ದುರ್ಬಳಕೆ ಹೆಚ್ಚಾಗಿ ಅಡ್ಡ ಪರಿಣಾಮದಗಳ ಸಮಸ್ಯೆ ತೀವ್ರವಾಗುತ್ತಿವೆ. ವೈದ್ಯರ ಸಲಹೆ ಇಲ್ಲದೆ ಔಷಧ ಲಭ್ಯವಾಗುತ್ತಿರುವುದು ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದರು.
ಆನ್ಲೈನ್ ಔಷಧಿ ಮಾರಾಟದಿಂದ ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ಕಾಯ್ದೆ ಉಲ್ಲಂಘನೆಯಾಗುತ್ತಿದೆ. ಸರ್ಕಾರ ತಕ್ಷಣ ಕ್ರಮ ಕೈಗೊಂಡು ಇ-ಫಾರ್ಮಸಿ ನಿಯಂತ್ರಣಕ್ಕೆ ಸ್ಪಷ್ಟ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಸಂಘದ ಸಂಸ್ಥಾಪಕ ಅಧ್ಯಕ್ಷ ಎನ್.ಸಿ.ಪಟಾಲಯ್ಯ ಮಾಹಿತಿ ನೀಡಿ,ವೈದ್ಯರಷ್ಟೇ ಮುಖ್ಯವಾಗಿರುವುದು ಔಷಧ ಮಾರಾಟಗಾರರು ಸಹ. ಬಂದ್ ವೇಳೆ ಖಾಸಗಿ ಆಸ್ಪತ್ರೆಗಳಲ್ಲಿನ ಔಷಧಿ ಮಾರಾಟ ಮಳಿಗೆಗಳು ತೆರೆದಿದ್ದು, ಪ್ರತಿ ನಿತ್ಯದಂತ ಔಷಧಿಗಳ ಮಾರಾಟ ಮಾಡಲಿವೆ. ರೋಗಿಗಳಿಗೆ ಔಷಧಿಗಳ ತುರ್ತು ಅಗತ್ಯ ಇದ್ದರೆ ಕರೆ ಮಾಡುವಂತೆ ತಾಲ್ಲೂಕಿನ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ವೈದ್ಯರಿಗೆ ಸಮೀಪದ ಔಷಧಿ ಮಾರಾಟಗಾರರ ಮೊಬೈಲ್ ನಂಬರ್ಗಳನ್ನು ನೀಡಲಾಗಿದೆ ಎಂದರು.

ಔಷಧ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನೀಡಲಾದ ಮನವಿ ಸ್ವೀಕರಿಸಿದ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಮಂಜುನಾಥ್ ‘ಔಷಧಿ ಮಾರಾಟ ಮಳಿಗೆಗಳ ಬಂದ್ ನಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಂಜಾಗ್ರತೆ ಹಾಗೂ ಎಚ್ಚರ ವಹಿಸಬೇಕು’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಔಷಧ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ಗೌರವ ಅಧ್ಯಕ್ಷ ಡಿ.ಎಸ್.ಸಿದ್ದಣ್ಣ, ಕಾರ್ಯದರ್ಶಿ ಸಿ.ರಜನೀಶ್, ಖಜಾಂಚಿ ರಹೀಂಖಾನ್, ಉಪಾಧ್ಯಕ್ಷ ಚಂದ್ರಣ್ಣ, ಕೆ.ಎಸ್.ಅಭಿಜಿತ್, ಮುರಳಿ, ಚಂದ್ರಶೇಖರ್, ರಂಗನಾಥ್, ರಾಮಕೃಷ್ಣ ಇದ್ದರು.

Ramesh Babu

Journalist

Recent Posts

ಆಶ್ರಯ ನಿವೇಶನ ಹಂಚಿಕೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಆರೋಪ: ಕರವೇ ಪ್ರತಿಭಟನೆ

ದೊಡ್ಡಬಳ್ಳಾಪುರ: ಆಶ್ರಯ ನಿವೇಶನ ಹಾಗೂ ವಸತಿ ಯೋಜನೆಯಡಿ ಮಂಜೂರಾಗಿರುವ ಸರ್ಕಾರಿ ಜಮೀನಿನಲ್ಲಿ ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಿಸುವಲ್ಲಿ ಕೆಲವು ಗ್ರಾಮ…

11 hours ago

ಜು. 5 ಕ್ಕೆ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗಿ- ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಯು ಜುಲೈ 5 ಕ್ಕೆ…

11 hours ago

ರಾಮನಗರ ಕಲ್ಲು ಕ್ವಾರಿ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, 5 ಮಂದಿಗೆ ಗಂಭೀರ ಗಾಯ

ರಾಮನಗರ: ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣದಲ್ಲಿರುವ ಕಾವೇರಿ ಜಲ್ಲಿ ಕ್ರಷರ್‌ನ ಕಲ್ಲು ಕ್ವಾರಿಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದ ಭೀಕರ ದುರಂತದಲ್ಲಿ…

18 hours ago

‘ವೈದ್ಯರ ನಿಯಂತ್ರಣ ಮೀರಿ ಹೋಗುತ್ತಿರುವ ಆರೋಗ್ಯ ಕ್ಷೇತ್ರ’……..

ವೈದ್ಯರ ನಿಯಂತ್ರಣ ಮೀರಿ ಹೋಗುತ್ತಿರುವ ಆರೋಗ್ಯ ಕ್ಷೇತ್ರ........ ವೈದ್ಯರ ದಿನದ ಸಂದರ್ಭದಲ್ಲಿ ಅತ್ಯಂತ ಆತಂಕಕಾರಿ ಬೆಳವಣಿಗೆಯ ಬಗ್ಗೆ ನಾವು ಯೋಚಿಸಬೇಕಿದೆ.…

21 hours ago

ಎತ್ತಿನಹೊಳೆ ಡ್ಯಾಂಗೆ ರೈತರ ವಿರೋಧ: ಕಾಮಗಾರಿ ತಡೆಗೆ ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಶಾಸಕ ಧೀರಜ್ ಮುನಿರಾಜ್ ಮನವಿ

ದೊಡ್ಡಬಳ್ಳಾಪುರ: ಜಲಸಂಪನ್ಮೂಲ ಇಲಾಖೆ ಹಾಗೂ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ವತಿಯಿಂದ ಜಲಸಂಪನ್ಮೂಲ ಸಚಿವರು ಹಾಗೂ ಬೆಂಗಳೂರು ದಕ್ಷಿಣ ಮತ್ತು…

22 hours ago

ಶಂಕುಸ್ಥಾಪನೆಯೇ ಅಭಿವೃದ್ಧಿಯೇ?- ಶಾಸಕ ಧೀರಜ್ ಮುನಿರಾಜ್ ಪ್ರೋಗ್ರೆಸ್ ಕಾರ್ಡ್ ನೀಡಿ- ಕಾಂಗ್ರೆಸ್ ಯುವ ಘಟಕ ಆಗ್ರಹ

ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜು ಅವರು ತಮ್ಮ ಮೂರು ವರ್ಷದ ಅವಧಿಯ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರೋಗ್ರೆಸ್ ಕಾರ್ಡ್ (ರಿಪೋರ್ಟ್…

1 day ago