ನೂತನ ಸಂಸತ್ ಭವನ ಕಟ್ಟಡವನ್ನು ಉದ್ಘಾಟನೆ ಮಾಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆ ಇದೇ ಭಾನುವಾರ ಮೇ.28 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನ ಕಟ್ಟಡವನ್ನು ಉದ್ಘಾಟನೆ ಮಾಡಲಿದ್ದಾರೆ.
ನೂತನ ಸಂಸತ್ ಭವನ ಕಟ್ಟಡವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಏಕೆ ಉದ್ಘಾಟನೆ ಮಾಡಬೇಕು ಅನ್ನೋದು ವಿಪಕ್ಷಗಳ ಪ್ರಶ್ನೆ ಮಾಡಿ, ಕಾಂಗ್ರೆಸ್ ಸೇರಿದಂತೆ 19 ವಿರೋಧ ಪಕ್ಷಗಳು ನೂತನ ಸಂಸತ್ ಭವನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧರಿಸಿವೆ.
ರಾಷ್ಟ್ರಪತಿಗಳನ್ನು ಸಂಸತ್ತಿನ ಉದ್ಘಾಟನೆಗೆ ಅಥವಾ ಸಮಾರಂಭಕ್ಕೆ ಆಹ್ವಾನಿಸದಿರುವುದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡಿದ ಅವಮಾನ. ಸಂಸತ್ತು ಅಹಂಕಾರದ ಇಟ್ಟಿಗೆಗಳಿಂದ ಮಾಡಲ್ಪಟ್ಟಿಲ್ಲ, ಆದರೆ ಸಾಂವಿಧಾನಿಕ ಮೌಲ್ಯಗಳಿಂದ ಕೂಡಿದೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ರಾಷ್ಟ್ರಪತಿಗಳು ಸಂಸತ್ನ ಅವಿಭಾಜ್ಯ ಅಂಗ. ಹೀಗಾಗಿ, ನೂತನ ಸಂಸತ್ ಭವನವನ್ನು ರಾಷ್ಟ್ರಪತಿಗಳು ಉದ್ಘಾಟನೆ ಮಾಡಬೇಕು, ಪ್ರಧಾನ ಮಂತ್ರಿ ಅಲ್ಲ ಅನ್ನೋದು ವಿರೋಧ ಪಕ್ಷಗಳ ನಿಲುವು.
ಯಾವ ಪಕ್ಷಗಳಿಂದ ಬಹಿಷ್ಕಾರ
ಕಾಂಗ್ರೆಸ್, ಡಿಎಂಕೆ, ಟಿಎಂಸಿ, ಎಎಪಿ, ಶಿವಸೇನಾ (ಯುಬಿಟಿ), ಸಮಾಜವಾದಿ ಪಕ್ಷ (ಎಸ್ಪಿ), ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ), ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಕೇರಳ ಕಾಂಗ್ರೆಸ್ (ಮಣಿ), ವಿಡುತ್ತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ರಾಷ್ಟ್ರೀಯ ಲೋಕ ದಳ (ಆರ್ಜೆಡಿ), ಜೆಡಿಯು, ಎನ್ಸಿಪಿ, ಸಿಪಿಎಂ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ನ್ಯಾಷನಲ್ ಕಾನ್ಫರೆನ್ಸ್, ರೆವೊಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ (ಆರ್ಎಸ್ಪಿ) ಮತ್ತು ಎಂಡಿಎಂಕೆ ಕಾರ್ಯಕ್ರಮ ಬಹಿಷ್ಕರಿಸಿದ 19 ವಿಪಕ್ಷಗಳಾಗಿವೆ.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…