ಮೇ.7ರಂದು ಘಾಟಿಯಲ್ಲಿ “ಮಾಂಗಲ್ಯ ಭಾಗ್ಯ” ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮ: 67 ಜೋಡಿಗಳ ಪಟ್ಟಿ ಅಂತಿಮಗೊಳಿಸಿ, ಪ್ರಕಟ

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಜನ ಸಾಮಾನ್ಯರ ಅನುಕೂಲಕ್ಕಾಗಿ “ಮಾಂಗಲ್ಯ ಭಾಗ್ಯ” ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಮೇ.7ರಂದು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಆಯೋಜನೆ ಮಾಡಲಾಗಿದೆ.

ಈ ಹಿನ್ನೆಲೆ ನಿಗದಿತ ಅವಧಿಯಲ್ಲಿ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ. ಅರ್ಹವಿರುವ ಒಟ್ಟು 67 ಜೋಡಿಗಳ ಪಟ್ಟಿಯನ್ನು ಅಂತಿಮಗೊಳಿಸಿ, ಪ್ರಕಟಿಸಲಾಗಿದೆ.

ವಧು-ವರರ ಪಟ್ಟಿಗೆ ಆಕ್ಷೇಪಣೆ ಇದ್ದಲ್ಲಿ ದೇವಾಲಯದ ಆಡಳಿತ ಮಂಡಳಿಯನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಕೊಳ್ಳಬೇಕಾಗಿದೆ ಎಂದು ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ತಿಳಿಸಿದೆ.

ಮಾಂಗಲ್ಯ ಭಾಗ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವರನಿಗೆ 5 ಸಾವಿರ ರೂ. ಹಾಗೂ ವಧುವಿಗೆ 10ಸಾವಿರ ರೂ. ಜೊತೆಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು (ರೂ. 48,000/- ಮೌಲ್ಯದ್ದು) ಹೀಗೆ ಒಟ್ಟು 63 ಸಾವಿರ ರೂ.ಗಳನ್ನು ಅಭಿವೃದ್ಧಿ ಪ್ರಾಧಿಕಾರ ನಿಧಿಯಿಂದ ಭರಿಸಲಾಗುತ್ತದೆ.

ಸಾಮೂಹಿಕ ಸರಳ ವಿವಾಹಕ್ಕೆ ಆಗಮಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಊಟೋಪಚಾರ ವ್ಯವಸ್ಥೆಯನ್ನು ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಮಾಡಲಾಗುತ್ತದೆ.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

5 days ago