ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲ ವಸೂಲಾತಿಗಾಗಿ ಕಿರುಕುಳ ನೀಡುವುದು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ತುರ್ತು ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡುವಂತೆ ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ. ರಾಮರಾಜನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಧ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ವಯಕ್ತಿಕ ಹಾಗೂ ಜಂಟಿ ಸಾಲವನ್ನು ನೀಡಿ ಸಾಲ ಮರು ಪಾವತಿ ಮಾಡುವ ಸಂದರ್ಭ ದೈಹಿಕ ಹಲ್ಲೆ, ಅವಾಚ್ಯ ಪದಗಳಿಂದ ನಿಂದನೆ ಮಾಡುವುದು, ಸಮಯವಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಹೆದರಿಸಿರುವ ಕುರಿತು ಮಾಹಿತಿ ಬಂದಿದೆ. ಯಾವುದೇ ಹಣಕಾಸು ಸಂಸ್ಥೆಯವರು ಸಾಲ ಪಾವತಿಗಾಗಿ ಜನರಿಗೆ ಹಲ್ಲೆ ನಡೆಸುವುದು, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುವುದು, ಸಮಯವಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಹೆದರಿಸುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಸಲಾಗಿದೆ.
ಯಾವುದೇ ಹಣಕಾಸು ಸಂಸ್ಥೆಯವರು ಸಾಲ ಪಾವತಿಗಾಗಿ ಹಲ್ಲೆ ಮಾಡುವುದು, ಜಗಳ ಮಾಡುವುದು ಮತ್ತು ಸಮಯವಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಹೆದರಿಸುವುದು ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ತುರ್ತು ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಮತ್ತು ಕೆ.ಎಸ್.ಪಿ. ತಂತ್ರಾಂಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕ ರಲ್ಲಿ ಕೋರಲಾಗಿದೆ ಹಾಗೂ ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಒದಗಿಸುವವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ. ರಾಮರಾಜನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…