ನೂತನ ಸಂಸತ್ ಭವನ ಕಟ್ಟಡವನ್ನು ಉದ್ಘಾಟನೆ ಮಾಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆ ಇದೇ ಭಾನುವಾರ ಮೇ.28 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನ ಕಟ್ಟಡವನ್ನು ಉದ್ಘಾಟನೆ ಮಾಡಲಿದ್ದಾರೆ.
ನೂತನ ಸಂಸತ್ ಭವನ ಕಟ್ಟಡವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಏಕೆ ಉದ್ಘಾಟನೆ ಮಾಡಬೇಕು ಅನ್ನೋದು ವಿಪಕ್ಷಗಳ ಪ್ರಶ್ನೆ ಮಾಡಿ, ಕಾಂಗ್ರೆಸ್ ಸೇರಿದಂತೆ 19 ವಿರೋಧ ಪಕ್ಷಗಳು ನೂತನ ಸಂಸತ್ ಭವನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧರಿಸಿವೆ.
ರಾಷ್ಟ್ರಪತಿಗಳನ್ನು ಸಂಸತ್ತಿನ ಉದ್ಘಾಟನೆಗೆ ಅಥವಾ ಸಮಾರಂಭಕ್ಕೆ ಆಹ್ವಾನಿಸದಿರುವುದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡಿದ ಅವಮಾನ. ಸಂಸತ್ತು ಅಹಂಕಾರದ ಇಟ್ಟಿಗೆಗಳಿಂದ ಮಾಡಲ್ಪಟ್ಟಿಲ್ಲ, ಆದರೆ ಸಾಂವಿಧಾನಿಕ ಮೌಲ್ಯಗಳಿಂದ ಕೂಡಿದೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ರಾಷ್ಟ್ರಪತಿಗಳು ಸಂಸತ್ನ ಅವಿಭಾಜ್ಯ ಅಂಗ. ಹೀಗಾಗಿ, ನೂತನ ಸಂಸತ್ ಭವನವನ್ನು ರಾಷ್ಟ್ರಪತಿಗಳು ಉದ್ಘಾಟನೆ ಮಾಡಬೇಕು, ಪ್ರಧಾನ ಮಂತ್ರಿ ಅಲ್ಲ ಅನ್ನೋದು ವಿರೋಧ ಪಕ್ಷಗಳ ನಿಲುವು.
ಯಾವ ಪಕ್ಷಗಳಿಂದ ಬಹಿಷ್ಕಾರ
ಕಾಂಗ್ರೆಸ್, ಡಿಎಂಕೆ, ಟಿಎಂಸಿ, ಎಎಪಿ, ಶಿವಸೇನಾ (ಯುಬಿಟಿ), ಸಮಾಜವಾದಿ ಪಕ್ಷ (ಎಸ್ಪಿ), ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ), ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಕೇರಳ ಕಾಂಗ್ರೆಸ್ (ಮಣಿ), ವಿಡುತ್ತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ರಾಷ್ಟ್ರೀಯ ಲೋಕ ದಳ (ಆರ್ಜೆಡಿ), ಜೆಡಿಯು, ಎನ್ಸಿಪಿ, ಸಿಪಿಎಂ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ನ್ಯಾಷನಲ್ ಕಾನ್ಫರೆನ್ಸ್, ರೆವೊಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ (ಆರ್ಎಸ್ಪಿ) ಮತ್ತು ಎಂಡಿಎಂಕೆ ಕಾರ್ಯಕ್ರಮ ಬಹಿಷ್ಕರಿಸಿದ 19 ವಿಪಕ್ಷಗಳಾಗಿವೆ.
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…