ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ ಬಂದ್ ಅನ್ನು ಬೆಂಬಲಿಸಲಾಗುವುದು ಎಂದು ಔಷಧ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಅಧ್ಯಕ್ಷ ಟಿ.ಡಿ.ಶ್ಯಾಮ್ ಸುಂದರ್ ತಿಳಿಸಿದ್ದಾರೆ.
ಸೋಮವಾರ ಸಂಘದ ವತಿಯಿಂದ ನಗರದಲ್ಲಿನ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದ ನಂತರ ಬಂದ್ ಕುರಿತು ಮಾಹಿತಿ ನೀಡಿದ ಅವರು, ದೇಶದಲ್ಲಿ ಸುಮಾರು 12.40 ಲಕ್ಷಕ್ಕೂ ಹೆಚ್ಚು ಔಷಧ ವ್ಯಾಪಾರಿಗಳಿದ್ದು, ಆನ್ಲೈನ್ ಪೋರ್ಟಲ್ ಗಳ ಅನಿಯಂತ್ರಿತ ಕಾರ್ಯನಿರ್ವಹಣೆಯಿಂದ ಸಣ್ಣ ಹಾಗೂ ಮಧ್ಯಮ ಮಟ್ಟದ ಔಷಧ ಅಂಗಡಿಗಳ ಮೇಲೆ ಪರಿಣಾಮ ಬೀರುತ್ತಿದೆ. ಇ-ಫಾರ್ಮಸಿ ಪೋರ್ಟಲ್ಗಳು ಭಾರಿ ಪ್ರಮಾಣದ ರಿಯಾಯಿತಿ ನೀಡಿ ಔಷಧ ಮಾರಾಟ ಮಾಡುತ್ತಿರುವುದು ಸ್ಥಳೀಯ ವ್ಯಾಪಾರಿಗಳಿಗೆ ಸಂಕಷ್ಟ ತಂದೊಡ್ಡುತ್ತಿದೆ. ಕೋವಿಡ್-19 ಸಮಯದಲ್ಲಿ ಜಾರಿಯಾದ ತಾತ್ಕಾಲಿಕ ಆದೇಶಗಳನ್ನು ದುರುಪಯೋಗಪಡಿಸಿಕೊಂಡು ಇ-ಫಾರ್ಮಸಿ ಕಂಪನಿಗಳು ವ್ಯಾಪಾರ ವಿಸ್ತರಣೆ ಮಾಡಿಕೊಂಡಿವೆ. ವೈದ್ಯರು ನೀಡುವ ಚೀಟಿ ಇಲ್ಲದೆ ಔಷಧಿಗಳನ್ನು ಮಾರಾಟ ಮಾಡುವುದರಿಂದ ಗ್ರಾಹಕರ ಆರೋಗ್ಯಕ್ಕೂ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದರು.
ಅನಿಯಂತ್ರಿತ ಆನ್ಲೈನ್ ಔಷಧ ಮಾರಾಟದಿಂದ ರೋಗನಿರೋಧಕ ಔಷಧಿಗಳ ದುರ್ಬಳಕೆ ಹೆಚ್ಚಾಗಿ ಅಡ್ಡ ಪರಿಣಾಮದಗಳ ಸಮಸ್ಯೆ ತೀವ್ರವಾಗುತ್ತಿವೆ. ವೈದ್ಯರ ಸಲಹೆ ಇಲ್ಲದೆ ಔಷಧ ಲಭ್ಯವಾಗುತ್ತಿರುವುದು ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದರು.
ಆನ್ಲೈನ್ ಔಷಧಿ ಮಾರಾಟದಿಂದ ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ಕಾಯ್ದೆ ಉಲ್ಲಂಘನೆಯಾಗುತ್ತಿದೆ. ಸರ್ಕಾರ ತಕ್ಷಣ ಕ್ರಮ ಕೈಗೊಂಡು ಇ-ಫಾರ್ಮಸಿ ನಿಯಂತ್ರಣಕ್ಕೆ ಸ್ಪಷ್ಟ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಸಂಘದ ಸಂಸ್ಥಾಪಕ ಅಧ್ಯಕ್ಷ ಎನ್.ಸಿ.ಪಟಾಲಯ್ಯ ಮಾಹಿತಿ ನೀಡಿ,ವೈದ್ಯರಷ್ಟೇ ಮುಖ್ಯವಾಗಿರುವುದು ಔಷಧ ಮಾರಾಟಗಾರರು ಸಹ. ಬಂದ್ ವೇಳೆ ಖಾಸಗಿ ಆಸ್ಪತ್ರೆಗಳಲ್ಲಿನ ಔಷಧಿ ಮಾರಾಟ ಮಳಿಗೆಗಳು ತೆರೆದಿದ್ದು, ಪ್ರತಿ ನಿತ್ಯದಂತ ಔಷಧಿಗಳ ಮಾರಾಟ ಮಾಡಲಿವೆ. ರೋಗಿಗಳಿಗೆ ಔಷಧಿಗಳ ತುರ್ತು ಅಗತ್ಯ ಇದ್ದರೆ ಕರೆ ಮಾಡುವಂತೆ ತಾಲ್ಲೂಕಿನ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ವೈದ್ಯರಿಗೆ ಸಮೀಪದ ಔಷಧಿ ಮಾರಾಟಗಾರರ ಮೊಬೈಲ್ ನಂಬರ್ಗಳನ್ನು ನೀಡಲಾಗಿದೆ ಎಂದರು.
ಔಷಧ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನೀಡಲಾದ ಮನವಿ ಸ್ವೀಕರಿಸಿದ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಮಂಜುನಾಥ್ ‘ಔಷಧಿ ಮಾರಾಟ ಮಳಿಗೆಗಳ ಬಂದ್ ನಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಂಜಾಗ್ರತೆ ಹಾಗೂ ಎಚ್ಚರ ವಹಿಸಬೇಕು’ ಎಂದು ಹೇಳಿದರು.
ಈ ಸಂದರ್ಭದಲ್ಲಿ ಔಷಧ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ಗೌರವ ಅಧ್ಯಕ್ಷ ಡಿ.ಎಸ್.ಸಿದ್ದಣ್ಣ, ಕಾರ್ಯದರ್ಶಿ ಸಿ.ರಜನೀಶ್, ಖಜಾಂಚಿ ರಹೀಂಖಾನ್, ಉಪಾಧ್ಯಕ್ಷ ಚಂದ್ರಣ್ಣ, ಕೆ.ಎಸ್.ಅಭಿಜಿತ್, ಮುರಳಿ, ಚಂದ್ರಶೇಖರ್, ರಂಗನಾಥ್, ರಾಮಕೃಷ್ಣ ಇದ್ದರು.
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ…
ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…
ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…
ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…
ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…