ಮೇ.7ರಂದು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ “ಮಾಂಗಲ್ಯ ಭಾಗ್ಯ” ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮ

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಜನ ಸಾಮಾನ್ಯರ ಅನುಕೂಲಕ್ಕಾಗಿ “ಮಾಂಗಲ್ಯ ಭಾಗ್ಯ” ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಮೇ.7ರಂದು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಆಯೋಜನೆ ಮಾಡಲಾಗಿದೆ.

ಮಾಂಗಲ್ಯ ಭಾಗ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವರನಿಗೆ 5 ಸಾವಿರ ರೂ. ಹಾಗೂ ವಧುವಿಗೆ 10ಸಾವಿರ ರೂ. ಜೊತೆಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು (ರೂ. 48,000/- ಮೌಲ್ಯದ್ದು) ಹೀಗೆ ಒಟ್ಟು 63 ಸಾವಿರ ರೂ.ಗಳನ್ನು ಅಭಿವೃದ್ಧಿ ಪ್ರಾಧಿಕಾರ ನಿಧಿಯಿಂದ ಭರಿಸಲಾಗುತ್ತದೆ.

ಸಾಮೂಹಿಕ ಸರಳ ವಿವಾಹಕ್ಕೆ ಆಗಮಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಊಟೋಪಚಾರ ವ್ಯವಸ್ಥೆಯನ್ನು ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಮಾಡಲಾಗುತ್ತದೆ.

ಮೇ.7ರಂದು ನಡೆಯಲಿರುವ ಮಾಂಗಲ್ಯ ಭಾಗ್ಯ ಕಾರ್ಯಕ್ರಮದಲ್ಲಿ ಭಾಗವಹಿಸುವ ವಧು-ವರರು ಅರ್ಜಿಯನ್ನು ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳ ಕಚೇರಿಯಲ್ಲಿ ಪಡೆದು ನಿಗದಿತ ದಿನಾಂಕದೊಳಗೆ ಅಗತ್ಯ ಮಾಹಿತಿ ಹಾಗೂ ದಾಖಲೆಗಳನ್ನು ಸಲ್ಲಿಸಿ ನೋಂದಾಯಿಸಿಕೊಳ್ಳಬಹುದಾಗಿದೆ.

ಪ್ರಮುಖ ದಿನಾಂಕಗಳು

  • ಮಾರ್ಚ್ 31ಕ್ಕೆ ವಧು-ವರರು ನೋಂದಾಯಿಸಿಕೊಳ್ಳಲು ಕಡೆಯ ದಿನವಾಗಿರುತ್ತದೆ.
  • ಏಪ್ರಿಲ್ 10ರಂದು ನೋಂದಾಯಿಸಿಕೊಂಡಿರುವ ವಧು-ವರರ ವಿವರಗಳನ್ನು ದೇವಾಲಯದಲ್ಲಿ ಪ್ರಕಟಿಸಲಾಗುತ್ತದೆ.
  • ಏಪ್ರಿಲ್ 20ರಂದು ವಧು-ವರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕಡೆಯ ದಿನವಾಗಿರುತ್ತದೆ.
  • ಏಪ್ರಿಲ್.25ರಂದು ಅಂತಿಮ ವಧು-ವರರ ಪಟ್ಟಿ ಪ್ರಕಟಿಸಲಾಗುತ್ತದೆ.
  • ಮೇ.7ರ ಬೆ. 11-00 ರಿಂದ 12-00 ರವರೆಗೆ ಕಟಕ ಲಗ್ನದಲ್ಲಿ ವಿವಾಹ ನಡೆಯುತ್ತದೆ.

ಅರ್ಜಿಯೊಂದಿಗೆ ಕಡ್ಡಾಯವಾಗಿ ಲಗತ್ತಿಸಬೇಕಾದ ದೃಢೀಕೃತ ದಾಖಲೆ ವಿವರ

  • ವಧು / ವರರ ಪಾಸ್ ಪೋರ್ಟ್ ಅಳತೆಯ ಫೋಟೋಗಳು 2+2
  • ವಧು / ವರರ ವಯಸ್ಸಿನ ಬಗ್ಗೆ ದಾಖಲೆಗಳ 4+4 ಪ್ರತಿಗಳು(ಜನನ ಪ್ರಮಾಣ ಪತ್ರ / ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಪ್ರತಿ)
  • ವಧು / ವದರ ವಾಸ ಸ್ಥಳದ ಬಗ್ಗೆ ಅಧಿಕೃತ ದಾಖಲೆಗಳ 4+4 ಪ್ರತಿಗಳು (ಪಡಿತರ ಚೀಟಿ ನಕಲು)
  • ಅವಿವಾಹಿತರೆನ್ನುವ ಬಗ್ಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷರು / ಪಿ.ಡಿ.ಒ. / ನಗರಸಭೆ / ಪುರಸಭೆ / ಮಾಹಾನಗರ ಪಾಲಿಕೆಯಿಂದ ಪತ್ರಗಳ(1+1 ಪ್ರತಿಗಳು)
  • ವಿವಾಹವಾಗುವ ವಧು / ವರರ ಚುನಾವಣಾ ಗುರುತಿನ ಚೀಟಿ / ಆಧಾರ್ ಕಾರ್ಡ್ (4+4 ನಕಲು ಪ್ರತಿಗಳು)
  • ವಿವಾಹವಾಗುವ ವಧು / ವರರ ಬ್ಯಾಂಕ್ ಖಾತೆಯ ಪಾಸ್ ಪುಸ್ತಕದ ನಕಲು ಪ್ರತಿಗಳು
  • ವಧು / ವರರ ತಂದೆ ತಾಯಿಯರು ನಿಧನರಾಗಿದ್ದಲ್ಲಿ ಮರಣ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಒದಗಿಸತಕ್ಕದ್ದು
  • ವಧು / ವರರ ತಂದೆ ತಾಯಿಯರ / ಪೋಷಕರ ಗುರುತಿನ ಚೀಟಿ ( ಚುನಾವಣಾ ಗುರುತಿನ ಚೀಟಿ / ಆಧಾರ್ ಕಾರ್ಡ್ ಹಾಗೂ ಸರ್ಕರ ನೀಡಿರುವ ಅಧಿಕೃತ ದಾಖಲೆಗಳು)
Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

2 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

18 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago