ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಜನ ಸಾಮಾನ್ಯರ ಅನುಕೂಲಕ್ಕಾಗಿ “ಮಾಂಗಲ್ಯ ಭಾಗ್ಯ” ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಮೇ.7ರಂದು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಆಯೋಜನೆ ಮಾಡಲಾಗಿದೆ.
ಮಾಂಗಲ್ಯ ಭಾಗ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವರನಿಗೆ 5 ಸಾವಿರ ರೂ. ಹಾಗೂ ವಧುವಿಗೆ 10ಸಾವಿರ ರೂ. ಜೊತೆಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು (ರೂ. 48,000/- ಮೌಲ್ಯದ್ದು) ಹೀಗೆ ಒಟ್ಟು 63 ಸಾವಿರ ರೂ.ಗಳನ್ನು ಅಭಿವೃದ್ಧಿ ಪ್ರಾಧಿಕಾರ ನಿಧಿಯಿಂದ ಭರಿಸಲಾಗುತ್ತದೆ.
ಸಾಮೂಹಿಕ ಸರಳ ವಿವಾಹಕ್ಕೆ ಆಗಮಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಊಟೋಪಚಾರ ವ್ಯವಸ್ಥೆಯನ್ನು ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಮಾಡಲಾಗುತ್ತದೆ.
ಮೇ.7ರಂದು ನಡೆಯಲಿರುವ ಮಾಂಗಲ್ಯ ಭಾಗ್ಯ ಕಾರ್ಯಕ್ರಮದಲ್ಲಿ ಭಾಗವಹಿಸುವ ವಧು-ವರರು ಅರ್ಜಿಯನ್ನು ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳ ಕಚೇರಿಯಲ್ಲಿ ಪಡೆದು ನಿಗದಿತ ದಿನಾಂಕದೊಳಗೆ ಅಗತ್ಯ ಮಾಹಿತಿ ಹಾಗೂ ದಾಖಲೆಗಳನ್ನು ಸಲ್ಲಿಸಿ ನೋಂದಾಯಿಸಿಕೊಳ್ಳಬಹುದಾಗಿದೆ.
ಪ್ರಮುಖ ದಿನಾಂಕಗಳು
ಅರ್ಜಿಯೊಂದಿಗೆ ಕಡ್ಡಾಯವಾಗಿ ಲಗತ್ತಿಸಬೇಕಾದ ದೃಢೀಕೃತ ದಾಖಲೆ ವಿವರ
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…