ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಆರೋಪ: ಗೌರಿಬಿದನೂರಿನಲ್ಲಿ ವ್ಯಕ್ತಿ ನೇಣಿಗೆ ಶರಣು

ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದಿಂದ ರಾಜ್ಯದಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಸದ್ಯ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಪೈನಾನ್ಸ್ ಕಿರುಕುಳಕ್ಕೆ ಮೊದಲ ಆತ್ಮಹತ್ಯೆ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಮೃತ ವ್ಯಕ್ತಿಯನ್ನು ತಾಲೂಕಿನ ಎಚ್.ನಾಗಸಂದ್ರ ಗ್ರಾಮದ ನಿವಾಸಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಎನ್.ಆರ್ ನರಸಿಂಹಯ್ಯ ಎಂದು ತಿಳಿದುಬಂದಿದೆ.

ಇನ್ನು ಮೃತ ವ್ಯಕ್ತಿ ಕೆಲವು ಫೈನಾನ್ಸ್ ಕಂಪನಿಗಳಲ್ಲಿ ಹಣ ಪಡೆದುಕೊಂಡಿದ್ದರು. ಕಂತುಗಳ ರೂಪದಲ್ಲಿ ಹಣ ಕಟ್ಟುತ್ತಿದ್ದರೂ ಮನೆ ಬಾಗಿಲಿಗೆ ಫೈನಾನ್ಸ್ ನವರು ಬಂದು ಹಣವನ್ನು ಕಟ್ಟುವಂತೆ ಪೀಡಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಇನ್ನೂ ಮೃತ ನರಸಿಂಹಯ್ಯ ವೃತ್ತಿಯಲ್ಲಿ ಆಟೋ ಚಾಲಕನಾಗಿ ಸಂಸಾರ ನಡೆಸುತ್ತಿದ್ದನು, ಫೈನಾನ್ಸ್ ಕಿರುಕುಳಕ್ಕೆ ಆಟೋ ಸಹ ಎರಡು ಮೂರು ಬಾರಿ ಒತ್ತೆ ಇಟ್ಟು ಹಣವನ್ನು ಕಟ್ಟಿದ್ದರು ಎನ್ನಲಾಗಿದೆ. ಆದರೆ, ಕೆಲ ಫೈನಾನ್ಸ್ ಗಳಿಗೆ ಹಣ ಕಟ್ಟಲು ಹಣ ಇಲ್ಲದ ಕಾರಣ, ಮನೆಯಲ್ಲಿ ಸಾಲ ಪಡೆದುಕೊಂಡು ಬರುತ್ತೇನೆ ಎಂದು ತಿಳಿಸಿ ಇಂದು ಬೆಳಗ್ಗೆ 6:00 ಸಮಯದಲ್ಲಿ ಮನೆಯಿಂದ ಹೊರಬಂದಿದ್ದಾರೆ.

ಇನ್ನು ಎಷ್ಟೊತ್ತಾದರೂ ಮನೆಗೆ ಪತಿ ಬಾರದ ಹಿನ್ನೆಲೆ ಗ್ರಾಮದ ಸುತ್ತಮುತ್ತ ಪತ್ನಿ ಪ್ರಭಾವತಿ ಹುಡುಕಾಡಿದ್ದು, ನಂತರ ನಾಗಸಂದ್ರದಿಂದ ಇಡುಗೂರು ಕಡೆಗೆ ಹೋಗುವ ರಸ್ತೆಯ ತಮ್ಮ ಹೊಲದ ಕಡೆ ಹುಡುಕುತ್ತಾ ಬಂದ ಪತ್ನಿ ಪ್ರಭಾವತಿಗೆ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತಿ ಕಂಡುಬಂದಿರುವುದಾಗಿ ತಿಳಿದು ಬಂದಿದೆ.

ಕೂಡಲೇ ಮೃತ ವ್ಯಕ್ತಿಯ ಅಣ್ಣ-ತಮ್ಮಂದಿರಿಗೆ ಮಾಹಿತಿಯನ್ನು ನೀಡಿದ್ದು, ಸ್ಥಳಕ್ಕೆ ಬಂದು ನೋಡಿದಾಗ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ಇನ್ನು ನರಸಿಂಹಯ್ಯ ತಿಂಗಳಿಗೆ 15,000 ಗಳನ್ನು ಸಾಲದ ಕಂತುಗಳಿಗೆ ಕಟ್ಟುತ್ತಿದ್ದರು. ಹಗಲು ರಾತ್ರಿ ಎನ್ನದೆ ಫೈನಾನ್ಸ್ ನವರು ಮನೆ ಬಳಿ ಬಂದು ಹಣ ಕಟ್ಟಲೇಬೇಕೆಂದು ಬಿಡಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಇನ್ನು ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಠಾಣೆಯ ಪಿಎಸ್ಐ ರಮೇಶ್ ಗುಗ್ಗುರಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Ramesh Babu

Journalist

Recent Posts

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

1 hour ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

12 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

17 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago