Categories: ಕೊಡಗು

ಮೈಕ್ರೋ ಫೈನಾನ್ಸ್ ಗಳಿಂದ ಕಿರುಕುಳ ಆಗುತ್ತಿದೆಯೇ?: ಹಾಗಾದ್ರೆ 112 ಸಂಖ್ಯೆಗೆ ಕರೆ ಮಾಡಿ

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲ ವಸೂಲಾತಿಗಾಗಿ ಕಿರುಕುಳ ನೀಡುವುದು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ತುರ್ತು ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡುವಂತೆ ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ. ರಾಮರಾಜನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವಿಧ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ವಯಕ್ತಿಕ ಹಾಗೂ ಜಂಟಿ ಸಾಲವನ್ನು ನೀಡಿ ಸಾಲ ಮರು ಪಾವತಿ ಮಾಡುವ ಸಂದರ್ಭ ದೈಹಿಕ ಹಲ್ಲೆ, ಅವಾಚ್ಯ ಪದಗಳಿಂದ ನಿಂದನೆ ಮಾಡುವುದು, ಸಮಯವಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಹೆದರಿಸಿರುವ ಕುರಿತು ಮಾಹಿತಿ ಬಂದಿದೆ. ಯಾವುದೇ ಹಣಕಾಸು ಸಂಸ್ಥೆಯವರು ಸಾಲ ಪಾವತಿಗಾಗಿ ಜನರಿಗೆ ಹಲ್ಲೆ ನಡೆಸುವುದು, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುವುದು, ಸಮಯವಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಹೆದರಿಸುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಸಲಾಗಿದೆ.

ಯಾವುದೇ ಹಣಕಾಸು ಸಂಸ್ಥೆಯವರು ಸಾಲ ಪಾವತಿಗಾಗಿ ಹಲ್ಲೆ ಮಾಡುವುದು, ಜಗಳ ಮಾಡುವುದು ಮತ್ತು ಸಮಯವಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಹೆದರಿಸುವುದು ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ತುರ್ತು ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಮತ್ತು ಕೆ.ಎಸ್.ಪಿ. ತಂತ್ರಾಂಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕ ರಲ್ಲಿ ಕೋರಲಾಗಿದೆ ಹಾಗೂ ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಒದಗಿಸುವವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ. ರಾಮರಾಜನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

4 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

4 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

6 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

7 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

8 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

15 hours ago