ನೂತನ ಸಂಸತ್ ಭವನ ಕಟ್ಟಡವನ್ನು ಉದ್ಘಾಟನೆ ಮಾಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆ ಇದೇ ಭಾನುವಾರ ಮೇ.28 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನ ಕಟ್ಟಡವನ್ನು ಉದ್ಘಾಟನೆ ಮಾಡಲಿದ್ದಾರೆ.
ನೂತನ ಸಂಸತ್ ಭವನ ಕಟ್ಟಡವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಏಕೆ ಉದ್ಘಾಟನೆ ಮಾಡಬೇಕು ಅನ್ನೋದು ವಿಪಕ್ಷಗಳ ಪ್ರಶ್ನೆ ಮಾಡಿ, ಕಾಂಗ್ರೆಸ್ ಸೇರಿದಂತೆ 19 ವಿರೋಧ ಪಕ್ಷಗಳು ನೂತನ ಸಂಸತ್ ಭವನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧರಿಸಿವೆ.
ರಾಷ್ಟ್ರಪತಿಗಳನ್ನು ಸಂಸತ್ತಿನ ಉದ್ಘಾಟನೆಗೆ ಅಥವಾ ಸಮಾರಂಭಕ್ಕೆ ಆಹ್ವಾನಿಸದಿರುವುದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡಿದ ಅವಮಾನ. ಸಂಸತ್ತು ಅಹಂಕಾರದ ಇಟ್ಟಿಗೆಗಳಿಂದ ಮಾಡಲ್ಪಟ್ಟಿಲ್ಲ, ಆದರೆ ಸಾಂವಿಧಾನಿಕ ಮೌಲ್ಯಗಳಿಂದ ಕೂಡಿದೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ರಾಷ್ಟ್ರಪತಿಗಳು ಸಂಸತ್ನ ಅವಿಭಾಜ್ಯ ಅಂಗ. ಹೀಗಾಗಿ, ನೂತನ ಸಂಸತ್ ಭವನವನ್ನು ರಾಷ್ಟ್ರಪತಿಗಳು ಉದ್ಘಾಟನೆ ಮಾಡಬೇಕು, ಪ್ರಧಾನ ಮಂತ್ರಿ ಅಲ್ಲ ಅನ್ನೋದು ವಿರೋಧ ಪಕ್ಷಗಳ ನಿಲುವು.
ಯಾವ ಪಕ್ಷಗಳಿಂದ ಬಹಿಷ್ಕಾರ
ಕಾಂಗ್ರೆಸ್, ಡಿಎಂಕೆ, ಟಿಎಂಸಿ, ಎಎಪಿ, ಶಿವಸೇನಾ (ಯುಬಿಟಿ), ಸಮಾಜವಾದಿ ಪಕ್ಷ (ಎಸ್ಪಿ), ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ), ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಕೇರಳ ಕಾಂಗ್ರೆಸ್ (ಮಣಿ), ವಿಡುತ್ತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ರಾಷ್ಟ್ರೀಯ ಲೋಕ ದಳ (ಆರ್ಜೆಡಿ), ಜೆಡಿಯು, ಎನ್ಸಿಪಿ, ಸಿಪಿಎಂ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ನ್ಯಾಷನಲ್ ಕಾನ್ಫರೆನ್ಸ್, ರೆವೊಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ (ಆರ್ಎಸ್ಪಿ) ಮತ್ತು ಎಂಡಿಎಂಕೆ ಕಾರ್ಯಕ್ರಮ ಬಹಿಷ್ಕರಿಸಿದ 19 ವಿಪಕ್ಷಗಳಾಗಿವೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…