ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಜನ ಸಾಮಾನ್ಯರ ಅನುಕೂಲಕ್ಕಾಗಿ “ಮಾಂಗಲ್ಯ ಭಾಗ್ಯ” ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಮೇ.7ರಂದು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಆಯೋಜನೆ ಮಾಡಲಾಗಿದೆ.
ಈ ಹಿನ್ನೆಲೆ ನಿಗದಿತ ಅವಧಿಯಲ್ಲಿ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ. ಅರ್ಹವಿರುವ ಒಟ್ಟು 67 ಜೋಡಿಗಳ ಪಟ್ಟಿಯನ್ನು ಅಂತಿಮಗೊಳಿಸಿ, ಪ್ರಕಟಿಸಲಾಗಿದೆ.
ವಧು-ವರರ ಪಟ್ಟಿಗೆ ಆಕ್ಷೇಪಣೆ ಇದ್ದಲ್ಲಿ ದೇವಾಲಯದ ಆಡಳಿತ ಮಂಡಳಿಯನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಕೊಳ್ಳಬೇಕಾಗಿದೆ ಎಂದು ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ತಿಳಿಸಿದೆ.
ಮಾಂಗಲ್ಯ ಭಾಗ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವರನಿಗೆ 5 ಸಾವಿರ ರೂ. ಹಾಗೂ ವಧುವಿಗೆ 10ಸಾವಿರ ರೂ. ಜೊತೆಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು (ರೂ. 48,000/- ಮೌಲ್ಯದ್ದು) ಹೀಗೆ ಒಟ್ಟು 63 ಸಾವಿರ ರೂ.ಗಳನ್ನು ಅಭಿವೃದ್ಧಿ ಪ್ರಾಧಿಕಾರ ನಿಧಿಯಿಂದ ಭರಿಸಲಾಗುತ್ತದೆ.
ಸಾಮೂಹಿಕ ಸರಳ ವಿವಾಹಕ್ಕೆ ಆಗಮಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಊಟೋಪಚಾರ ವ್ಯವಸ್ಥೆಯನ್ನು ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಮಾಡಲಾಗುತ್ತದೆ.
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…