ಮೇ.7ರಂದು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ “ಮಾಂಗಲ್ಯ ಭಾಗ್ಯ” ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮ

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಜನ ಸಾಮಾನ್ಯರ ಅನುಕೂಲಕ್ಕಾಗಿ “ಮಾಂಗಲ್ಯ ಭಾಗ್ಯ” ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಮೇ.7ರಂದು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಆಯೋಜನೆ ಮಾಡಲಾಗಿದೆ.

ಮಾಂಗಲ್ಯ ಭಾಗ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವರನಿಗೆ 5 ಸಾವಿರ ರೂ. ಹಾಗೂ ವಧುವಿಗೆ 10ಸಾವಿರ ರೂ. ಜೊತೆಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು (ರೂ. 48,000/- ಮೌಲ್ಯದ್ದು) ಹೀಗೆ ಒಟ್ಟು 63 ಸಾವಿರ ರೂ.ಗಳನ್ನು ಅಭಿವೃದ್ಧಿ ಪ್ರಾಧಿಕಾರ ನಿಧಿಯಿಂದ ಭರಿಸಲಾಗುತ್ತದೆ.

ಸಾಮೂಹಿಕ ಸರಳ ವಿವಾಹಕ್ಕೆ ಆಗಮಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಊಟೋಪಚಾರ ವ್ಯವಸ್ಥೆಯನ್ನು ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಮಾಡಲಾಗುತ್ತದೆ.

ಮೇ.7ರಂದು ನಡೆಯಲಿರುವ ಮಾಂಗಲ್ಯ ಭಾಗ್ಯ ಕಾರ್ಯಕ್ರಮದಲ್ಲಿ ಭಾಗವಹಿಸುವ ವಧು-ವರರು ಅರ್ಜಿಯನ್ನು ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳ ಕಚೇರಿಯಲ್ಲಿ ಪಡೆದು ನಿಗದಿತ ದಿನಾಂಕದೊಳಗೆ ಅಗತ್ಯ ಮಾಹಿತಿ ಹಾಗೂ ದಾಖಲೆಗಳನ್ನು ಸಲ್ಲಿಸಿ ನೋಂದಾಯಿಸಿಕೊಳ್ಳಬಹುದಾಗಿದೆ.

ಪ್ರಮುಖ ದಿನಾಂಕಗಳು

  • ಮಾರ್ಚ್ 31ಕ್ಕೆ ವಧು-ವರರು ನೋಂದಾಯಿಸಿಕೊಳ್ಳಲು ಕಡೆಯ ದಿನವಾಗಿರುತ್ತದೆ.
  • ಏಪ್ರಿಲ್ 10ರಂದು ನೋಂದಾಯಿಸಿಕೊಂಡಿರುವ ವಧು-ವರರ ವಿವರಗಳನ್ನು ದೇವಾಲಯದಲ್ಲಿ ಪ್ರಕಟಿಸಲಾಗುತ್ತದೆ.
  • ಏಪ್ರಿಲ್ 20ರಂದು ವಧು-ವರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕಡೆಯ ದಿನವಾಗಿರುತ್ತದೆ.
  • ಏಪ್ರಿಲ್.25ರಂದು ಅಂತಿಮ ವಧು-ವರರ ಪಟ್ಟಿ ಪ್ರಕಟಿಸಲಾಗುತ್ತದೆ.
  • ಮೇ.7ರ ಬೆ. 11-00 ರಿಂದ 12-00 ರವರೆಗೆ ಕಟಕ ಲಗ್ನದಲ್ಲಿ ವಿವಾಹ ನಡೆಯುತ್ತದೆ.

ಅರ್ಜಿಯೊಂದಿಗೆ ಕಡ್ಡಾಯವಾಗಿ ಲಗತ್ತಿಸಬೇಕಾದ ದೃಢೀಕೃತ ದಾಖಲೆ ವಿವರ

  • ವಧು / ವರರ ಪಾಸ್ ಪೋರ್ಟ್ ಅಳತೆಯ ಫೋಟೋಗಳು 2+2
  • ವಧು / ವರರ ವಯಸ್ಸಿನ ಬಗ್ಗೆ ದಾಖಲೆಗಳ 4+4 ಪ್ರತಿಗಳು(ಜನನ ಪ್ರಮಾಣ ಪತ್ರ / ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಪ್ರತಿ)
  • ವಧು / ವದರ ವಾಸ ಸ್ಥಳದ ಬಗ್ಗೆ ಅಧಿಕೃತ ದಾಖಲೆಗಳ 4+4 ಪ್ರತಿಗಳು (ಪಡಿತರ ಚೀಟಿ ನಕಲು)
  • ಅವಿವಾಹಿತರೆನ್ನುವ ಬಗ್ಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷರು / ಪಿ.ಡಿ.ಒ. / ನಗರಸಭೆ / ಪುರಸಭೆ / ಮಾಹಾನಗರ ಪಾಲಿಕೆಯಿಂದ ಪತ್ರಗಳ(1+1 ಪ್ರತಿಗಳು)
  • ವಿವಾಹವಾಗುವ ವಧು / ವರರ ಚುನಾವಣಾ ಗುರುತಿನ ಚೀಟಿ / ಆಧಾರ್ ಕಾರ್ಡ್ (4+4 ನಕಲು ಪ್ರತಿಗಳು)
  • ವಿವಾಹವಾಗುವ ವಧು / ವರರ ಬ್ಯಾಂಕ್ ಖಾತೆಯ ಪಾಸ್ ಪುಸ್ತಕದ ನಕಲು ಪ್ರತಿಗಳು
  • ವಧು / ವರರ ತಂದೆ ತಾಯಿಯರು ನಿಧನರಾಗಿದ್ದಲ್ಲಿ ಮರಣ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಒದಗಿಸತಕ್ಕದ್ದು
  • ವಧು / ವರರ ತಂದೆ ತಾಯಿಯರ / ಪೋಷಕರ ಗುರುತಿನ ಚೀಟಿ ( ಚುನಾವಣಾ ಗುರುತಿನ ಚೀಟಿ / ಆಧಾರ್ ಕಾರ್ಡ್ ಹಾಗೂ ಸರ್ಕರ ನೀಡಿರುವ ಅಧಿಕೃತ ದಾಖಲೆಗಳು)
Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

5 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

10 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago