ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲ ವಸೂಲಾತಿಗಾಗಿ ಕಿರುಕುಳ ನೀಡುವುದು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ತುರ್ತು ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡುವಂತೆ ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ. ರಾಮರಾಜನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಧ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ವಯಕ್ತಿಕ ಹಾಗೂ ಜಂಟಿ ಸಾಲವನ್ನು ನೀಡಿ ಸಾಲ ಮರು ಪಾವತಿ ಮಾಡುವ ಸಂದರ್ಭ ದೈಹಿಕ ಹಲ್ಲೆ, ಅವಾಚ್ಯ ಪದಗಳಿಂದ ನಿಂದನೆ ಮಾಡುವುದು, ಸಮಯವಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಹೆದರಿಸಿರುವ ಕುರಿತು ಮಾಹಿತಿ ಬಂದಿದೆ. ಯಾವುದೇ ಹಣಕಾಸು ಸಂಸ್ಥೆಯವರು ಸಾಲ ಪಾವತಿಗಾಗಿ ಜನರಿಗೆ ಹಲ್ಲೆ ನಡೆಸುವುದು, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುವುದು, ಸಮಯವಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಹೆದರಿಸುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಸಲಾಗಿದೆ.
ಯಾವುದೇ ಹಣಕಾಸು ಸಂಸ್ಥೆಯವರು ಸಾಲ ಪಾವತಿಗಾಗಿ ಹಲ್ಲೆ ಮಾಡುವುದು, ಜಗಳ ಮಾಡುವುದು ಮತ್ತು ಸಮಯವಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಹೆದರಿಸುವುದು ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ತುರ್ತು ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಮತ್ತು ಕೆ.ಎಸ್.ಪಿ. ತಂತ್ರಾಂಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕ ರಲ್ಲಿ ಕೋರಲಾಗಿದೆ ಹಾಗೂ ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಒದಗಿಸುವವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ. ರಾಮರಾಜನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…