ಮೇ.21ಕ್ಕೆ ಭೂಸ್ವಾಧೀನ ವಿರೋಧಿಸಿ ಡಿಸಿ ಕಚೇರಿಗೆ ಟ್ರ್ಯಾಕರ್ ಮೆರವಣಿಗೆ

ದೊಡ್ಡಬೆಳವಂಗಲ ಹೋಬಳಿಯ 2100 ಎಕರೆಯ ಭೂಸ್ವಾಧೀನ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಗೆ ದೊಡ್ಡಬೆಳವಂಗಲ,‌ ಚಿಕ್ಕಬೆಳವಂಗಲ, ಸೊಣ್ಣೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳ ರೈತರಿಂದ ಟ್ರ್ಯಾಕ್ಟರ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ದೊಡ್ಡ ಬೆಳವಂಗಲ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಡಿ.ಪಿ ಶಶಿಧರ್ ತಿಳಿಸಿದರು.

ತಾಲೂಕಿನ ದೊಡ್ಡಬೆಳವಂಗಲದ ಹಳೇ ನಾಡಕಚೇರಿ ಸಮೀಪದ ಭೂಸ್ವಾಧೀನ ವಿರೋಧಿ ಹೋರಾಟದ ಸ್ಥಳದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು .

ದೊಡ್ಡಬೆಳವಂಗಲ ಸುತ್ತಮುತ್ತಲ್ಲಿನ 5 ಗ್ರಾಮಗಳ 2100 ಎಕರೆ ಕೃಷಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಪ್ರಯತ್ನಿಸಲಾಗುತ್ತಿದೆ. ಇದನ್ನು ವಿರೋಧಿಸಿ ಮಾ.20 ರಿಂದ ಹೋರಾಟ ಆರಂಭಿಸಲಾಯಿತು. ಕೆಐಎಡಿಬಿ, ಜಿಲ್ಲಾ ಉಸ್ತುವಾರಿ ಸಚಿವರಿಗೂ ಮನವಿ ಸಲ್ಲಿಸಲಾಗಿದೆ. ಮುಖ್ಯ ಮಂತ್ರಿಗಳಿಗೂ ಮನವಿ ಮಾಡಲಾಗಿದೆ. ‌ಆದರೆ ಯಾವುದೇ ಪ್ರಯೋಜನವಾಗಿಲ್ಲ. ನಮ್ಮ ‌ಜೀವ ಇರುವವರಿಗೂ ಸರಕಾರಕ್ಕೆ ಭೂಮಿ ಕೊಡುವುದಿಲ್ಲ. ಈವರೆಗೂ ಯಾವ ಅಧಿಕಾರಿಗಳು, ಜನಪ್ರತಿನಿಧಿಗಳು ನಮಗೆ ಸ್ಪಂದಿಸಿಲ್ಲ.‌ ರೈತರ ವಿರೋಧಿ ಸರಕಾರಕ್ಕೆ ದಿಕ್ಕಾರ ಹೇಳುತ್ತೇವೆ. ನಮ್ಮ ಪಿತ್ರಾರ್ಜಿತ ಆಸ್ತಿಯನ್ನು ‌ಮುಂದಿನ‌ ಪೀಳಿಗೆಗರ ನೀಡಬೇಕು. ಕಳೆದ 42 ದಿನಗಳಿಂದ ಹೋರಾಟ ಮಾಡಿಕೊಂಡು ಬದಲಾಗುತ್ತಿದೆ. ಮೇ.21ರಂದು ಟ್ರ್ಯಾಕರ್ ಮೆರವಣಿಗೆಯನ್ನು ಹೋರಾಟದ ಸ್ಥಳದಿಂದ ಜಿಲ್ಲಾಧಿಕಾರಿ ಕಚೇರಿಗೆ ಬೆಳಿಗ್ಗೆ 9.30 ಕ್ಕೆ ಆರಂಭಿಸಲಾಗುತ್ತದೆ. ಇಲ್ಲಿನ ರೈತರ ಜಮೀನು ಯಾವುದೇ ಕಾರಣಕ್ಕೂ ನೀಡುವುದಿಲ್ಲ ಎಂದರು.

ಸದ್ಯ ಅಧಿಕೃತವಾಗಿ 2100 ಎಕರೆ ಸ್ವಾಧೀನ ಮಾಡಿಕೊಳ್ಳಲು ಮೇಲ್ನೋಟಕ್ಕೆ ಹೇಳುತ್ತಿದ್ದರೆ. ಆದರೆ ಮೂಲಗಳ ಪ್ರಕಾರ 3 ಸಾವಿರಕ್ಕೂ ಅಧಿಕ ಭೂಮಿಯನ್ನು ವಶಕ್ಕೆ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ. ಅಡಿಕೆ ಫಸಲು ಬರುವ ಮುನ್ನವೇ ನಮ್ಮ ಭೂಮಿ ವಶಕ್ಕೆ ಮುಂದಾಗಿದ್ದಾರೆ. ತಾಲೂಕಿನಲ್ಲಿ 18 ಸಾವಿರಕ್ಕೂ ಅಧಿಕ ಭೂಮಿ‌ ಈಗಾಗಲೇ ವಶಕ್ಕೆ ಪಡೆಯಲಾಗಿದೆ ಎಂದರು.

ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ಪ್ರಭಾ ಬೆಳವಂಗಲ ಮಾತನಾಡಿ, ಪಕ್ಷ, ಧರ್ಮ, ಜಾತಿ ಮರೆತು ಒಗ್ಗೂಟ್ಟಿನಿಂದ ಹೋರಾಟ ನಡೆಯುತ್ತಿದೆ. ಈಗಾಗಲೇ ಅನೇಕ ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಕೂಡ ಪ್ರಯೋಜನವಾಗಿಲ್ಲ. 42 ದಿನ ಕಳೆದರೂ ಕೂಡ ಯಾರು ಸ್ಪಂದಿಸಿಲ್ಲ. ಪ್ರತಿ ಹಳ್ಳಿಗಳಲ್ಲಿ ಹೋರಾಟದ ಬಗ್ಗೆ ಪ್ರಚಾರ ಮಾಡಲಾಗುತ್ತಿದೆ. ಎಸ್ ಟಿಆರ್ ಆರ್ ರಸ್ತೆ ಸುತ್ತಮುತ್ತಲಿನ ಎಲ್ಲಾ ಜಮೀನು ಕಬಳಿಸಲು ಮುಂದಾಗುತ್ತಿದೆ. ಡ್ರೋನ್ ಮೂಲಕ ಸರ್ವೇ ಮಾಡಲಾಗುತ್ತಿದೆ. ಕೆಐಎಡಿಬಿ ವತಿಯಿಂದ ಈಗಾಗಲೇ ಸಾವಿರಾರು ಎಕರೆ ಜಮೀನು ಕಬಳಿಸಲಾಗಿದೆ. ಈ ತಾಲೂಕಿನಲ್ಲಿ ಮೊದಲ ಬಾರಿಗೆ ಭೂಮಿಯ ಕೊಡದಿರುವ ಬಗ್ಗೆ ಕೂಗು ರೈತರಿಂದ ಕೇಳಿಬಂದಿದೆ. ಇಲ್ಲಿನ ರೈತರು ಶೇ.99 ರಷ್ಡು ಭೂಮಿ ಕೊಡುವುದಿಲ್ಲ ಎನ್ನುತ್ತಿದ್ದಾರೆ. ಈ ಹೋರಾಟ ಚರಿತ್ರೆಯಾಗಲಿದೆ. ಒಗ್ಗಟ್ಟಿನ ಹೋರಾಟ‌ ಮಾಡಲಾಗುತ್ತಿದೆ ಭೂಮಿಯನ್ನು ಯಾವ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ ಎಂದರು.

ಈ‌ ವೇಳೆ ಮುಖಂಡರಾದ ತಿಮ್ಮೇಗೌಡ, ಸುನೀಲ್, ಕೇಶವ್ ಮೂರ್ತಿ, ಧರ್ಮೇಂದ್ರ, ರಾಮಕೃಷ್ಣಯ್ಯ, ಮಲ್ಲರಾಜು, ರಮೇಶ್ ,ಆನಂದ್, ಕಿಶೋರ್,  ಗೋವಿಂದ್ ರಾಜು, ಚನ್ನೇಗೌಡ, ಕೆಂಪೇಗೌಡ, ರಾಮೇಗೌಡ, ಕೃಷ್ಣಮೂರ್ತಿ, ಶಿವಗಂಗಯ್ಯ, ಅಪ್ಪಯ್ಯಣ್ಣ ಸೇರಿದಂತೆ ಅನೇಕರು ಹಾಜರಿದ್ದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

22 hours ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

1 day ago

ಜು.25ರಂದು ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ…

1 day ago

ಆಕ್ರೋಶ, ಅರಾಜಕತೆ ಮತ್ತು ಮಾಧ್ಯಮಗಳು…..

ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ,…

1 day ago