ಮೇ.8ರಂದು ಜೆಡಿಎಸ್ ರಜತ ಮಹೋತ್ಸವ: ನಿಖಿಲ್ ಕುಮಾರಸ್ವಾಮಿ ಭಾಗಿ- ಜೆಡಿಎಸ್ ತಾಲೂಕು ಅಧ್ಯಕ್ಷ ಹರೀಶ್ ಗೌಡ

ದೊಡ್ಡಬಳ್ಳಾಪುರ: ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕವಾಗಿ ಅಭಿವೃದ್ಧಿ ಹೊಂದಲು ಜೆಡಿಎಸ್ ಪಕ್ಷ ಸ್ಥಾಪನೆಯಾಗಿದೆ. ಮೇ.8ಕ್ಕೆ 25 ವರ್ಷಗಳನ್ನು ಪೂರೈಸಲಿದೆ. ಈ ನಿಟ್ಟಿನಲ್ಲಿ ರಾಜ್ಯ ವರಿಷ್ಠರ ಆದೇಶದ ಮೇರೆಗೆ ಜಿಲ್ಲಾ ಹಾಗೂ ತಾಲ್ಲೂಕು ಪ್ರಮುಖರ ಸಹಕಾರದೊಂದಿಗೆ ಮೇ.8ರಂದು ತಾಲೂಕಿನ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ರಜತ ಮಹೋತ್ಸವ(ಜೆಡಿಎಸ್ ಪಕ್ಷದ ಬೆಳ್ಳಿಹಬ್ಬ )ವನ್ನು ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ರಾಜ್ಯ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವು ರಾಜ್ಯ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಹರೀಶ್ ಗೌಡ ತಿಳಿಸಿದರು.

ನಗರದ ಕನ್ನಡ ಜಾಗೃತಿ ಭವನದಲ್ಲಿ ನಡೆದ ಸುದ್ದಿಗೊಷ್ಟಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಕಳೆದ 25 ವರ್ಷಗಳಿಂದ ನಿರಂತರ ಜನಸಂಪರ್ಕದಲ್ಲಿದೆ. ತನ್ನದೇ ಆದ ಶಕ್ತಿ ಹೊಂದಿದೆ, ಕಾರ್ಯಕರ್ತರ ಬೆಂಬಲದಿಂದ ಸಾಲು ಸಾಲು ಚುನಾವಣೆ ಎದುರಿಸಿದೆ. ಸೋಲು- ಗೆಲುವು ಎರಡನ್ನು ಕಂಡಿದ್ದೇವೆ. ಜೆಡಿಎಸ್ ಪಕ್ಷವನ್ನು ರಾಷ್ಟ್ರಿಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಸದಾ ವಿರೋಧಿಸಿಕೊಂಡು ಬಂದಿವೆ. ಪಕ್ಷದ ಸೋಲು ಕಾರ್ಯಕರ್ತರಲ್ಲಿ ಎಂದಿಗೂ ಉತ್ಸಹ ಕಡಿಮೆ ಮಾಡಿಲ್ಲ. ಜಿಲ್ಲೆ ಹಾಗೂ ತಾಲ್ಲೂಕಿನ ಕಾರ್ಯಕರ್ತರನ್ನು ಒಟ್ಟುಗೂಡಿಸಲು ಮೇ.8ರಂದು ರಜತ ಮಹೋತ್ಸವ(ಬೆಳ್ಳಿ ಹಬ್ಬ) ಕಾರ್ಯಕ್ರಮವನ್ನು  ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಮಂಜುನಾಥ್ ಮಾತನಾಡಿ, ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸಲಿರುವ ರಾಜ್ಯ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿಯನ್ನು ಬೃಹತ್ ಬೈಕ್ ರ್ಯಾಲಿ ಮೂಲಕ ಸ್ವಾಗತಿಸಲಿದ್ದೇವೆ. ಕಾರ್ಯಕ್ರಮವು ವಿಶೇಷವಾಗಿದ್ದು, ರಾಜ್ಯ ಪ್ರಮುಖರು ನೇರವಾಗಿ ಕಾರ್ಯಕರ್ತರ ಜೊತೆ ಸಂವಾದ ನಡೆಸಲಿದ್ದಾರೆ ಎಂದರು.

ನಗರಸಭಾ ಸದಸ್ಯ ತಾ ನಾ ಪ್ರಭುದೇವ್ ಮಾತನಾಡಿ, ಮೇ.8ರಂದು ತಾಲ್ಲೂಕಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಬೃಹತ್ ಕಾರ್ಯಕ್ರಮಕ್ಕೆ ಇಂದು ಪೂಜೆ ಮಾಡುವ ಮೂಲಕ ವೇದಿಕೆಗೆ ಚಾಲನೆ ನೀಡಿದ್ದೇವೆ. ಪಂಚ ರಾಜ್ಯಗಳ ಫಲಿತಾಂಶ ನಮಗೆ ಸ್ಫೂರ್ತಿಯಾಗಿದ್ದು, ಮುಂದೆ ಕರ್ನಾಟಕದಲ್ಲೂ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಅಧಿಕಾರಕ್ಕೆ ಬರುವ ನಿರೀಕ್ಷೆ ಇದೆ. ನಮ್ಮದು ಕಾರ್ಯಕರ್ತರ ಪಕ್ಷವಾಗಿದ್ದು, ಈ ಬಾರಿ ನಿಖಿಲ್ ಕುಮಾರಸ್ವಾಮಿಯವರಿಗೆ ಶಕ್ತಿ ತುಂಬುವ ಕೆಲಸ ರಾಜ್ಯದ ಜೆಡಿಎಸ್ ಸೇನಾನಿಗಳು ಮಾಡಲಿದ್ದಾರೆ. ತಾಲ್ಲೂಕಿನ ಜೆಡಿಎಸ್ ಕಾರ್ಯಕರ್ತರಲ್ಲಿ ನವ ಚೈತನ್ಯ ಮೂಡಿಸಲು ನಿಖಿಲ್ ಕುಮಾರಸ್ವಾಮಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಈ ವೇಳೆ ವಕೀಲರಾದ ಡಾ. ವಿಜಯ್ ಕುಮಾರ್, ಅಂಜನ್ ಗೌಡ, ನಗರಸಭಾ ಸದಸ್ಯ ತಾ ನಾ ಪ್ರಭುದೇವ್, ತಾಳಗವಾರ ನಾಗರಾಜ್, ಕೋನಘಟ್ಟ ಆನಂದ್, ಸತ್ಯಣ್ಣ, ಅಶ್ವಥ್, ಕೆಂಪರಾಜು, ನಾಗರಾಜ್ ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 hour ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

14 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

18 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

18 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

21 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago