ನೂತನ ಸಂಸತ್ ಭವನ ಕಟ್ಟಡವನ್ನು ಉದ್ಘಾಟನೆ ಮಾಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆ ಇದೇ ಭಾನುವಾರ ಮೇ.28 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನ ಕಟ್ಟಡವನ್ನು ಉದ್ಘಾಟನೆ ಮಾಡಲಿದ್ದಾರೆ.
ನೂತನ ಸಂಸತ್ ಭವನ ಕಟ್ಟಡವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಏಕೆ ಉದ್ಘಾಟನೆ ಮಾಡಬೇಕು ಅನ್ನೋದು ವಿಪಕ್ಷಗಳ ಪ್ರಶ್ನೆ ಮಾಡಿ, ಕಾಂಗ್ರೆಸ್ ಸೇರಿದಂತೆ 19 ವಿರೋಧ ಪಕ್ಷಗಳು ನೂತನ ಸಂಸತ್ ಭವನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧರಿಸಿವೆ.
ರಾಷ್ಟ್ರಪತಿಗಳನ್ನು ಸಂಸತ್ತಿನ ಉದ್ಘಾಟನೆಗೆ ಅಥವಾ ಸಮಾರಂಭಕ್ಕೆ ಆಹ್ವಾನಿಸದಿರುವುದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡಿದ ಅವಮಾನ. ಸಂಸತ್ತು ಅಹಂಕಾರದ ಇಟ್ಟಿಗೆಗಳಿಂದ ಮಾಡಲ್ಪಟ್ಟಿಲ್ಲ, ಆದರೆ ಸಾಂವಿಧಾನಿಕ ಮೌಲ್ಯಗಳಿಂದ ಕೂಡಿದೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ರಾಷ್ಟ್ರಪತಿಗಳು ಸಂಸತ್ನ ಅವಿಭಾಜ್ಯ ಅಂಗ. ಹೀಗಾಗಿ, ನೂತನ ಸಂಸತ್ ಭವನವನ್ನು ರಾಷ್ಟ್ರಪತಿಗಳು ಉದ್ಘಾಟನೆ ಮಾಡಬೇಕು, ಪ್ರಧಾನ ಮಂತ್ರಿ ಅಲ್ಲ ಅನ್ನೋದು ವಿರೋಧ ಪಕ್ಷಗಳ ನಿಲುವು.
ಯಾವ ಪಕ್ಷಗಳಿಂದ ಬಹಿಷ್ಕಾರ
ಕಾಂಗ್ರೆಸ್, ಡಿಎಂಕೆ, ಟಿಎಂಸಿ, ಎಎಪಿ, ಶಿವಸೇನಾ (ಯುಬಿಟಿ), ಸಮಾಜವಾದಿ ಪಕ್ಷ (ಎಸ್ಪಿ), ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ), ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಕೇರಳ ಕಾಂಗ್ರೆಸ್ (ಮಣಿ), ವಿಡುತ್ತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ರಾಷ್ಟ್ರೀಯ ಲೋಕ ದಳ (ಆರ್ಜೆಡಿ), ಜೆಡಿಯು, ಎನ್ಸಿಪಿ, ಸಿಪಿಎಂ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ನ್ಯಾಷನಲ್ ಕಾನ್ಫರೆನ್ಸ್, ರೆವೊಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ (ಆರ್ಎಸ್ಪಿ) ಮತ್ತು ಎಂಡಿಎಂಕೆ ಕಾರ್ಯಕ್ರಮ ಬಹಿಷ್ಕರಿಸಿದ 19 ವಿಪಕ್ಷಗಳಾಗಿವೆ.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…