ಮೇ.28ರಂದು ನೂತನ ಸಂಸತ್ ಭವನ ಲೋಕಾರ್ಪಣೆ: ಸಮಾರಂಭಕ್ಕೆ ರಾಷ್ಟ್ರಪತಿಗೆ ಇಲ್ಲ ಆಹ್ವಾನ: ಸಮಾರಂಭವನ್ನು ಬಹಿಷ್ಕಾರಿಸಿದ ಕಾಂಗ್ರೆಸ್ ಸೇರಿ 19 ವಿರೋಧ ಪಕ್ಷಗಳು: ಸಂಸತ್ತು ಅಹಂಕಾರದ ಇಟ್ಟಿಗೆಗಳಿಂದ ಮಾಡಲ್ಪಟ್ಟಿಲ್ಲ: ಸಾಂವಿಧಾನಿಕ ಮೌಲ್ಯಗಳಿಂದ ಕೂಡಿದೆ- ರಾಹುಲ್ ಗಾಂಧಿ

ನೂತನ ಸಂಸತ್ ಭವನ ಕಟ್ಟಡವನ್ನು ಉದ್ಘಾಟನೆ ಮಾಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆ ಇದೇ ಭಾನುವಾರ ಮೇ.28 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನ ಕಟ್ಟಡವನ್ನು ಉದ್ಘಾಟನೆ ಮಾಡಲಿದ್ದಾರೆ.

ನೂತನ ಸಂಸತ್ ಭವನ ಕಟ್ಟಡವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಏಕೆ ಉದ್ಘಾಟನೆ ಮಾಡಬೇಕು ಅನ್ನೋದು ವಿಪಕ್ಷಗಳ ಪ್ರಶ್ನೆ ಮಾಡಿ, ಕಾಂಗ್ರೆಸ್ ಸೇರಿದಂತೆ 19 ವಿರೋಧ ಪಕ್ಷಗಳು ನೂತನ ಸಂಸತ್ ಭವನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧರಿಸಿವೆ.

ನೂತನ ಸಂಸತ್ ಭವನ ಕಟ್ಟಡ ಉದ್ಘಾಟನೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಮಾಡಿಸದೇ ಇರೋದು ಹಾಗೂ ರಾಷ್ಟ್ರಪತಿಗಳಿಗೆ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡದೇ ಇರೋದು ಈ ದೇಶದ ಅತಿ ದೊಡ್ಡ ಸಾಂವಿಧಾನಿಕ ಹುದ್ದೆಗೆ ಮಾಡಿದ ಅವಮಾನ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ರಾಷ್ಟ್ರಪತಿಗಳನ್ನು ಸಂಸತ್ತಿನ ಉದ್ಘಾಟನೆಗೆ ಅಥವಾ ಸಮಾರಂಭಕ್ಕೆ ಆಹ್ವಾನಿಸದಿರುವುದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡಿದ ಅವಮಾನ. ಸಂಸತ್ತು ಅಹಂಕಾರದ ಇಟ್ಟಿಗೆಗಳಿಂದ ಮಾಡಲ್ಪಟ್ಟಿಲ್ಲ, ಆದರೆ ಸಾಂವಿಧಾನಿಕ ಮೌಲ್ಯಗಳಿಂದ ಕೂಡಿದೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ರಾಷ್ಟ್ರಪತಿಗಳು ಸಂಸತ್‌ನ ಅವಿಭಾಜ್ಯ ಅಂಗ. ಹೀಗಾಗಿ, ನೂತನ ಸಂಸತ್ ಭವನವನ್ನು ರಾಷ್ಟ್ರಪತಿಗಳು ಉದ್ಘಾಟನೆ ಮಾಡಬೇಕು, ಪ್ರಧಾನ ಮಂತ್ರಿ ಅಲ್ಲ ಅನ್ನೋದು ವಿರೋಧ ಪಕ್ಷಗಳ ನಿಲುವು.

ಯಾವ ಪಕ್ಷಗಳಿಂದ ಬಹಿಷ್ಕಾರ

ಕಾಂಗ್ರೆಸ್, ಡಿಎಂಕೆ, ಟಿಎಂಸಿ, ಎಎಪಿ, ಶಿವಸೇನಾ (ಯುಬಿಟಿ), ಸಮಾಜವಾದಿ ಪಕ್ಷ (ಎಸ್‌ಪಿ), ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ), ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಕೇರಳ ಕಾಂಗ್ರೆಸ್ (ಮಣಿ), ವಿಡುತ್ತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ರಾಷ್ಟ್ರೀಯ ಲೋಕ ದಳ (ಆರ್‌ಜೆಡಿ), ಜೆಡಿಯು, ಎನ್‌ಸಿಪಿ, ಸಿಪಿಎಂ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ನ್ಯಾಷನಲ್ ಕಾನ್ಫರೆನ್ಸ್, ರೆವೊಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ (ಆರ್‌ಎಸ್‌ಪಿ) ಮತ್ತು ಎಂಡಿಎಂಕೆ ಕಾರ್ಯಕ್ರಮ ಬಹಿಷ್ಕರಿಸಿದ 19 ವಿಪಕ್ಷಗಳಾಗಿವೆ.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

8 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

10 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

10 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

11 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

15 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

16 hours ago