ಮೇ.7ರಂದು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ “ಮಾಂಗಲ್ಯ ಭಾಗ್ಯ” ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮ

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಜನ ಸಾಮಾನ್ಯರ ಅನುಕೂಲಕ್ಕಾಗಿ “ಮಾಂಗಲ್ಯ ಭಾಗ್ಯ” ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಮೇ.7ರಂದು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಆಯೋಜನೆ ಮಾಡಲಾಗಿದೆ.

ಮಾಂಗಲ್ಯ ಭಾಗ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವರನಿಗೆ 5 ಸಾವಿರ ರೂ. ಹಾಗೂ ವಧುವಿಗೆ 10ಸಾವಿರ ರೂ. ಜೊತೆಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು (ರೂ. 48,000/- ಮೌಲ್ಯದ್ದು) ಹೀಗೆ ಒಟ್ಟು 63 ಸಾವಿರ ರೂ.ಗಳನ್ನು ಅಭಿವೃದ್ಧಿ ಪ್ರಾಧಿಕಾರ ನಿಧಿಯಿಂದ ಭರಿಸಲಾಗುತ್ತದೆ.

ಸಾಮೂಹಿಕ ಸರಳ ವಿವಾಹಕ್ಕೆ ಆಗಮಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಊಟೋಪಚಾರ ವ್ಯವಸ್ಥೆಯನ್ನು ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಮಾಡಲಾಗುತ್ತದೆ.

ಮೇ.7ರಂದು ನಡೆಯಲಿರುವ ಮಾಂಗಲ್ಯ ಭಾಗ್ಯ ಕಾರ್ಯಕ್ರಮದಲ್ಲಿ ಭಾಗವಹಿಸುವ ವಧು-ವರರು ಅರ್ಜಿಯನ್ನು ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳ ಕಚೇರಿಯಲ್ಲಿ ಪಡೆದು ನಿಗದಿತ ದಿನಾಂಕದೊಳಗೆ ಅಗತ್ಯ ಮಾಹಿತಿ ಹಾಗೂ ದಾಖಲೆಗಳನ್ನು ಸಲ್ಲಿಸಿ ನೋಂದಾಯಿಸಿಕೊಳ್ಳಬಹುದಾಗಿದೆ.

ಪ್ರಮುಖ ದಿನಾಂಕಗಳು

  • ಮಾರ್ಚ್ 31ಕ್ಕೆ ವಧು-ವರರು ನೋಂದಾಯಿಸಿಕೊಳ್ಳಲು ಕಡೆಯ ದಿನವಾಗಿರುತ್ತದೆ.
  • ಏಪ್ರಿಲ್ 10ರಂದು ನೋಂದಾಯಿಸಿಕೊಂಡಿರುವ ವಧು-ವರರ ವಿವರಗಳನ್ನು ದೇವಾಲಯದಲ್ಲಿ ಪ್ರಕಟಿಸಲಾಗುತ್ತದೆ.
  • ಏಪ್ರಿಲ್ 20ರಂದು ವಧು-ವರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕಡೆಯ ದಿನವಾಗಿರುತ್ತದೆ.
  • ಏಪ್ರಿಲ್.25ರಂದು ಅಂತಿಮ ವಧು-ವರರ ಪಟ್ಟಿ ಪ್ರಕಟಿಸಲಾಗುತ್ತದೆ.
  • ಮೇ.7ರ ಬೆ. 11-00 ರಿಂದ 12-00 ರವರೆಗೆ ಕಟಕ ಲಗ್ನದಲ್ಲಿ ವಿವಾಹ ನಡೆಯುತ್ತದೆ.

ಅರ್ಜಿಯೊಂದಿಗೆ ಕಡ್ಡಾಯವಾಗಿ ಲಗತ್ತಿಸಬೇಕಾದ ದೃಢೀಕೃತ ದಾಖಲೆ ವಿವರ

  • ವಧು / ವರರ ಪಾಸ್ ಪೋರ್ಟ್ ಅಳತೆಯ ಫೋಟೋಗಳು 2+2
  • ವಧು / ವರರ ವಯಸ್ಸಿನ ಬಗ್ಗೆ ದಾಖಲೆಗಳ 4+4 ಪ್ರತಿಗಳು(ಜನನ ಪ್ರಮಾಣ ಪತ್ರ / ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಪ್ರತಿ)
  • ವಧು / ವದರ ವಾಸ ಸ್ಥಳದ ಬಗ್ಗೆ ಅಧಿಕೃತ ದಾಖಲೆಗಳ 4+4 ಪ್ರತಿಗಳು (ಪಡಿತರ ಚೀಟಿ ನಕಲು)
  • ಅವಿವಾಹಿತರೆನ್ನುವ ಬಗ್ಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷರು / ಪಿ.ಡಿ.ಒ. / ನಗರಸಭೆ / ಪುರಸಭೆ / ಮಾಹಾನಗರ ಪಾಲಿಕೆಯಿಂದ ಪತ್ರಗಳ(1+1 ಪ್ರತಿಗಳು)
  • ವಿವಾಹವಾಗುವ ವಧು / ವರರ ಚುನಾವಣಾ ಗುರುತಿನ ಚೀಟಿ / ಆಧಾರ್ ಕಾರ್ಡ್ (4+4 ನಕಲು ಪ್ರತಿಗಳು)
  • ವಿವಾಹವಾಗುವ ವಧು / ವರರ ಬ್ಯಾಂಕ್ ಖಾತೆಯ ಪಾಸ್ ಪುಸ್ತಕದ ನಕಲು ಪ್ರತಿಗಳು
  • ವಧು / ವರರ ತಂದೆ ತಾಯಿಯರು ನಿಧನರಾಗಿದ್ದಲ್ಲಿ ಮರಣ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಒದಗಿಸತಕ್ಕದ್ದು
  • ವಧು / ವರರ ತಂದೆ ತಾಯಿಯರ / ಪೋಷಕರ ಗುರುತಿನ ಚೀಟಿ ( ಚುನಾವಣಾ ಗುರುತಿನ ಚೀಟಿ / ಆಧಾರ್ ಕಾರ್ಡ್ ಹಾಗೂ ಸರ್ಕರ ನೀಡಿರುವ ಅಧಿಕೃತ ದಾಖಲೆಗಳು)
Ramesh Babu

Journalist

Recent Posts

ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…

3 hours ago

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

10 hours ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

13 hours ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

1 day ago

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

1 day ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

1 day ago