ಮೈಕ್ರೋ ಫೈನಾನ್ಸ್ ಕಂಪನಿಯ ಕಿರುಕುಳಕ್ಕೆ ಮನನೊಂದ ಯುವಕ: ಪೊಲೀಸ್ ಠಾಣೆ ಮೆಟ್ಟಿಲೇರಿದ ಯುವಕ

ಮನೆ ಕಟ್ಟುವ ಕಾರಣಕ್ಕೆ ಇದ್ದ ಮನೆಯನ್ನ ಒತ್ತೆ ಇಟ್ಟು 5 ಲಕ್ಷ ಹಣವನ್ನ ಸಾಲ ತೆಗೆದುಕೊಳ್ಳಲಾಗಿತ್ತು, ಅಸಲಿ-ಬಡ್ಡಿ ಸೇರಿ 5 ಲಕ್ಷಕ್ಕೆ 8.5 ಲಕ್ಷ ಹಣವನ್ನು ಕಟ್ಟಿದ್ದರು, ಇಷ್ಟಕ್ಕೆ ಮೈಕ್ರೋ ಫೈನಾನ್ಸ್ ಕಂಪನಿಯ ಹಣದಾಹ ಕಡಿಮೆಯಾಗಿರಲಿಲ್ಲ, ಮತ್ತೆ 60 ಸಾವಿರ ಹಣ ಕಟ್ಟುವಂತೆ ಸಾಲಗಾರನಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ‌ ಕೇಳಿಬಂದಿದೆ.

ದೊಡ್ಡಬಳ್ಳಾಪುರದ ರಾಜೀವ್ ಗಾಂಧಿ ಬಡಾವಣೆಯ ನಿವಾಸಿ ಮೋಹನ್ ಎಂಬ ವ್ಯಕ್ತಿ ಮೈಕ್ರೋ ಫೈನಾನ್ಸ್ ಕಂಪನಿಯ ಕಿರುಕುಳಕ್ಕೆ ಮನನೊಂದಿದ್ದಾರೆ. ಸಾಲದ ಹಣಕ್ಕಿಂತ ಹೆಚ್ಚು ಬಡ್ಡಿ ಹಣ ಕಟ್ಟಿ ಸೋತು ಸುಣ್ಣಾಗಿದ್ದಾರೆ. ಬ್ಯಾಂಕ್ ನವರ ಮಾನಸಿಕ ಕಿರುಕುಳಕ್ಕೆ ಬೇಸತ್ತ ಅವರು ನ್ಯಾಯ ಕೊಡುವಂತೆ ಕರವೇ ಮೊರೆ ಹೋಗಿದ್ದಾರೆ.

2019ರಲ್ಲಿ ಮೋಹನ್ ತಮ್ಮ ತಾಯಿ ಶಶಿಕಲಾ ಹೆಸರಿನಲ್ಲಿ ನಗರದ SMFG ಇಂಡಿಯಾ ಕ್ರೆಡಿಟ್ ಕಂಪನಿ ಲಿಮಿಟೆಡ್ ನಲ್ಲಿ 5 ಲಕ್ಷ ಸಾಲವನ್ನು ತೆಗೆದುಕೊಂಡಿದ್ದರು, ಸಾಲಕ್ಕೆ ಮನೆಯನ್ನ ಒತ್ತೆ ಇಟ್ಟಿದ್ದರು, ಪ್ರತಿ ತಿಂಗಳು 13,530 ರಂತೆ 60 ತಿಂಗಳಲ್ಲಿ ಸಾಲ ತೀರಿಸುವ ಒಪ್ಪಂದ ಮಾಡಿಕೊಂಡಿದ್ದರು, ಕೊರೋನಾ ಸಮಯದಲ್ಲಿ 3 ತಿಂಗಳು ಹೊರತು ಪಡಿಸಿ ಇಲ್ಲಿಯವರೆಗೂ 63 ಕಂತುಗಳನ್ನು ಕಟ್ಟಲಾಗಿದೆ, 5 ಲಕ್ಷ ಸಾಲಕ್ಕೆ 8.5 ಲಕ್ಷ ಹಣವನ್ನ ಕಟ್ಟಲಾಗಿದೆ. ಆದ್ರೆ, ಬ್ಯಾಂಕ್ ನವರು ಮತ್ತೆ 60 ಸಾವಿರ ಹಣ ಕಟ್ಟುವಂತೆ ಕಿರುಕುಳ ಕೊಡುತ್ತಿದ್ದಾರೆಂದು ಮೋಹನ್ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕರವೇ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಪುರುಷೋತ್ತಮ್ ಗೌಡ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು SMFG ಇಂಡಿಯಾ ಕ್ರೆಡಿಟ್ ಕಂಪನಿ ಲಿಮಿಟೆಡ್ ಬಳಿ ತೆರಳಿ ಮೋಹನ್ ಆಗುತ್ತಿರುವ ಅನ್ಯಾಯವನ್ನು ಕೇಳಿದ್ದಾರೆ, ಇದೇ ವೇಳೆ ಮಾಧ್ಯಮ ಜೊತೆಯಲ್ಲಿ ಮಾತನಾಡಿದ ಅವರು, ಮೋಹನ್ ಸಂಪೂರ್ಣ ಹಣವನ್ನು ಕಟ್ಟಿದ್ದಾನೆ, ಆದರೂ ಬ್ಯಾಂಕ್ ನವರು ಸಾಲ ತೀರಿಸುವಂತೆ ಮಾನಸಿಕ ಕಿರುಕಳ ಕೊಡುತ್ತಿರುವುದನ್ನ ನಾವು ಸಹಿಸುವುದಿಲ್ಲ, ಮೋಹನ್ ರವರಿಗೆ ಸೇರಿದ ಮನೆ ಪತ್ರಗಳನ್ನ ವಾಪಸ್ ನೀಡದಿದ್ದಲ್ಲಿ ಬ್ಯಾಂಕ್ ಮುಂದೆ ಉಗ್ರ ಹೋರಾಟ ಮಾಡುವ ಎಚ್ಚರಿಕೆಯನ್ನ ನೀಡಿದರು.

ಸ್ಥಳೀಯರಾದ ಅಂಜಿಯವರು ಮಾತನಾಡಿ, ಮೋಹನ್ ಕೊರೋನಾ ಸಮಯದಲ್ಲಿ 3 ತಿಂಗಳು ಮಾತ್ರ ಕಂತುಗಳನ್ನ ಕಟ್ಟಿರಲಿಲ್ಲ, ಅನಂತರ ಆ ಕಂತುಗಳನ್ನ ಬಡ್ಡಿ ಸಮೇತ ತೀರಿಸಿದ್ದಾರೆ, ಮನೆಪತ್ರಗಳನ್ನ ವಾಪಸ್ ಕೇಳಿದ್ರು ಮತ್ತೆ 60 ಸಾವಿರ ಹಣ ಕಟ್ಟುವಂತೆ ಹೇಳುತ್ತಿದ್ದಾರೆ, ಮನೆಪತ್ರಗಳನ್ನ ವಾಪಸ್ ಕೊಡುವುದಿಲ್ಲವೆಂದು ಹೇಳುತ್ತಿದ್ದಾರೆ, ಬ್ಯಾಂಕ್ ನವರ ಕಿರುಕಳಕ್ಕೆ ಮೋಹನ್ ವಿಷ ಕುಡಿದು ಸಾಯುವುದ್ದಾಗಿ ಹೇಳುತ್ತಿದ್ದಾನೆ ಎಂದರು.

ಕರವೇ ತಾಲೂಕು ಘಟಕ ಅಧ್ಯಕ್ಷರಾದ ಮಂಜುನಾಥ್ ಮಾತನಾಡಿ, ಬ್ಯಾಂಕ್ ನವರು ಹೇಳಿದಂತೆ 60 ಕಂತುಗಳನ್ನ ಕಟ್ಟಲಾಗಿದೆ, ಹೆಚ್ಚುವರಿಯಾಗಿ ಕಟ್ಟಲಾಗಿರುವ 3 ಕಂತುಗಳ ಹಣವನ್ನ ವಾಪಸ್ ಮೋಹನ್ ರವರಿಗೆ ನೀಡ ಬೇಕು, ಅವರ ತಾಯಿ ಸಾವನ್ನಪ್ಪಿದ್ದಾರೆ, ಅವರಿಗೆ ವಿಮೆ ಮಾಡಿಸದೆ ವಂಚನೆ ಮಾಡಿದ್ದಾರೆ, ಸಾಲಗಾರರು ಸಾವನ್ನಪ್ಪಿದ್ದಾಗ ಬಡ್ಡಿಯನ್ನ ಮನ್ನಾ ಮಾಡಬೇಕು, ಆದರೂ ಬ್ಯಾಂಕ್ ನವರು ಹೆಚ್ಚುವರಿ ಹಣ ಸುಲಿಗೆ ಮಾಡಿದ್ದಾರೆ, ಬ್ಯಾಂಕ್ ನವರು ತಮ್ಮ ತಪ್ಪು ತಿದ್ದುಕೊಂಡು ಹಣ ವಾಪಸ್ ನೀಡದಿದ್ದಾರೆ ಬ್ಯಾಂಕ್ ಮುಂದೆ ಪ್ರತಿಭಟನೆ ಎಚ್ಚರಿಕೆಯನ್ನ ನೀಡಿದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

1 hour ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

1 hour ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

3 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

4 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

5 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

12 hours ago