ಮೈಕ್ರೋ ಫೈನಾನ್ಸ್ ಕಂಪನಿಯ ಕಿರುಕುಳಕ್ಕೆ ಮನನೊಂದ ಯುವಕ: ಪೊಲೀಸ್ ಠಾಣೆ ಮೆಟ್ಟಿಲೇರಿದ ಯುವಕ

ಮನೆ ಕಟ್ಟುವ ಕಾರಣಕ್ಕೆ ಇದ್ದ ಮನೆಯನ್ನ ಒತ್ತೆ ಇಟ್ಟು 5 ಲಕ್ಷ ಹಣವನ್ನ ಸಾಲ ತೆಗೆದುಕೊಳ್ಳಲಾಗಿತ್ತು, ಅಸಲಿ-ಬಡ್ಡಿ ಸೇರಿ 5 ಲಕ್ಷಕ್ಕೆ 8.5 ಲಕ್ಷ ಹಣವನ್ನು ಕಟ್ಟಿದ್ದರು, ಇಷ್ಟಕ್ಕೆ ಮೈಕ್ರೋ ಫೈನಾನ್ಸ್ ಕಂಪನಿಯ ಹಣದಾಹ ಕಡಿಮೆಯಾಗಿರಲಿಲ್ಲ, ಮತ್ತೆ 60 ಸಾವಿರ ಹಣ ಕಟ್ಟುವಂತೆ ಸಾಲಗಾರನಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ‌ ಕೇಳಿಬಂದಿದೆ.

ದೊಡ್ಡಬಳ್ಳಾಪುರದ ರಾಜೀವ್ ಗಾಂಧಿ ಬಡಾವಣೆಯ ನಿವಾಸಿ ಮೋಹನ್ ಎಂಬ ವ್ಯಕ್ತಿ ಮೈಕ್ರೋ ಫೈನಾನ್ಸ್ ಕಂಪನಿಯ ಕಿರುಕುಳಕ್ಕೆ ಮನನೊಂದಿದ್ದಾರೆ. ಸಾಲದ ಹಣಕ್ಕಿಂತ ಹೆಚ್ಚು ಬಡ್ಡಿ ಹಣ ಕಟ್ಟಿ ಸೋತು ಸುಣ್ಣಾಗಿದ್ದಾರೆ. ಬ್ಯಾಂಕ್ ನವರ ಮಾನಸಿಕ ಕಿರುಕುಳಕ್ಕೆ ಬೇಸತ್ತ ಅವರು ನ್ಯಾಯ ಕೊಡುವಂತೆ ಕರವೇ ಮೊರೆ ಹೋಗಿದ್ದಾರೆ.

2019ರಲ್ಲಿ ಮೋಹನ್ ತಮ್ಮ ತಾಯಿ ಶಶಿಕಲಾ ಹೆಸರಿನಲ್ಲಿ ನಗರದ SMFG ಇಂಡಿಯಾ ಕ್ರೆಡಿಟ್ ಕಂಪನಿ ಲಿಮಿಟೆಡ್ ನಲ್ಲಿ 5 ಲಕ್ಷ ಸಾಲವನ್ನು ತೆಗೆದುಕೊಂಡಿದ್ದರು, ಸಾಲಕ್ಕೆ ಮನೆಯನ್ನ ಒತ್ತೆ ಇಟ್ಟಿದ್ದರು, ಪ್ರತಿ ತಿಂಗಳು 13,530 ರಂತೆ 60 ತಿಂಗಳಲ್ಲಿ ಸಾಲ ತೀರಿಸುವ ಒಪ್ಪಂದ ಮಾಡಿಕೊಂಡಿದ್ದರು, ಕೊರೋನಾ ಸಮಯದಲ್ಲಿ 3 ತಿಂಗಳು ಹೊರತು ಪಡಿಸಿ ಇಲ್ಲಿಯವರೆಗೂ 63 ಕಂತುಗಳನ್ನು ಕಟ್ಟಲಾಗಿದೆ, 5 ಲಕ್ಷ ಸಾಲಕ್ಕೆ 8.5 ಲಕ್ಷ ಹಣವನ್ನ ಕಟ್ಟಲಾಗಿದೆ. ಆದ್ರೆ, ಬ್ಯಾಂಕ್ ನವರು ಮತ್ತೆ 60 ಸಾವಿರ ಹಣ ಕಟ್ಟುವಂತೆ ಕಿರುಕುಳ ಕೊಡುತ್ತಿದ್ದಾರೆಂದು ಮೋಹನ್ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕರವೇ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಪುರುಷೋತ್ತಮ್ ಗೌಡ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು SMFG ಇಂಡಿಯಾ ಕ್ರೆಡಿಟ್ ಕಂಪನಿ ಲಿಮಿಟೆಡ್ ಬಳಿ ತೆರಳಿ ಮೋಹನ್ ಆಗುತ್ತಿರುವ ಅನ್ಯಾಯವನ್ನು ಕೇಳಿದ್ದಾರೆ, ಇದೇ ವೇಳೆ ಮಾಧ್ಯಮ ಜೊತೆಯಲ್ಲಿ ಮಾತನಾಡಿದ ಅವರು, ಮೋಹನ್ ಸಂಪೂರ್ಣ ಹಣವನ್ನು ಕಟ್ಟಿದ್ದಾನೆ, ಆದರೂ ಬ್ಯಾಂಕ್ ನವರು ಸಾಲ ತೀರಿಸುವಂತೆ ಮಾನಸಿಕ ಕಿರುಕಳ ಕೊಡುತ್ತಿರುವುದನ್ನ ನಾವು ಸಹಿಸುವುದಿಲ್ಲ, ಮೋಹನ್ ರವರಿಗೆ ಸೇರಿದ ಮನೆ ಪತ್ರಗಳನ್ನ ವಾಪಸ್ ನೀಡದಿದ್ದಲ್ಲಿ ಬ್ಯಾಂಕ್ ಮುಂದೆ ಉಗ್ರ ಹೋರಾಟ ಮಾಡುವ ಎಚ್ಚರಿಕೆಯನ್ನ ನೀಡಿದರು.

ಸ್ಥಳೀಯರಾದ ಅಂಜಿಯವರು ಮಾತನಾಡಿ, ಮೋಹನ್ ಕೊರೋನಾ ಸಮಯದಲ್ಲಿ 3 ತಿಂಗಳು ಮಾತ್ರ ಕಂತುಗಳನ್ನ ಕಟ್ಟಿರಲಿಲ್ಲ, ಅನಂತರ ಆ ಕಂತುಗಳನ್ನ ಬಡ್ಡಿ ಸಮೇತ ತೀರಿಸಿದ್ದಾರೆ, ಮನೆಪತ್ರಗಳನ್ನ ವಾಪಸ್ ಕೇಳಿದ್ರು ಮತ್ತೆ 60 ಸಾವಿರ ಹಣ ಕಟ್ಟುವಂತೆ ಹೇಳುತ್ತಿದ್ದಾರೆ, ಮನೆಪತ್ರಗಳನ್ನ ವಾಪಸ್ ಕೊಡುವುದಿಲ್ಲವೆಂದು ಹೇಳುತ್ತಿದ್ದಾರೆ, ಬ್ಯಾಂಕ್ ನವರ ಕಿರುಕಳಕ್ಕೆ ಮೋಹನ್ ವಿಷ ಕುಡಿದು ಸಾಯುವುದ್ದಾಗಿ ಹೇಳುತ್ತಿದ್ದಾನೆ ಎಂದರು.

ಕರವೇ ತಾಲೂಕು ಘಟಕ ಅಧ್ಯಕ್ಷರಾದ ಮಂಜುನಾಥ್ ಮಾತನಾಡಿ, ಬ್ಯಾಂಕ್ ನವರು ಹೇಳಿದಂತೆ 60 ಕಂತುಗಳನ್ನ ಕಟ್ಟಲಾಗಿದೆ, ಹೆಚ್ಚುವರಿಯಾಗಿ ಕಟ್ಟಲಾಗಿರುವ 3 ಕಂತುಗಳ ಹಣವನ್ನ ವಾಪಸ್ ಮೋಹನ್ ರವರಿಗೆ ನೀಡ ಬೇಕು, ಅವರ ತಾಯಿ ಸಾವನ್ನಪ್ಪಿದ್ದಾರೆ, ಅವರಿಗೆ ವಿಮೆ ಮಾಡಿಸದೆ ವಂಚನೆ ಮಾಡಿದ್ದಾರೆ, ಸಾಲಗಾರರು ಸಾವನ್ನಪ್ಪಿದ್ದಾಗ ಬಡ್ಡಿಯನ್ನ ಮನ್ನಾ ಮಾಡಬೇಕು, ಆದರೂ ಬ್ಯಾಂಕ್ ನವರು ಹೆಚ್ಚುವರಿ ಹಣ ಸುಲಿಗೆ ಮಾಡಿದ್ದಾರೆ, ಬ್ಯಾಂಕ್ ನವರು ತಮ್ಮ ತಪ್ಪು ತಿದ್ದುಕೊಂಡು ಹಣ ವಾಪಸ್ ನೀಡದಿದ್ದಾರೆ ಬ್ಯಾಂಕ್ ಮುಂದೆ ಪ್ರತಿಭಟನೆ ಎಚ್ಚರಿಕೆಯನ್ನ ನೀಡಿದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

1 hour ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 hours ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

15 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago