ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲ ವಸೂಲಾತಿಗಾಗಿ ಕಿರುಕುಳ ನೀಡುವುದು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ತುರ್ತು ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡುವಂತೆ ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ. ರಾಮರಾಜನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಧ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ವಯಕ್ತಿಕ ಹಾಗೂ ಜಂಟಿ ಸಾಲವನ್ನು ನೀಡಿ ಸಾಲ ಮರು ಪಾವತಿ ಮಾಡುವ ಸಂದರ್ಭ ದೈಹಿಕ ಹಲ್ಲೆ, ಅವಾಚ್ಯ ಪದಗಳಿಂದ ನಿಂದನೆ ಮಾಡುವುದು, ಸಮಯವಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಹೆದರಿಸಿರುವ ಕುರಿತು ಮಾಹಿತಿ ಬಂದಿದೆ. ಯಾವುದೇ ಹಣಕಾಸು ಸಂಸ್ಥೆಯವರು ಸಾಲ ಪಾವತಿಗಾಗಿ ಜನರಿಗೆ ಹಲ್ಲೆ ನಡೆಸುವುದು, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುವುದು, ಸಮಯವಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಹೆದರಿಸುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಸಲಾಗಿದೆ.
ಯಾವುದೇ ಹಣಕಾಸು ಸಂಸ್ಥೆಯವರು ಸಾಲ ಪಾವತಿಗಾಗಿ ಹಲ್ಲೆ ಮಾಡುವುದು, ಜಗಳ ಮಾಡುವುದು ಮತ್ತು ಸಮಯವಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಹೆದರಿಸುವುದು ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ತುರ್ತು ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಮತ್ತು ಕೆ.ಎಸ್.ಪಿ. ತಂತ್ರಾಂಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕ ರಲ್ಲಿ ಕೋರಲಾಗಿದೆ ಹಾಗೂ ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಒದಗಿಸುವವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ. ರಾಮರಾಜನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…