ಮೇ.21ಕ್ಕೆ ಭೂಸ್ವಾಧೀನ ವಿರೋಧಿಸಿ ಡಿಸಿ ಕಚೇರಿಗೆ ಟ್ರ್ಯಾಕರ್ ಮೆರವಣಿಗೆ

ದೊಡ್ಡಬೆಳವಂಗಲ ಹೋಬಳಿಯ 2100 ಎಕರೆಯ ಭೂಸ್ವಾಧೀನ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಗೆ ದೊಡ್ಡಬೆಳವಂಗಲ,‌ ಚಿಕ್ಕಬೆಳವಂಗಲ, ಸೊಣ್ಣೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳ ರೈತರಿಂದ ಟ್ರ್ಯಾಕ್ಟರ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ದೊಡ್ಡ ಬೆಳವಂಗಲ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಡಿ.ಪಿ ಶಶಿಧರ್ ತಿಳಿಸಿದರು.

ತಾಲೂಕಿನ ದೊಡ್ಡಬೆಳವಂಗಲದ ಹಳೇ ನಾಡಕಚೇರಿ ಸಮೀಪದ ಭೂಸ್ವಾಧೀನ ವಿರೋಧಿ ಹೋರಾಟದ ಸ್ಥಳದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು .

ದೊಡ್ಡಬೆಳವಂಗಲ ಸುತ್ತಮುತ್ತಲ್ಲಿನ 5 ಗ್ರಾಮಗಳ 2100 ಎಕರೆ ಕೃಷಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಪ್ರಯತ್ನಿಸಲಾಗುತ್ತಿದೆ. ಇದನ್ನು ವಿರೋಧಿಸಿ ಮಾ.20 ರಿಂದ ಹೋರಾಟ ಆರಂಭಿಸಲಾಯಿತು. ಕೆಐಎಡಿಬಿ, ಜಿಲ್ಲಾ ಉಸ್ತುವಾರಿ ಸಚಿವರಿಗೂ ಮನವಿ ಸಲ್ಲಿಸಲಾಗಿದೆ. ಮುಖ್ಯ ಮಂತ್ರಿಗಳಿಗೂ ಮನವಿ ಮಾಡಲಾಗಿದೆ. ‌ಆದರೆ ಯಾವುದೇ ಪ್ರಯೋಜನವಾಗಿಲ್ಲ. ನಮ್ಮ ‌ಜೀವ ಇರುವವರಿಗೂ ಸರಕಾರಕ್ಕೆ ಭೂಮಿ ಕೊಡುವುದಿಲ್ಲ. ಈವರೆಗೂ ಯಾವ ಅಧಿಕಾರಿಗಳು, ಜನಪ್ರತಿನಿಧಿಗಳು ನಮಗೆ ಸ್ಪಂದಿಸಿಲ್ಲ.‌ ರೈತರ ವಿರೋಧಿ ಸರಕಾರಕ್ಕೆ ದಿಕ್ಕಾರ ಹೇಳುತ್ತೇವೆ. ನಮ್ಮ ಪಿತ್ರಾರ್ಜಿತ ಆಸ್ತಿಯನ್ನು ‌ಮುಂದಿನ‌ ಪೀಳಿಗೆಗರ ನೀಡಬೇಕು. ಕಳೆದ 42 ದಿನಗಳಿಂದ ಹೋರಾಟ ಮಾಡಿಕೊಂಡು ಬದಲಾಗುತ್ತಿದೆ. ಮೇ.21ರಂದು ಟ್ರ್ಯಾಕರ್ ಮೆರವಣಿಗೆಯನ್ನು ಹೋರಾಟದ ಸ್ಥಳದಿಂದ ಜಿಲ್ಲಾಧಿಕಾರಿ ಕಚೇರಿಗೆ ಬೆಳಿಗ್ಗೆ 9.30 ಕ್ಕೆ ಆರಂಭಿಸಲಾಗುತ್ತದೆ. ಇಲ್ಲಿನ ರೈತರ ಜಮೀನು ಯಾವುದೇ ಕಾರಣಕ್ಕೂ ನೀಡುವುದಿಲ್ಲ ಎಂದರು.

ಸದ್ಯ ಅಧಿಕೃತವಾಗಿ 2100 ಎಕರೆ ಸ್ವಾಧೀನ ಮಾಡಿಕೊಳ್ಳಲು ಮೇಲ್ನೋಟಕ್ಕೆ ಹೇಳುತ್ತಿದ್ದರೆ. ಆದರೆ ಮೂಲಗಳ ಪ್ರಕಾರ 3 ಸಾವಿರಕ್ಕೂ ಅಧಿಕ ಭೂಮಿಯನ್ನು ವಶಕ್ಕೆ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ. ಅಡಿಕೆ ಫಸಲು ಬರುವ ಮುನ್ನವೇ ನಮ್ಮ ಭೂಮಿ ವಶಕ್ಕೆ ಮುಂದಾಗಿದ್ದಾರೆ. ತಾಲೂಕಿನಲ್ಲಿ 18 ಸಾವಿರಕ್ಕೂ ಅಧಿಕ ಭೂಮಿ‌ ಈಗಾಗಲೇ ವಶಕ್ಕೆ ಪಡೆಯಲಾಗಿದೆ ಎಂದರು.

ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ಪ್ರಭಾ ಬೆಳವಂಗಲ ಮಾತನಾಡಿ, ಪಕ್ಷ, ಧರ್ಮ, ಜಾತಿ ಮರೆತು ಒಗ್ಗೂಟ್ಟಿನಿಂದ ಹೋರಾಟ ನಡೆಯುತ್ತಿದೆ. ಈಗಾಗಲೇ ಅನೇಕ ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಕೂಡ ಪ್ರಯೋಜನವಾಗಿಲ್ಲ. 42 ದಿನ ಕಳೆದರೂ ಕೂಡ ಯಾರು ಸ್ಪಂದಿಸಿಲ್ಲ. ಪ್ರತಿ ಹಳ್ಳಿಗಳಲ್ಲಿ ಹೋರಾಟದ ಬಗ್ಗೆ ಪ್ರಚಾರ ಮಾಡಲಾಗುತ್ತಿದೆ. ಎಸ್ ಟಿಆರ್ ಆರ್ ರಸ್ತೆ ಸುತ್ತಮುತ್ತಲಿನ ಎಲ್ಲಾ ಜಮೀನು ಕಬಳಿಸಲು ಮುಂದಾಗುತ್ತಿದೆ. ಡ್ರೋನ್ ಮೂಲಕ ಸರ್ವೇ ಮಾಡಲಾಗುತ್ತಿದೆ. ಕೆಐಎಡಿಬಿ ವತಿಯಿಂದ ಈಗಾಗಲೇ ಸಾವಿರಾರು ಎಕರೆ ಜಮೀನು ಕಬಳಿಸಲಾಗಿದೆ. ಈ ತಾಲೂಕಿನಲ್ಲಿ ಮೊದಲ ಬಾರಿಗೆ ಭೂಮಿಯ ಕೊಡದಿರುವ ಬಗ್ಗೆ ಕೂಗು ರೈತರಿಂದ ಕೇಳಿಬಂದಿದೆ. ಇಲ್ಲಿನ ರೈತರು ಶೇ.99 ರಷ್ಡು ಭೂಮಿ ಕೊಡುವುದಿಲ್ಲ ಎನ್ನುತ್ತಿದ್ದಾರೆ. ಈ ಹೋರಾಟ ಚರಿತ್ರೆಯಾಗಲಿದೆ. ಒಗ್ಗಟ್ಟಿನ ಹೋರಾಟ‌ ಮಾಡಲಾಗುತ್ತಿದೆ ಭೂಮಿಯನ್ನು ಯಾವ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ ಎಂದರು.

ಈ‌ ವೇಳೆ ಮುಖಂಡರಾದ ತಿಮ್ಮೇಗೌಡ, ಸುನೀಲ್, ಕೇಶವ್ ಮೂರ್ತಿ, ಧರ್ಮೇಂದ್ರ, ರಾಮಕೃಷ್ಣಯ್ಯ, ಮಲ್ಲರಾಜು, ರಮೇಶ್ ,ಆನಂದ್, ಕಿಶೋರ್,  ಗೋವಿಂದ್ ರಾಜು, ಚನ್ನೇಗೌಡ, ಕೆಂಪೇಗೌಡ, ರಾಮೇಗೌಡ, ಕೃಷ್ಣಮೂರ್ತಿ, ಶಿವಗಂಗಯ್ಯ, ಅಪ್ಪಯ್ಯಣ್ಣ ಸೇರಿದಂತೆ ಅನೇಕರು ಹಾಜರಿದ್ದರು.

Ramesh Babu

Journalist

Recent Posts

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

19 minutes ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

4 hours ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

4 hours ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

6 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ ರಾಜಶೇಖರ್ ಆಚಾರ್

  ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

16 hours ago

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ : ಕಾರ್ಯದರ್ಶಿ ಹೇಮಂತ್

  ಚಿಕ್ಕನಾಯಕನಹಳ್ಳಿ: ರೈತರ ವಿಕಸನಕ್ಕೆಂದೇ ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

16 hours ago